ಮಂಡ್ಯ:ಮಾನಸಿಕವಾಗಿ ನೊಂದು ಹೋಗಿದ್ದ 25 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ಕೃಷ್ಣ ಎಂಬ ಯುವಕ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣ, ಕೆಲಸ ಮುಗಿಸಿಕೊಂಡು ಮನೆಗೆ ಮೊನ್ನೆ ಬಂದಿದ್ದ. ನಿನ್ನೆ ರಜೆ ಹಾಕಿ ಮನೆಯಲ್ಲೇ ಇದ್ದ. ಮನೆಯವರು ಯಾರೂ ಇಲ್ಲದಿದ್ದಾಗ ನೇಣಿಗೆ ಶರಣಾಗಿದ್ದಾನೆ.
ಸಾಯುವ ಮುನ್ನ ಡೆತ್‌ನೋಟ್‌ ಬರೆದಿಟ್ಟಿರುವ ಕೃಷ್ಣ, ನನ್ನನ್ನ ಎಲ್ಲರೂ ದಯವಿಟ್ಟು ಕ್ಷಮಿಸಿ. ನಿಮಗೆಲ್ಲಾ ನುಮಗೆಲ್ಲಾ ತುಂಬಾ ನೋವು ಕೊಟ್ಟಿದ್ದೀನಿ. ಅಮ್ಮ ನಿಗೆ ಒಬ್ಬ ಮಗನಾಗಿ, ಅಣ್ಣನಿಗೆ ತಮ್ಮನಾಗಿ, ಗೆಳೆಯರಿಗೆ ಒಂದೊಳ್ಳೆ ಸ್ನೇಹಿತನಾಗಿ, ನನ್ನ ಹುಡುಗಿಗೆ ಜೊತೆಗಾರನಾಗಲು ಬಾಳಸಂಗಾತಿಯಾಗಲು ವಿಫಲನಾಗಿದ್ದೇನೆ. ಅದಕ್ಕೋಸ್ಕರ ನಾನು ನಿಮ್ಮಿಂದ ದೂರವಾಗಬೇಕೆಂದು ತೀರ್ಮಾನಿಸಿ ನನ್ನ ಇಚ್ಚೆಯಂತೆ ಮರಣ ಹೊಂದುತ್ತಿದ್ದೇನೆ ಎಂದಿದ್ದಾನೆ.

ತನ್ನ ಕೊನೆಯ ಎರಡು ಆಸೆಗಳನ್ನು ಈಡೇರಿಸಲು ಮನವಿ ಮಾಡಿಕೊಂಡಿರುವ ಕೃಷ್ಣ. ನನ್ನ ಅಂತ್ಯಕ್ರಿಯೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಅಣ್ಣ ಭಾಗವಹಿಸಬೇಕು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಸರ್‌ ಭಾಗವಹಿಸಬೇಕು. ಏಕೆಂದರೆ ನಾನು ಇವರಿಬ್ಬರ ಅಪ್ಪಟ ಅಭಿಮಾನಿ. ದಯವಿಟ್ಟು ಅವರನ್ನು ನಾನು ಕೇಳಿಕೊಳ್ಳುತ್ತಿದ್ದೇನೆ. ನನ್ನ ಕೊನೆಯ ಆಸೆ ಈಡೇರಿಸಿ ಫ್ಲೀಸ್… ಹಾಗೆಯೇ ಇದಕ್ಕೆ ಮಾಧ್ಯಮ ಮಿತ್ರರು ಸಹ ಸಹಕರಿಸಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಕೃಷ್ಣ ಬರೆದಿದ್ದಾನೆ.

ಅಭಿಮಾನಿಯ ಈ ಕೋರಿಕೆ ಈಡೇರಿಸಲು ಸಿದ್ದರಾಮಯ್ಯ ಅವರು ಇಂದು ಕೋಡಿದೊಡ್ಡಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈತನ ತಂದೆ ಚಂದ್ರು 15 ವರ್ಷದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
VIDEO: ಪ.ಬಂಗಾಳದಲ್ಲಿ ಬಾಂಬ್‌ ದಾಳಿ: ಗಂಭೀರ ಗಾಯಗೊಂಡ ಸಚಿವ- ಸಿಸಿಟಿವಿಯಲ್ಲಿ ಸೆರೆ

ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್‌ ಹಿರಿಯ ನಾಯಕ ಕ್ಯಾಪ್ಟನ್ ಸತೀಶ್ ಶರ್ಮಾ ನಿಧನ

ಶಾಲೆಯ ಮೇಲೆ ಬಂದೂಕುಧಾರಿಗಳಿಂದ ದಾಳಿ- 40 ಮಂದಿ ಶಿಕ್ಷಕರು, ವಿದ್ಯಾರ್ಥಿಗಳ ಅಪಹರಣ!

ನಡುರಸ್ತೆಯಲ್ಲಿಯೇ ವಕೀಲ ದಂಪತಿಯ ಬರ್ಬರ ಹತ್ಯೆ: ವಿಡಿಯೋದಲ್ಲಿ ಭಯಾನಕ ದೃಶ್ಯ ದಾಖಲು

ನಡುರಸ್ತೆಯಲ್ಲಿಯೇ ವಕೀಲ ದಂಪತಿಯ ಬರ್ಬರ ಹತ್ಯೆ: ವಿಡಿಯೋದಲ್ಲಿ ಭಯಾನಕ ದೃಶ್ಯ ದಾಖಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 19 =
Remember me
