ಮೈಸೂರು:ಕರೊನಾ ವೈರಸ್‌ ನಡುವೆಯೂ ಭಕ್ತರ ಆಶಯದ ಮೇರೆಗೆ ಮೈಸೂರಿನ ಪ್ರಸಿದ್ಧ ಚಾಮುಂಡಿ ದೇವಾಲಯದ ದರ್ಶನದ ಭಾಗ್ಯವನ್ನು ನೀಡಲಾಗಿದೆ.
ಆದರೆ ನಾಡಿದ್ದು ಅಂದರೆ 19 ಮತ್ತು 21 ರಂದು ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ದೇವಸ್ಥಾನ ಹೇಳಿದೆ.
19ರ ಬುಧವಾರ ಅಮಾವಾಸ್ಯೆ ಹಾಗೂ ಶುಕ್ರವಾರ ಸ್ವರ್ಣಗೌರಿ ವೃತ ಇದೆ. ಈ ಹಿನ್ನೆಲೆಯಲ್ಲಿ ಸಹಜವಾಗಿ ಬೆಟ್ಟಕ್ಕೆ ಬರುವ ಭಕ್ತರು ಹೆಚ್ಚಾಗುತ್ತಾರೆ. ಅವರನ್ನು ಈ ಸಮಯದಲ್ಲಿ ತಡೆಯುವುದು ಕಷ್ಟವಾಗುತ್ತದೆ. ಸಾಮಾಜಿಕ ಅಂತರ ಹಾಗೂ ಕರೊನಾ ನಿಯಮಗಳ ಪಾಲನೆ ಕಷ್ಟವಾಗುತ್ತದೆ. ಈ ಹಿನ್ನೆಲೆಯಲ್ಲಿ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್.ಜಿ.ಶಂಕರ್ ಹೇಳಿದ್ದಾರೆ.
ಇದನ್ನೂ ಓದಿ:ಪುಟಾಣಿಗಳ ರಕ್ಷಣೆಗೆ ಧಾವಿಸಿದ ನಟ ಶಶಿಕುಮಾರ್
ಈ ಬಗ್ಗೆ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿಗಳು, 19 ಮತ್ತು 21ರಂದು ಭಕ್ತರು ಇಲ್ಲಿಗೆ ಆಗಮಿಸದಂತೆ ಮನವಿ ಮಾಡಿಕೊಂಡಿದ್ದಾರೆ.
ಮೈಸೂರಿನಲ್ಲಿ ಕರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆದ್ದರಿಂದ ಎಲ್ಲಾ ದೇವಸ್ಥಾನಗಳ ಮೇಲೆ ಕಟ್ಟೆಚ್ಚರ ವಹಿಸಲಾಗುತ್ತಿದೆ.
ಅದರಲ್ಲಿಯೂ ಭಕ್ತರ ಸಂಖ್ಯೆ ಹೆಚ್ಚಿರುವ ಚಾಮುಂಡಿ ಬೆಟ್ಟದ ಕುರಿತು ಇದಾಗಲೇ ಸಕಲ ಎಚ್ಚರಿಕೆ ವಹಿಸಲಾಗಿದೆ. ಆದರೆ ಭಕ್ತರ ಸಂಖ್ಯೆ ಏಕಾಏಕಿ ಹೆಚ್ಚಿದಾಗ ಅವರನ್ನು ನಿಯಂತ್ರಣ ಮಾಡುವುದು ಕಷ್ಟ ಎಂಬ ಕಾರಣಕ್ಕೆ ಈ ರೀತಿ ನಿಲುವು ತಳೆಯಲಾಗಿದೆ.
ಅಮ್ಮನ ಕದ್ದೊಯ್ದ ಗೋಕಳ್ಳರು- ವಾಹನ ಹಿಂಬಾಲಿಸಿದ ಕರು- ಸಿಸಿಟಿಯಲ್ಲಿ ವಿಡಿಯೋ ಸೆರೆ

ಹಿಂದು ದೇವರ ಬಗ್ಗೆ ಕೆಟ್ಟ ಪೋಸ್ಟ್ ಹಾಕಿದ್ರು, ಅವರಿಗೆ ತಿರುಗೇಟು ನೀಡುವಂತೆ ಕಮೆಂಟ್ ಮಾಡಿದ್ದಕ್ಕೆ ಈ ರಾದ್ಧಾಂತ ಎಂದ ನವೀನ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
