ಬೆಂಗಳೂರು:ಹೋರಾಟ ಹಾಗೂ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಿಜೆಪಿ ನಾಯಕರು ಹಾಗೂ ಬೆಂಬಲಿಗರ ವಿರುದ್ಧ ದಾಖಲಾದ ಗಂಭೀರ ಸ್ವರೂಪದ ಪ್ರಕರಣಗಳನ್ನು ವಾಪಾಸು ಪಡೆಯಲು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ನಿರ್ಧರಿಸಿತ್ತು. ಈ ಹಿನ್ನೆಲೆಯಲ್ಲಿ ಆಗಸ್ಟ್​ 31ರಂದು ಆದೇಶ ಹೊರಡಿಸಿದ್ದ ಸರ್ಕಾರ, 62 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆದಿತ್ತು.
ವೈಯಕ್ತಿಕ ಪ್ರಕರಣಗಳು ಹಾಗೂ ಗಂಭೀರ ಸ್ವರೂಪದ ಮೊಕದ್ದಮೆಗಳನ್ನು ರದ್ದು ಮಾಡಿಲ್ಲ ಎಂದು ಸರ್ಕಾರ ಸ್ಪಷ್ಟನೆ ನೀಡುವ ಮೂಲಕ, ತನ್ನ ಆದೇಶವನ್ನು ಸಮರ್ಥಿಸಿಕೊಂಡಿತ್ತು. ಇದರಲ್ಲಿ ಮೈಸೂರು ಸಂಸದ ಪ್ರತಾಪ್‌ ಸಿಂಹ, ರೇಣುಕಾಚಾರ್ಯ ಅವರ ಬೆಂಬಲಿಗರ ಕೇಸ್​, ಸಚಿವ ಬಿ.ಸಿ.ಪಾಟೀಲ್ ಸೇರಿದಂತೆ ಅನೇಕ ನಾಯಕರು ಹಾಗೂ ಅವರ ಬೆಂಬಲಿಗರ ಕೇಸ್​ಗಳು ಸೇರಿದ್ದವು.
ಸರ್ಕಾರದ ಈ ನಿರ್ಧಾರ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಇದಾಗಲೇ ಡಿಜಿ, ಐಜಿಪಿ ಕಚೇರಿ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ, ಕಾನೂನು ಇಲಾಖೆಗಳು ಕೂಡ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದವು. ಅಷ್ಟೇ ಅಲ್ಲದೇ ಈ ಪ್ರಕರಣ ಹೈಕೋರ್ಟ್​ ಮೆಟ್ಟಿಲೇರಿತ್ತು. ಪೀಪಲ್​ ಯೂನಿಯನ್​ ಫಾರ್​ ಸಿವಿಲ್​ ಲಿಬರ್ಟೀಸ್​ ಸಂಘಟನೆ ಸರ್ಕಾರದ ಆದೇಶವನ್ನು ಹೈಕೋರ್ಟ್​ನಲ್ಲಿ ಪ್ರಶ್ನಿಸಿತ್ತು.
ಇಂದು ಇದರ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ನೇತೃತ್ವದ ಪೀಠವು, ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ಆಗಸ್ಟ್​ 31ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಅನ್ವಯ ಮುಂದಿನ ಯಾವುದೇ ಪ್ರಕ್ರಿಯೆ ನಡೆಸದಂತೆ ನ್ಯಾಯಮೂರ್ತಿಗಳು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಸರ್ಕಾರಕ್ಕೆ ಭಾರೀ ಹಿನ್ನಡೆಯಾದಂತಾಗಿದೆ.
2017ರಂದು ಹುಣಸೂರು ಪಟ್ಟಣದಲ್ಲಿ ಹನುಮ ಜಯಂತಿ ಪ್ರಯುಕ್ತ ಮೈಸೂರು ಸಂಸದ ಪ್ರತಾಪ್‌ ಸಿಂಹ ನೇತೃತ್ವದಲ್ಲಿ 114 ನಿಷೇಧಾಜ್ಞೆ ಇದ್ದರೂ ಮೆರವಣಿಗೆ ನಡೆಸಲಾಗಿತ್ತು. ಈ ವೇಳೆ ಪ್ರತಾಪ್ ಸಿಂಹ ಬ್ಯಾರಿಕೇಡ್ ಮೇಲೆ ಕಾರನ್ನು ವೇಗವಾಗಿ ನುಗ್ಗಿಸಿದ ಆರೋಪಕ್ಕೊಳಗಾಗಿದ್ದರು. ಆದ್ದರಿಂದ ಇವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.
ಅದರಂತೆ, ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕಾಗಿ ಬಿಜೆಪಿ ಬೆಂಬಲಿಗರು ಹೊನ್ನಾಳಿ ಪಟ್ಟಣದಲ್ಲಿ ಜೈಕಾರ ಹಾಕುತ್ತಾ ಗುಂಪು ಕಟ್ಟಿಕೊಂಡಿದ್ದರು. ಈ ವೇಳೆ ಕಾಂಗ್ರೆಸ್​ ಕಾರ್ಯಕರ್ತರ ಜತೆ ಜಗಳವಾಗಿತ್ತು. ಆಗ ರೇಣುಕಾಚಾರ್ಯ ಬೆಂಬಲಿಗರು, ಅಲ್ಲಿ ಜಗಳವಾಡಿ ಇಬ್ಬರಿಗೆ ಚಾಕು ಇರಿದಿರುವ ಆರೋಪವಿದೆ.ಈ ಪ್ರಕರಣಗಳೂ ಸೇರಿದಂತೆ ಹಲವಾರು ಕ್ರಿಮಿನಲ್​ ಪ್ರಕರಣಗಳನ್ನು ಕೈಬಿಡಲು ಯಡಿಯೂರಪ್ಪ ಸರ್ಕಾರ ನಿರ್ಧರಿಸಿತ್ತು.
ಮಕ್ಕಳಾಗಿಲ್ಲವೆಂದು ಇನ್ನೊಂದು ಮದ್ವೆಯಾದರೆ ಇಬ್ರಿಗೂ ಮಕ್ಕಳಾದವು: ಈಗ ಆಸ್ತಿಯ ಭಾಗ ಹೇಗೆ?

ಹೆಸರು ತಂದಿಟ್ಟ ಗ್ರಹಚಾರ: ಜಾಮೀನು ಸಿಕ್ಕರೂ ಎಂಟು ತಿಂಗಳು ಮಾಡಲಿಲ್ಲ ಬಿಡುಗಡೆ!

ಕರಿದುಳಿದ ಎಣ್ಣೆಗೆ ಡಾಲ್ಡಾ ಸೇರಿಸಿ ಪರಿಶುದ್ಧ ತುಪ್ಪ ಎಂದರು…ಆಹಾ! ಘಮಘಮ ಎಂದು ವಿಷ ತಿಂದ ಜನ

ಲಿವ್​ ಇನ್ ಹೆಸರಲ್ಲಿ ಗರ್ಭಿಣಿ ಮಾಡಿ ಬೀದಿಗೆ ಬಿಟ್ಟಿದ್ದಾನೆ- ಆತ್ಮಹತ್ಯೆ ಬಿಟ್ಟು ಬೇರೆನು ಮಾಡಲಿ?

400 ವರ್ಷಗಳ ಬಳಿಕ ಆಗಸದಲ್ಲಿ ಇಂದು ಕೌತುಕ- ನೀವೂ ಕಣ್ತುಂಬಿಸಿಕೊಳ್ಳಬಹುದು ಈ ‘ಮಹಾ ಸಂಯೋಗ’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + ten =
Remember me
