ಬೆಂಗಳೂರು:ಆನ್‌ ಲೈನ್‌ ಮೂಲಕ ಬೆಸ್ಕಾಂ ಗ್ರಾಹಕರನ್ನು ವಂಚಿಸಿ ಹಣ ವಸೂಲಿ ಮಾಡುತ್ತಿರುವ ಸೈಬರ್‌ ವಂಚಕರ ಜಾಲದ ವಿರುದ್ಧ ಕ್ರಮ ಜರಗಿಸಲು ಕೋರಿ ಸೈಬರ್‌ ಕ್ರೈಂ ಠಾಣೆಗೆ ಬೆಸ್ಕಾಂ ದೂರು ನೀಡಿದೆ.
ಸೈಬರ್‌ ವಂಚಕರ ಕುರಿತು ಬೆಸ್ಕಾಂ ತನ್ನ ಗ್ರಾಹಕರಿಗೆ ಸಾಕಷ್ಟು ಅರಿವು ಮೂಡಿಸುತ್ತಿದ್ದರೂ, ಗ್ರಾಹಕರು ಸೈಬರ್‌ ವಂಚಕರ ಮೋಸದ ಜಾಲಕ್ಕೆ ಸಿಲುಕುತ್ತಿದ್ದಾರೆ. ವಿದ್ಯುತ್‌ ಶುಲ್ಕ ಪಾವತಿಸುವಂತೆ ಎಸ್‌ಎಂಎಸ್‌ ಬಂದಿರುವ ಕುರಿತು ಸುಮಾರು 16 ಗ್ರಾಹಕರು ಜೂನ್‌ ಮತ್ತು ಜುಲೈ ತಿಂಗಳಲ್ಲಿ 1912 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು.
ಗ್ರಾಹಕರ ಮಾಹಿತಿ ಆಧರಿಸಿ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿರುವ ಸೈಬರ್‌ ಅಪರಾಧ ವಿಭಾಗದಲ್ಲಿ ದೂರು ದಾಖಲಿಸಲಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
“ಸೈಬರ್‌ ವಂಚಕರು ಬೆಸ್ಕಾಂ ಹೆಸರಿನಲ್ಲಿ ಗ್ರಾಹಕರಿಗೆ ಎಸ್‌ಎಂಎಸ್‌ ಕಳುಹಿಸಿ, ವಿದ್ಯುತ್‌ ಬಿಲ್‌ ಪಾವತಿಸದಿದ್ದರೆ ನಿಮ್ಮ ವಿದ್ಯುತ್‌ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡುತ್ತಿದ್ದಾರೆ. ವಿದ್ಯುತ್‌ ಸಂಪರ್ಕ ಕಡಿತವಾಗುತ್ತದೆ ಎಂಬ ಭಯದಿಂದ ಗ್ರಾಹಕರು ತಕ್ಷಣವೇ ಆನ್‌ ಲೈನ್‌ ಮೂಲಕ ಹಣ ಪಾವತಿಸಿ ಮೋಸ ಹೋಗುತ್ತಿದ್ದಾರೆ” ಎಂದು ಬೆಸ್ಕಾಂ ನ ಪ್ರಧಾನ ವ್ಯವಸ್ಥಾಪಕ (ಗ್ರಾಹಕ ಸಂಬಂಧ) ಎಸ್. ಆರ್. ನಾಗರಾಜ ಅವರು ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ದೂರು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿರುವ ಸೈಬರ್‌ ಅಪರಾಧ ವಿಭಾಗದ ಪೊಲೀಸರು, ಗ್ರಾಹಕರಿಗೆ ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶದಿಂದ ಗ್ರಾಹಕರಿಗೆ ಎಸ್‌ ಎಂಎಸ್‌ ಮತ್ತು ಕರೆಗಳು ಬಂದಿದ್ದು, ತನಿಖೆ ಆರಂಭಿಸಿದ್ದೇವೆ ಎಂದು ತಿಳಿಸಿದ್ದಾರೆ.
ಇದೊಂದು ಸಂಘಟಿತ ಅಪರಾಧವಾಗಿದ್ದು, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಪೊಲೀಸರ ಜೊತೆಗೆ ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ಸೈಬರ್‌ ಅಪರಾಧ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ಸೈಬರ್‌ ವಂಚನೆ ವಿವರ: ಬೆಸ್ಕಾಂ ಗ್ರಾಹಕರಿಗೆ ಅನಾಮಧೇಯ ಸಂಖ್ಯೆಗಳಿಂದ ಎಸ್‌ಎಂಎಸ್‌ ಗಳು ಬರುತ್ತಿದ್ದು, ಗ್ರಾಹಕರು ಎಸ್‌ಎಂಎಸ್‌ ಕಳುಹಿಸಿದ ಸಂಖ್ಯೆಗೆ ಕರೆ ಮಾಡಿದ ತಕ್ಷಣ ಸೈಬರ್‌ ವಂಚಕರು ಹಿಂದಿ ಭಾಷೆಯಲ್ಲಿ ವ್ಯವಹರಿಸಿ ಗ್ರಾಹಕರಿಗೆ ಆನ್​ಲೈನ್​ನಲ್ಲಿ ಹಣ ಪಾವತಿಸಲು ಲಿಂಕ್‌ ಕಳುಹಿಸಿ ಹಣ ಲಪಟಾಯಿಸುತ್ತಾರೆ. ಸೈಬರ್‌ ವಂಚಕರ ಟಾರ್ಗೆಟ್‌ ಐಟಿ ಉದ್ಯೋಗಿಗಳಾಗಿರುವುದು ಬೆಳಕಿಗೆ ಬಂದಿದೆ.
ವಿದ್ಯುತ್‌ ಬಿಲ್‌ ಪಾವತಿಸುವಂತೆ ಬೆಸ್ಕಾಂ ತನ್ನ ಗ್ರಾಹಕರಿಗೆ ಎಸ್‌ಎಂಎಸ್‌ ಕಳುಹಿಸುವುದಿಲ್ಲ ಅಥವಾ ಕರೆ ಮಾಡುವುದಿಲ್ಲ.
ಬೆಸ್ಕಾಂ ತನ್ನ ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ಮತ್ತು ಟ್ವಿಟರ್ ಖಾತೆಗಳಲ್ಲಿ, ಆನ್ ಲೈನ್ ವಂಚನೆ ಬಗ್ಗೆ ಗ್ರಾಹಕರಿಗೆ ನಿರಂತರ ಮಾಹಿತಿ ನೀಡುತ್ತಿದ್ದು, ಗ್ರಾಹಕರು ವಿದ್ಯುತ್ ಬಿಲ್ ಗಳನ್ನು ಬೆಸ್ಕಾಂ ಸೂಚಿಸಿರುವ ಪಾವತಿ ಕೇಂದ್ರ,ಗಳಾದ ಬೆಂಗಳೂರು ಒನ್, ಬೆಸ್ಕಾಂ ಮಿತ್ರ ಆ್ಯಪ್, ಬೆಸ್ಕಾಂ ಕಚೇರಿ ಮತ್ತು ಬೆಸ್ಕಾಂ ವೆಬ್ ಸೈಟ್ ಮೂಲಕವೇ ಹಣ ಪಾವತಿಸಲು ಕೋರಲಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಸಚಿವ ಮನ್ಸೂರ್​ ದೇಗುಲ ಪ್ರವೇಶಿಸಿದ ಹಿಂದಿದ್ಯಾ ಬೇರೆ ಉದ್ದೇಶ? ಅರ್ಚಕರಿಗೆ ಸಂದೇಹ ಶುರುವಾಗಿದ್ದೇಕೆ?

ಬಿಗ್​ಬಾಸ್​ ಸ್ಪರ್ಧಿ, ಖ್ಯಾತ ನೃತ್ಯಗಾತಿ ಸಪ್ನಾಗೆ ಬಂಧನದ ಭೀತಿ: ಕೋರ್ಟ್​ನಿಂದ ವಾರೆಂಟ್​ ಜಾರಿ​

ಪುನಃ ವಿದೇಶಕ್ಕೆ ಹಾರಲಿದೆ ಸೋನಿಯಾ ಕುಟುಂಬ! ಚುನಾವಣೆ ನಿರ್ಧಾರದ ಬೆನ್ನಲ್ಲೇ ಕುತೂಹಲ ಮೂಡಿಸಿದ ನಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
