ದೇವನಹಳ್ಳಿ:ಮಗಳನ್ನು ಮದುವೆಯಾಗದೇ ಪಾಪು ಕೊಟ್ಟ ಅಳಿಯನಿಗೆ ಮದುವೆಯಾಗುವಂತೆ ಒತ್ತಾಯ ಮಾಡಿದ್ದಕ್ಕೆ ಈ ಅಳಿಯ ಹೆಂಡತಿಯನ್ನು ಮಾತ್ರವಲ್ಲದೇ ಆಕೆಯ ತಾಯಿಯನ್ನೂ ಕೊಲೆ ಮಾಡಿರುವ ಭೀಕರ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ.
ನಿನ್ನೆ ಮಧ್ಯರಾತ್ರಿ ಈ ಭಯಾನಕ ಕೃತ್ಯ ದೇವನಹಳ್ಳಿ ತಾಲ್ಲೂಕಿನ ಬೈಚಾಪುರದಲ್ಲಿ ಜರುಗಿದ್ದು, ನಂತರ ಆರೋಪಿ ಪಾಪುವಿನ ಜತೆ ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ!
ಒಡಿಶಾ ಮೂಲದ ಮಲಯ ಫರಿದ್​ ಎಂಬ 40 ವರ್ಷದ ವ್ಯಕ್ತಿ ಈ ಕೊಲೆ ಮಾಡಿರುವ ಆರೋಪಿ. ಈತನ ಕೃತ್ಯಕ್ಕೆ ಅತ್ತೆ ಲಕ್ಷ್ಮಿ ದೇವಿ (50) ಹಾಗೂ ಪತ್ನಿ ರಮಾದೇವಿ (30) ಪಟ್ಟಿದ್ದಾರೆ.
ಮಲಯ ಮತ್ತು ರಮಾದೇವಿ ಒಟ್ಟಿಗೇ ಇದ್ದರು. ಆದರೆ ಮದುವೆಯಾಗಿರಲಿಲ್ಲ. ಅವರಿಗೆ ಐದು ತಿಂಗಳ ಮಗು ಇತ್ತು. ಇದೇ ಕಾರಣಕ್ಕೆ ಅಳಿಯ ಎಲ್ಲಿ ತನ್ನ ಮಗಳಿಗೆ ಕೈಕೊಟ್ಟು ಹೋಗುತ್ತಾನೋ ಎನ್ನುವ ಭಯದಲ್ಲಿ ರಮಾದೇವಿಯ ಅಮ್ಮ ಲಕ್ಷ್ಮಿ ಅವರು, ಮಗಳನ್ನು ಮದುವೆಯಾಗುವಂತೆ ಮಲಯನಿಂದ ಒತ್ತಾಯ ಮಾಡುತ್ತಿದ್ದರು. ಇದರಿಂದ ಕುಪಿತಗೊಂಡ ಆರೋಪಿ ಮಧ್ಯರಾತ್ರಿ ಅತ್ತೆ ಕತ್ತು ಕೊಯ್ದು ಕೊಂದಿದ್ದಾನೆ. ನಂತರ ವಿಚಾರವನ್ನು ಹೆಂಡತಿಯನ್ನು ಎಬ್ಬಿಸಿ ತಿಳಿಸಿದ್ದಾನೆ.
ವಿಷಯ ತಿಳಿದು ಗಾಬರಿಯಿಂದ ಕಿರುಚಿದ ಪತ್ನಿಯನ್ನು ಸಹ ನಂತರ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ನಂತರ ಆತನೇ ಪೊಲೀಸರಿಗೆ ಶರಣಾಗಿದ್ದಾನೆ. ಪೊಲೀಸರು ತನಿಖೆ ಕೈಗೊಂಡಿದ್ದು, ಮರಣೊತ್ತರ ಪರೀಕ್ಷೆಗೆ ಮೃತ ದೇಹವನ್ನು ರವಾನಿಸಿದ್ದಾರೆ.
VIDEO: ಬಾಲಾಕೋಟ್​ ಏರ್​ಸ್ಟ್ರೈಕ್​ ಸಾಕ್ಷಿ ಕೇಳಿದವರಿಗೆ ಪಾಕ್​ ನೀಡಿದೆ ಸ್ಫೋಟಕ ಮಾಹಿತಿ- ನೀವೂ ಕೇಳಿ…

ಕಗ್ಗತ್ತಲಿನಲ್ಲಿ ಪಾಕಿಸ್ತಾನ: ಜನಜೀವನ ಹರೋಹರ- ಅಧಿಕಾರಿಗಳ ಹೆಣಗಾಟ

ನೆನಪಿರಲಿ, ಹುಡುಗರೂ ಸೇಫ್​ ಅಲ್ಲ… ಕೆಲಸದ ಆಮಿಷ ಒಡ್ಡಿ ಯುವಕನ ಮೇಲೆ ಗ್ಯಾಂಗ್​ರೇಪ್​!

ಅಮ್ಮಾ ಚಾಮುಂಡಿ … ಉರುಳು ಸೇವೆ ಮಾಡ್ತೀನಿ… ನಮ್​ ನೆಚ್ಚಿನ ನಟಿಗೆ ಏನೂ ಮಾಡಬೇಡಮ್ಮಾ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen − 4 =
Remember me
