ಬೆಂಗಳೂರು:ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಗೆ ಕೊನೆಗೂ ಒಬ್ಬ ಸಚಿವರನ್ನು ಸರ್ಕಾರ ನೇಮಿಸಿದೆ.
ನಗರಾಭಿವೃದ್ಧಿ ಖಾತೆ ಹೊಣೆ ಹೊತ್ತ ಬೈರತಿ ಬಸವರಾಜ ಅವರಿಗೆ ದಾವಣಗೆರೆ ಜತೆಗೆ ಹೆಚ್ಚುವರಿಯಾಗಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಹೊಣೆ ನೀಡಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ( ಶಿಷ್ಟಾಚಾರ) ಈ ಕುರಿತು ಆದೇಶ ಹೊರಡಿಸಿದೆ. ಸತತ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆ ತತ್ತರಿಸಿರುವ ಸಂದರ್ಭದಲ್ಲಿ ಉಸ್ತುವಾರಿ ಸಚಿವರ ನೇಮಕವಾಗಿದೆ.
ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯವಿಲ್ಲದ ಜಿಲ್ಲೆಗಳಿಗೆ ಬೇರೆ ಜಿಲ್ಲೆಗಳ ಸಚಿವರು ನೇಮಕವಾಗಿದ್ದು, ಕೆಲವು ಸಚಿವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಆದರೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿನಿಧಿಸುತ್ತಿರುವ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ದೀರ್ಘಾವಧಿಯಿಂದ ಖಾಲಿಯಿತ್ತು.
ಹೆಚ್ಚುವರಿ ಉಸ್ತುವಾರಿ ಹೊಣೆ‌ ಹೊತ್ತ ಬೆನ್ನಲ್ಲೇ ಬೈರತಿ ಬಸವರಾಜ ಅವರು ಚಿಕ್ಕಮಗಳೂರು ಜಿಲ್ಲೆಯ ಅತಿವೃಷ್ಟಿ ಬಾಧಿತ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ, ಹಾನಿ ಪರಿಶೀಲಿಸಿದ್ದಾರೆ.
ಮಧ್ಯರಾತ್ರಿ ಮಾಡಿದ ತಪ್ಪನ್ನು ಬೆಳಗಾದ ಮೇಲೆ ತಿದ್ದಿಕೊಂಡ ಸರ್ಕಾರ: ವಾಪಸ್ ಪಡೆದ ಆದೇಶಕ್ಕೆ ಮತ್ತೊಮ್ಮೆ ತಿದ್ದುಪಡಿ!

ಹೂವಿನ ಹಾರ ನೋಡಿ ಸಿದ್ದು ಗರಂ ಗರಂ: ಬೇಡ್ರಪ್ಪೋ ಬೇಡ… ನನ್​ ಬಳಿ ತರ್ಬೇಡಿ ಎಂದ ಮಾಜಿ ಸಿಎಂ

ಕಾಂಗ್ರೆಸ್​ ಮುಖಂಡನ ಕೊಲೆ ಆರೋಪಿ ಮೇಲೆ ಫೈರಿಂಗ್​: ಲೇಡಿ ಪಿಎಸ್ಐ ಮೇಲೆ ಹಲ್ಲೆ ಮಾಡಿ ಎಸ್ಕೇಪ್​ ಆಗ್ತಿದ್ದ ವೇಳೆ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
