ಚಿಕ್ಕೋಡಿ:ಗಂಡನ ಅನೈತಿಕ ಸಂಬಂಧದಿಂದ ಬೇಸತ್ತು ತವರು ಸೇರಿದ ಪತ್ನಿಯ ಮೇಲೆ ಆತ ಗುಂಡು ಹಾರಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ.
ತವರು ಮನೆಯಿಂದ ವಾಪಸ್​ ಬರುವಂತೆ ಪತ್ನಿಯ ಮೇಲೆ ಹಲ್ಲೆ ಮಾಡಿ ಅವರ ಮೇಲೆ ಗುಂಡು ಹಾರಿಸಿರುವ ಆರೋಪವನ್ನು ಶಿವಾನಂದ ಕಾಗಲೆ (4೦) ಎದುರಿಸುತ್ತಿದ್ದಾನೆ. ಪತ್ನಿ ಪ್ರೀತಿ ಗಂಡನ ಅನೈತಿಕ ಸಂಬಂಧದಿಂದ ಬೇಸತ್ತು ತವರು ಮನೆ ಸೇರಿದ್ದರು.
ಅವರ ಮನೆಗೆ ಹೋಗಿದ್ದ ಶಿವಾನಂದ ಕಾಗಲೆ, ವಾಪಸಾಗುವಂತೆ ಪತ್ನಿಯ ಮೇಲೆ ಗುಂಡು ಹಾರಿಸಿದ್ದಾನೆ. ಒಂದು ವೇಳೆ ವಾಪಸ್​ ಆಗದಿದ್ದರೆ ಇದೇ ಗುಂಡಿನಿಂದ ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಆದರೆ ಗುಂಡಿನಿಂದ ತಪ್ಪಿಸಿಕೊಂಡು ಪತ್ನಿ ಪ್ರೀತಿ ಪ್ರಾಣ ಉಳಿಸಿಕೊಂಡಿದ್ದಾರೆ.
ಶಿವಾನಂದ್​ ಮತ್ತು ಪ್ರೀತಿ ಅವರ ಮದುವೆ ಕಳೆದ ನಾಲ್ಕು ವರ್ಷಗಳ ಹಿಂದೆ ನಡೆದಿತ್ತು. ಆದರೆ ಶಿವಾನಂದ ಬೇರೊಬ್ಬಳ ಜತೆ ಅನೈತಿಕ ಸಂಬಂಧ ಹೊಂದಿದ್ದ. ಇದರಿಂದ ದಂಪತಿ ನಡುವೆ ಜಗಳವಾಗುತ್ತಿತ್ತು. ಪತಿಯ ಕೃತ್ಯದಿಂದ ಬೇಸತ್ತ ಪ್ರೀತಿ ಅವರು. ಬೆಳಗಾವಿ ಜಿಲ್ಲೆಯ ಅಥಣಿಗೆ ಬಂದು ತಾಯಿಯೊಂದಿಗೆ ವಾಸವಿದ್ದರು.
ಅವರ ಮನೆಗೆ ಹೋದ ಪತಿ, ನೀನು ಮನೆಗೆ ಬರಲೇಬೇಕು ಅಂತ ಪಿಸ್ತೂಲ್​ನಿಂದ ಗುಂಡು ಹಾರಿಸಿದ್ದಾನೆ. ಎರಡು ಗುಂಡು ಹಾರಿಸಿ ನಾಲ್ಕು ಗುಂಡು ಬಾಕಿ ಇಟ್ಟುಕೊಂಡಿದ್ದ ಶಿವಾನಂದ, ಮನೆಗೆ ಬರಲಿಲ್ಲವೆಂದರೆ ಎರಡು ಗುಂಡು ನಿನಗೆ ಹಾರಿಸಿ ಎರಡು ಗುಂಡು ನಾನು ಹಾರಿಸಿಕೊಳ್ತಿನಿ ಅಂತ ಧಮ್ಕಿ ಹಾಕಿದ್ದಾನೆ. ಇಬ್ಬರೂ ಸೇರಿ ಸತ್ತು ಹೋಗೊಣ ಎಂದು ಹೇಳಿದ್ದಾನೆ.
ಪತಿಯಿಂದ ತಪ್ಪಿಸಿಕೊಂಡು ಹೋದ ಪತ್ನಿ ಪ್ರೀತಿ ಪೊಲೀಸರಲ್ಲಿ ದೂರು ದಾಖಲು ಮಾಡಿದ್ದಾರೆ. ಪತ್ನಿ ನೀಡಿದ ದೂರಿನನ್ವಯ ಶಿವಾನಂದ ಬಂಧಿಸಿದ ಅಥಣಿ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.(ದಿಗ್ವಿಜಯ ನ್ಯೂಸ್​)
ಕೋಟ್ಯಂತರ ರೂಪಾಯಿ ಅಕ್ರಮ ವಹಿವಾಟು: ಜರ್ಮನಿಗೆ ಎಸ್ಕೇಪ್​ ಆಗಿದ್ದ ಬಿಷಪ್ ಪೊಲೀಸರ ಬಲೆಗೆ! ​

ಒಂದು ಕುಂಬಳಕಾಯಿಗೆ 47 ಸಾವಿರ ರೂಪಾಯಿ! ಇದ್ಯಾಕೆ ಅಂತೀರಾ? ಇಲ್ಲಿದೆ ನೋಡಿ ವಿಶೇಷತೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
