ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮನೆಯ ಮೇಲೆ ಇಂದು ನಸುಕಿನಲ್ಲಿಯೇ ರೇಡ್​ ಮಾಡಿ ಒಂದು ಶಾಕ್​ ಕೊಟ್ಟಿದ್ದ ಸಿಬಿಐ ಅಧಿಕಾರಿಗಳು, ಇದೀಗ ಅವರ ವಿರುದ್ಧ ಎಫ್​ಐಆರ್​ ದಾಖಲಿಸಿ ಇನ್ನೊಂದು ಶಾಕ್​ ನೀಡಿದ್ದಾರೆ.
ಸಿಬಿಐ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ದೂರು ದಾಖಲಿಸಲಾಗಿದೆ.
ಇದಾಗಲೇ ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಸೇರಿ 14 ಕಡೆಗಳಲ್ಲಿ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ. ಜತೆಗೆ ಇವರ ಸಹೋದರ ಡಿ.ಕೆ.ಸುರೇಶ್​ ಅವರ ಮನೆಯ ಮೇಲೂ ದಾಳಿ ನಡೆಸಲಾಗಿದೆ.
ಇದನ್ನೂ ಓದಿ:ಬೆಳ್ಳಂಬೆಳಗ್ಗೆ ಡಿಕೆ ಬ್ರದರ್ಸ್​ಗೆ ಸಿಬಿಐ ಶಾಕ್​: ಐಟಿ, ಇಡಿ ಬೆನ್ನಲ್ಲೇ ಡಿಕೆಶಿಗೆ ಮತ್ತೊಂದು ಆಘಾತ..!
ಹಣ ವರ್ಗಾವಣೆ ಆರೋಪದಲ್ಲಿ ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಡಿಕೆಶಿ 2019ರ ಸೆಪ್ಟೆಂಬರ್ 3ರಂದು ವಿಚಾರಣೆ ಎದುರಿಸಿದ್ದರು. ಅಲ್ಲದೆ, ಬಂಧನಕ್ಕೆ ಒಳಗಾಗಿ ಜೈಲು ವಾಸವನ್ನು ಅನುಭವಿಸಿ, ಜಾಮೀನಿನ ಮೂಲಕ ಹೊರಬಂದಿದ್ದಾರೆ. ಇದೀಗ ಒಂದು ವರ್ಷ ಕಳೆಯುವ ಬೆನ್ನಲ್ಲೇ ಮತ್ತೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಇದೇ ಇನ್ನೊಂದೆಡೆ, ಡಿಕೆಶಿ ಆಪ್ತ ಸಚಿನ್ ನಾರಾಯಣ್ ಮನೆ ಮೇಲೂ ಸಿಬಿಐ ಅಧಿಕಾರಿಗಳ ತಂಡ ರೇಡ್ ಮಾಡಿದೆ ಎನ್ನಲಾಗಿದೆ.
ಡಿ.ಕೆ.ಶಿವಕುಮಾರ್ ಆಪ್ತ ಸಚಿನ್ ನಾರಾಯಣ ಅವರ ಹಾಸನದ ಮನೆ ಮೇಲೆ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ: ದುಷ್ಟತನದ ಪರಮಾವಧಿ ಎಂದ ಸಿದ್ದುಗೆ ಕಮೆಂಟಿಗರಿಂದ ಗುದ್ದೋ ಗುದ್ದು!

ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ: ದೀದಿ ವಿರುದ್ಧ ಭುಗಿಲೆದ್ದ ಆಕ್ರೋಶ- ಬಂದ್​ಗೆ ಕರೆ

₹500 ದಂಡ ಹಾಕಿದ್ದಕ್ಕೆ ₹10 ಲಕ್ಷ ಪರಿಹಾರ! ವಕೀಲನ ವಿರುದ್ಧ ಹೋಗಿ ಪೇಚಿಗೆ ಸಿಲುಕಿದ ಪೊಲೀಸ್

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 + one =
Remember me
