ಬೆಂಗಳೂರು:ಸೈಕಲ್‌ ಮೇಲೇರಿ ಐದು ಕಿಲೋಮೀಟರ್‌ ಜಾಥಾ ನಡೆಸಲು ತಯಾರಾಗಿದ್ದಾರೆ ಕಾಂಗ್ರೆಸ್‌ ನಾಯಕರು. ಇದಕ್ಕೆ ಕಾರಣ, ದುಬಾರಿಯಾಗಿರುವ ಪೆಟ್ರೋಲ್, ಡೀಸೆಲ್ ಬೆಲೆ. ಇದನ್ನು ವಿರೋಧಿಸಿ ಪ್ರತಿಭಟನಾ ರೂಪದಲ್ಲಿ ನಾಳೆ (ಜುಲೈ 7) ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಸೈಕಲ್ ಜಾಥಾ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಬೆಂಗಳೂರಿನ 32 ಕಡೆ ಪ್ರತಿಭಟನೆ ನಡೆಯಲಿದ್ದು, ಕನಿಷ್ಠ ಐದು ಕಿಲೋಮೀಟರ್ ಸೈಕಲ್ ಜಾಥಾ ನಡೆಯಲಿದೆ. ಪಕ್ಷದ ಕಾರ್ಯಕರ್ತರು, ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮ‌ಲಿಂಗಾರೆಡ್ಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಹಿಂದೆ ಬಿಜೆಪಿ ನಾಯಕರು ಬೆಲೆ ಏರಿಕೆ ಬಗ್ಗೆ ಪ್ರತಿಭಟಿಸಿದ್ದರು. ಇಂದು ಬೆಲೆ ಏರಿಕೆ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಈ ಸಂಗತಿಯನ್ನು ನಾವು ಜನರಿಗೆ ತಿಳಿಸುತ್ತೇವೆ ಎಂದರು. ಕರೊನಾದಿಂದ ಮೃತಪಟ್ಟವರ ನೈಜ ಸಂಖ್ಯೆಯನ್ನು ಸರ್ಕಾರ ಮುಚ್ಚಿಡುತ್ತಿದೆ‌. ಹೀಗಾಗಿ ಪಕ್ಷದ ಕಡೆಯಿಂದ ಇಡೀ ರಾಜ್ಯಾದ್ಯಂತ ಡೆತ್ ಆಡಿಟ್ ನಡೆಸಲಾಗುತ್ತಿದೆ ಎಂದು ಹೇಳಿದರು.
ಮುಖಂಡರಾದ ಬಿಎಲ್ ಶಂಕರ್, ಎಂಎಲ್ ಸಿ ನಾತಲರಾಯಣ ಸ್ವಾಮಿ, ರಾಜ್ ಕುಮಾರ್, ರಾಮಚಂದ್ರಪ್ಪ, ರಮೇಶ್ ಬಾಬು ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
‘ಪ್ರಧಾನಿ ಮೋದಿ ವಿರುದ್ಧ ಬರೆಯಬಲ್ಲ, ಭಾರತ ವಿರೋಧಿ ವರದಿಗಾರರು ಬೇಕಾಗಿದ್ದಾರೆ’

ಕರ್ನಾಟಕದ ನೂತನ ರಾಜ್ಯಪಾಲರಾಗಿ ಕೇಂದ್ರ ಸಚಿವ ತಾವರ್‌ಚಂದ್‌ ಗೆಹ್ಲೋಟ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − eleven =
Remember me
