ಬೆಂಗಳೂರು:ಖಾತೆ ಬದಲಾವಣೆಯ ಆಟ ಇನ್ನೂ ಮುಂದುವರೆದಿದೆ. ಕೆಲವರಿಗೆ ತಮಗೆ ಸಚಿವ ಸ್ಥಾನವೇ ಸಿಕ್ಕಿಲ್ಲವೆಂಬ ಕೋಪವಾದರೆ, ಇನ್ನು ಕೆಲವರಿಗೆ ಸಿಕ್ಕ ಖಾತೆ ಸರಿಯಲ್ಲ ಎಂಬ ಅಸಮಾಧಾನ. ಇವರೆಲ್ಲರನ್ನೂ ತೃಪ್ತಿಪಡಿಸುವ ಕೆಲಸ ಮುಖ್ಯಮಂತ್ರಿಗಳಿಗೆ. ಯಾವುದೇ ಸರ್ಕಾರ ಬಂದರೂ ಇದು ಮುಗಿಯದ ಆಟ.
ಈ ಬಾರಿ ಕೂಡ ಅದೇ ರೀತಿಯಾಗಿದ್ದು, ನೂತನ ಸಚಿವರುಗಳಿಗೆ ಖಾತೆ ಹಂಚಿಕೆ ಮಾಡಿದ ನಂತರ ಭುಗಿಲೆದ್ದ ಅಸಮಾಧಾನವನ್ನು ಕೈಲಾದಷ್ಟು ಮಟ್ಟಿಗೆ ಶಾಂತಗೊಳಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪ್ರಯತ್ನಿಸಿದ್ದು, ಮತ್ತೆ ಖಾತೆ ಬದಲಾವಣೆ ಮಾಡಿದ್ದಾರೆ.
ಕೆ.ಗೋಪಾಲಯ್ಯ ಅವರಿಗೆ ಅಬಕಾರಿ ಖಾತೆ, ಎಂಟಿಬಿ ನಾಗರಾಜ್ ಅವರಿಗೆ ಪೌರಾಡಳಿತ, ಸಕ್ಕರೆ ಖಾತೆ, ‌ಆರ್.ಶಂಕರ್ ಅವರಿಗೆ ತೋಟಗಾರಿಕೆ, ರೇಷ್ಮೆ ಖಾತೆ ಮತ್ತು ಡಾ.ಕೆ.ಸಿ.ನಾರಾಯಣ ಗೌಡ ಅವರಿಗೆ ಯುವಜನ ಸೇವೆ ಮತ್ತು ಕ್ರೀಡೆ, ವಕ್ಫ್, ಹಜ್ ಜತೆಗೆ ಹೆಚ್ಚುವರಿಯಾಗಿ ಯೋಜನೆ ಸಾಂಖ್ಯಿಕ ಅಂಕಿ ಅಂಶಗಳ ಖಾತೆ ನೀಡಲಾಗಿದೆ.
ಎಂಟಿಬಿ ನಾಗರಾಜ್ ಅವರು ವಸತಿ ಖಾತೆಗಾಗಿ ಬೇಡಿಕೆ ಇಟ್ಟಿದ್ದರೂ ಅವರಿಗೆ ಅಬಕಾರಿ ಖಾತೆ ಸಿಕ್ಕಿತ್ತು. ಆದರೆ ತಮಗೆ ಈ ಖಾತೆ ಬೇಡವೇ ಬೇಡ ಎಂದು ಪಟ್ಟುಹಿಡಿದು ಕುಳಿತಿದ್ದರಿಂದ ಸದ್ಯ ಅವರಿಗೆ ಪೌರಾಡಳಿತ, ಸಕ್ಕರೆ ಖಾತೆ ನೀಡಲಾಗಿದೆ. ಅದೇ ರೀತಿ ನಿನ್ನೆಯ ಮಟ್ಟಿಗೆ ತೋಟಗಾರಿಕೆ ಮತ್ತು ಸಕ್ಕರೆ ಸಚಿವರಾಗಿದ್ದ ಕೆ.ಗೋಪಾಲಯ್ಯ ಅವರು ಇಂದು ಅಬಕಾರಿ ಖಾತೆ ಸಚಿವರಾಗಿದ್ದಾರೆ. ಪೌರಾಡಳಿತ ಮತ್ತು ರೇಷ್ಮೆ ಸಚಿವರಾಗಿದ್ದ ‌ಆರ್.ಶಂಕರ್ ಅವರಿಗೆ ತೋಟಗಾರಿಕೆ, ರೇಷ್ಮೆ ಖಾತೆ ಸಿಕ್ಕಿದೆ. ಯುವಜನ ಸೇವೆ ಮತ್ತು ಕ್ರೀಡೆ, ವಕ್ಫ್, ಹಜ್ ಸಚಿವರಾಗಿದ್ದ ಡಾ.ಕೆ.ಸಿ.ನಾರಾಯಣ ಗೌಡ ಅವರಿಗೆ ಹೆಚ್ಚುವರಿಯಾಗಿ ಯೋಜನೆ ಸಾಂಖ್ಯಿಕ ಅಂಕಿ ಅಂಶಗಳ ಖಾತೆ ನೀಡಲಾಗಿದೆ.
ಸಿಗಲಿಲ್ಲ ಮನ್ನಣೆ:ವೈದ್ಯಕೀಯ ಶಿಕ್ಷಣ ಖಾತೆಯನ್ನು ಹಿಂಪಡೆದಿರುವುದಕ್ಕೆ ಡಾ.ಕೆ.ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದ್ದರೂ ಅದನ್ನು ಅವರಿಗೆ ನೀಡಲಿಲ್ಲ. ಅವರು ನಿನ್ನೆ ನೀಡಿರುವ ಹೊಸ ಖಾತೆಆ ರೋಗ್ಯ ಮತ್ತು ಕುಟುಂಬ ಕಲ್ಯಾಣದ ಸಚಿವರಾಗಿ ಮುಂದುವರೆಯಲಿದ್ದಾರೆ.
ಖಾತೆ ಹಂಚಿಕೆ ಬದಲಾವಣೆ ನಂತರ ಅಸಮಾಧಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಆಪ್ತ ಸಚಿವರೊಂದಿಗೆ ಸಿಎಂ ಯಡಿಯೂರಪ್ಪ ಕಳೆದ ರಾತ್ರಿ ಅಧಿಕೃತ ನಿವಾಸ ಕಾವೇರಿಯಲ್ಲಿ ಸಂಜೆ 7.30 ರಿಂದ ರಾತ್ರಿ 11 ಗಂಟೆಯವರೆಗೆ ಬಸವರಾಜ ಬೊಮ್ಮಾಯಿ, ಆರ್. ಅಶೋಕ್ ಮತ್ತು ಎಸ್. ಟಿ. ಸೋಮಶೇಖರ್ ಜೊತೆ ಸಮಾಲೋಚನೆ ನಡೆಸಿದ್ದರು ಎಂಬ ಮಾಹಿತಿ ಕೇಳಿಬಂದಿದೆ.ಬದಲಾವಣೆ ಮಾಡಿರುವ ಖಾತೆಗೆ ಸಂಬಂಧಿಸಿದ ದಾಖಲೆಗಳನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲಾಗಿದೆ ಎನ್ನಲಾಗಿದೆ.
ಶಿವಮೊಗ್ಗದ ಗಣಿ ಸ್ಫೋಟಕ್ಕೆ ಕಾರಣವಾಯ್ತಾ ಬೀಡಿ ಚಟ? ಗುತ್ತಿಗೆದಾರ ಅರೆಸ್ಟ್‌

ಮಕ್ಕಳಾಗಿಲ್ಲವೆಂದು ಮತ್ತೊಂದು ಮದ್ವೆಯಾದ್ರೆ ಮೊದಲಾಕೆಗೆ ಆರು ಹುಟ್ಟಿದವು- ಆಸ್ತಿ ವಿಭಾಗ ಹೇಗೆ?

ಮದುವೆಯಾಗುವ ಆಸೆ- ಆದರೆ ಈ ಒಂದು ಸಮಸ್ಯೆಯಿಂದ ಕುಗ್ಗಿಹೋಗಿದ್ದೇನೆ: ಪ್ಲೀಸ್ ಪರಿಹಾರ ಹೇಳಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 + one =
Remember me
