ಬೆಂಗಳೂರು:ಕರ್ನಾಟಕ ಲೋಕಾಯುಕ್ತರಾಗಿ, ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್‌ ಅವರು ಇಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ನೂತನ ಲೋಕಾಯುಕ್ತರಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು.
ನ್ಯಾಯಮೂರ್ತಿ ಬಿ.ಎಸ್​.ಪಾಟೀಲ್​ ಅವರು ಕನ್ನಡದಲ್ಲಿ, ಭಗವಂತ ಮತ್ತು ಸತ್ಯ-ನಿಷ್ಠೆಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನದ ಬಳಿಕ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಷ್ಪಗುಚ್ಛ ನೀಡಿ ಅಭಿನಂದಿಸಿ, ಶುಭ ಹಾರೈಸಿದರು.
ಲೋಕಾಯುಕ್ತರಾಗಿ ನೇಮಕವಾಗುವ ಮುನ್ನ ನ್ಯಾಯಮೂರ್ತಿ ಪಾಟೀಲ್‌ ಅವರು ಕರ್ನಾಟಕ ಹೈಕೋರ್ಟ್​ ನ್ಯಾಯಮೂರ್ತಿಯಾಗಿ ಹಾಗೂ ನಂತರ ಕರ್ನಾಟಕ ಲೋಕಾಯುಕ್ತದಲ್ಲಿ ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸಿದ್ದರು.

ವಸತಿ ಸಚಿವ ವಿ ಸೋಮಣ್ಣ, ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ, ಶಾಸಕರಾದ ಬಸವರಾಜ ಪಾಟೀಲ್‌ ಯತ್ನಾಳ್‌, ಪಿ. ರಾಜೀವ್‌, ಕೆ. ಜೆ. ಜಾರ್ಜ್‌, ಎಂ. ಬಿ. ಪಾಟೀಲ್‌, ಈಶ್ವರ್‌ ಖಂಡ್ರೆ, ಲೋಕಾಯುಕ್ತರಾಗಿ ಈ ಹಿಂದೆ ಸೇವೆ ಸಲ್ಲಿಸಿದ ಸಂತೋಷ್‌ ಹೆಗಡೆ ಮತ್ತು ಪಿ. ವಿಶ್ವನಾಥ್‌ ಶೆಟ್ಟಿ ಅವರೂ ಸೇರಿದಂತೆ ಹಲವು ಗಣ್ಯರು, ಹೈಕೋರ್ಟ್​ ಒಳಗೊಂಡಂತೆ ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು ಮತ್ತು ನ್ಯಾಯಾಂಗ ಅಧಿಕಾರಿಗಳು, ವಕೀಲ ವೃಂದದ ಹಲವರು ಈ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು.
ಈ ಮುನ್ನ, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಅವರು ಕರ್ನಾಟಕ ಲೋಕಾಯುಕ್ತ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಪಾಲರು ಹೊರಡಿಸಿರುವ ಅಧಿಸೂಚನೆಯನ್ನು ವಾಚಿಸಿದರು.
–Araga Jnanendra (@aragajnanendra)15 June 2022

ಸ್ವಯಾರ್ಜಿತ, ಪಿತ್ರಾರ್ಜಿತ ಆಸ್ತಿ ವಿಲ್​ ಮಾಡುವಾಗ ಇದು ತಿಳಿದಿರಲಿ…

ಕೆಲ್ಸಕ್ಕೆ ಹೋಗೋದು, ಬಿಡೋದು ಪತ್ನಿ ಇಷ್ಟ- ನೀವದನ್ನು ಕೇಳೋಹಾಗಿಲ್ಲ ಎಂದ ಹೈಕೋರ್ಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 1 =
Remember me
