ಚಾಮರಾಜನಗರ: ಕೆಲ ದಿನಗಳ ಹಿಂದೆ ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ಬಳಿಯ ದರ್ಗಾದ ಬಳಿ ಅಪರಿಚಿತ ಶವವೊಂದು ಪತ್ತೆಯಾಗಿತ್ತು. ಈ ಶವ ಯಾರದ್ದು ಎಂಬ ಬಗ್ಗೆ ಪೊಲೀಸರು ತಲೆ ಕೆಡಿಸಿಕೊಂಡಿದ್ದರು. ಈ ಕೊಲೆ ರಹಸ್ಯವನ್ನು ಕೊನೆಗೂ ಪೊಲೀಸರು ಭೇದಿಸಿದ್ದಾರೆ.
ಬೇರೊಬ್ಬನ‌ ಹೆಂಡ್ತಿ ಜೊತೆಗೆ ಅಕ್ರಮ ಸಂಬಂಧ ಹೊಂದಿರುವ ಕಾರಣ ಆಟೋ ಚಾಲಕನ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ರಾಮನಗರ ಮೂಲದ ಸೈಯದ್ ಮುಜಾಯಿದ್ ಅಲಿಯಾಸ್​ ಬರ್ನಿಂಗ್ ಬಾಬಾ ಕೊಲೆಯಾದ ವ್ಯಕ್ತಿ. ಈತ ರಾಮನಗರದ ಸೈಯದ್ ಸಿಕಂದರ್ ಪತ್ನಿ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ದರ್ಗಾದ ಬಳಿ ಕೊಲೆ ಮಾಡಲಾಗಿತ್ತು. ತಲೆ ಮೇಲೆ ಕಲ್ಲು ಎತ್ತಿ ಹಾಕಿ‌ ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸೈಯದ್ ಸಿಕಂದರ್, ಮುಸಾವೀರ್, ಶೌಕತ್ ಅಲಿ,ಹಬೀಬ್ ವುಲ್ಲಾ, ಸೈಯದ್ ಸಲೀಂ ಬಂಧಿತ ಆರೋಪಿಗಳು. ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕೊಡಲಾಗಿದೆ.
ನೌಕರನ ಹೆಂಡ್ತಿ ಕಾಟಕ್ಕೆ ಬರ್ಬರವಾಗಿ ಕೊಲೆಯಾದ ಮಾಲೀಕ: ಬಯಲಾಯ್ತು ಬೆಂಗಳೂರು ಉದ್ಯಮಿಯ ಮರ್ಡರ್​ ರಹಸ್ಯ!

ವಯಾಗ್ರ ತಂದ ಆಪತ್ತು- ಅತಿಯಾಗಿ ಸೇವಿಸಿ ಜೀವನಪೂರ್ತಿ ಪೇಚಿಗೆ ಸಿಲುಕಿದ ನವವಿವಾಹಿತ: ವೈದ್ಯರ ಎಚ್ಚರಿಕೆ

ಗಂಡ-ಹೆಂಡ್ತಿ ಮಧ್ಯೆ ಜಗಳ ತಂದಿಟ್ಟ ಮ್ಯಾಗಿ! ಬಳ್ಳಾರಿ ಯುವಕನ ಕಷ್ಟ ನೋಡಲಾಗದೇ ಡಿವೋರ್ಸ್​ ಕೊಟ್ಟ ಕೋರ್ಟ್​

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seven + 5 =
Remember me
