ಬೆಂಗಳೂರು:ಅರ್ಚಕರು ಹಾಗೂ ಪೌರೋಹಿತ್ಯ ಮಾಡುವ ಯುವಕರನ್ನು ಮದುವೆಯಾಗಲು ಹಿಂದೇಟು ಹಾಕುವವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರ ಭರ್ಜರಿ ಯೋಜನೆಯನ್ನು ರೂಪಿಸಿದೆ.
ಅರ್ಚಕರನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಮೂರು ಲಕ್ಷ ರೂಪಾಯಿ ಬಾಂಡ್​ ವಿತರಿಸಲಾಗುತ್ತದೆ.
ಇದಕ್ಕಾಗಿ ‘ಮೈತ್ರಿ’ ಎಂಬ ಯೋಜನೆಯನ್ನು ರೂಪಿಸಲಾಗಿದೆ. ಬಾಂಡ್‌ನ ಹಣವನ್ನು ಮೂರು ವರ್ಷಗಳ ಬಳಿಕ ಫಲಾನುಭವಿಗಳು ಪಡೆಯಬಹುದು. ಯೋಜನೆಗೆ ನಾಳೆ (ಜ.6) ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಚಾಲನೆ ನೀಡಲಿದ್ದಾರೆ.

ಈ ಕುರಿತು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್‌.ಎಚ್‌. ಸಚ್ಚಿದಾನಂದ ಮಾಹಿತಿ ನೀಡಿದ್ದಾರೆ. ಇದೇ ಮೊದಲ ಬಾರಿಗೆ ‘ಮೈತ್ರಿ’ ಯೋಜನೆಯಡಿ ವಧುಗಳಿಗೆ ಮೂರು ಲಕ್ಷ ರೂಪಾಯಿ ಬಾಂಡ್​ ವಿತರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಅರ್ಚಕರನ್ನು ಮತ್ತು ಪೌರೋಹಿತ್ಯ ಮಾಡುವವರ ಪೈಕಿ ಹೆಚ್ಚಿನವರು ಮದುವೆಯಾಗದೇ ಅವಿವಾಹಿತರಾಗಿದ್ದಾರೆ. ಹೆಣ್ಣುಮಕ್ಕಳು ಇಂಥವರನ್ನು ಮದುವೆಯಾಗಲು ಹಿಂಜರಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಯೋಜನೆ ರೂಪಿಸಲಾಗಿದೆ ಎಂದು ಹೇಳಿದ್ದಾರೆ.
ಇದೇ ರೀತಿ ಬಡ ಹೆಣ್ಣುಮಕ್ಕಳ ಮದುವೆಗೆ 25 ಸಾವಿರ ರೂಪಾಯಿ, ಐದು ಎಕರೆಗಿಂತ ಕಡಿಮೆ ಜಮೀನು ಹೊಂದಿರುವವರಿಗೆ ಬೋರ್‌ವೆಲ್‌, ಟ್ರ್ಯಾಕ್ಟರ್‌ ಖರೀದಿ ಮತ್ತು ಹೈನುಗಾರಿಕೆಗೆ ಧನ ಸಹಾಯ ನೀಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕಗ್ಗತ್ತಲಿನಲಿ ಮಂಗಳೂರಿನ ದಾರಿಮೇಲೆ ಕಂಡುಬಂದ ‘ಭೂತ’: ವಿಡಿಯೋ ವೈರಲ್​

ಒಬ್ಬನ ಅಂತ್ಯಸಂಸ್ಕಾರಕ್ಕೆ ಬಂದು ಹೆಣವಾದ 16 ಮಂದಿ: ₹10 ಲಕ್ಷ ಪರಿಹಾರ, ಉದ್ಯೋಗದ ಭರವಸೆ

ಒಬ್ಬನ ಅಂತ್ಯಸಂಸ್ಕಾರಕ್ಕೆ ಬಂದು ಹೆಣವಾದ 16 ಮಂದಿ: ₹10 ಲಕ್ಷ ಪರಿಹಾರ, ಉದ್ಯೋಗದ ಭರವಸೆ

ಹುಟ್ಟುಹಬ್ಬಕ್ಕೆಂದು ದುಬೈನಿಂದ ಬಂದು ಪೊಲೀಸ್​ ಕೇಸ್​ನಲ್ಲಿ ಸಿಲುಕಿಕೊಂಡ ಸಲ್ಮಾನ್​ ಸಹೋದರರು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twelve − five =
Remember me
