ಬೆಂಗಳೂರು:ಇತ್ತ ರಾಜ್ಯದಲ್ಲಿ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಜನವರಿ 1ರಿಂದ ಶಾಲೆಯನ್ನು ತೆರೆಯುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿರುವ ಬೆನ್ನಲ್ಲೇ ಇದೀಗ ಶಿಕ್ಷಕರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಆನ್​ಲೈನ್​, ಆಫ್​ಲೈನ್​ ಎಲ್ಲವನ್ನೂ ಬಂದ್​ ಮಾಡಲು ನಿರ್ಧರಿಸಿದ್ದಾರೆ.
ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ (RECOGNIZED UNAIDED PRIVATE SCHOOLS ASSOCIATION-RUPSA) ಇದರ ಅಡಿ ಬರುವ ಎಲ್ಲಾ ಶಾಲೆಗಳ ಆನ್​ಲೈನ್​ ಮತ್ತು ಆಫ್​ಲೈನ್​ ಕ್ಲಾಸ್​ಗಳನ್ನು ನಾಳೆಯಿಂದಲೇ ಅಂದರೆ ಸೋಮವಾರದಿಂದಲೇ (ಡಿ.21) ಸ್ಥಗಿತಗೊಳಿಸಲಾಗುವುದು ಎಂದು ಒಕ್ಕೂಟ ಹೇಳಿದೆ.
ಈ ಹಿನ್ನೆಲೆಯಲ್ಲಿ ರುಪ್ಸಾ ಅಡಿಯಲ್ಲಿ 12,800 ಶಾಲೆಗಳಲ್ಲಿ ನಾಳೆಯಿಂದ ಯಾವುದೇ ತರಗತಿಗಳು ನಡೆಯುವುದಿಲ್ಲ.ಜತೆಗೆ ಜನವರಿ 6ರಿಂದ ಬೆಂಗಳೂರಿನಲ್ಲಿ ಉಪವಾಸ ಸತ್ಯಾಗ್ರಹ ಮಾಡಲು ಒಕ್ಕೂಟ ನಿರ್ಧರಿಸಿದೆ. ರಾಜ್ಯಾದ್ಯಂತ ಶಾಲೆಗಳನ್ನು ಬಂದ್ ಮಾಡಿ ಹೋರಾಟ ಪ್ರಾರಂಭಿಸಲು ಮುಂದಾಗಿದೆ. ಇಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರವನ್ನು ‘ರುಪ್ಸಾ’ ಪ್ರಕಟಿಸಿದೆ.
ಅಷ್ಟಕ್ಕೂ ಇಂಥದ್ದೊಂದು ನಿರ್ಧಾರ ತೆಗೆದುಕೊಳ್ಳಲು ಕಾರಣ, ಒಕ್ಕೂಟದ 15 ಬೇಡಿಕೆಗಳನ್ನು ಸರ್ಕಾರ ಈಡೇರಿಸಿಲ್ಲವಂತೆ.
ಈ ಕುರಿತು ಮಾತನಾಡಿರುವ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟಿ ಮಾತನಾಡಿ, ರಾಜ್ಯದ ವಿವಿಧ ಮೂಲೆಗಳ ಶಾಲೆಗಳ ಪ್ರತಿನಿಧಿಗಳು ಈ ಸಭೆಯಲ್ಲಿ ಭಾಗಿಯಾಗಿದ್ದಾರೆ. ಇವತ್ತು ಹಲವಾರು ಸಮ್ಯಸೆಗಳ ಬಗ್ಗೆ ವಿಸ್ತೃತ ವಾಗಿ ಚರ್ಚೆ ಮಾಡಿದ್ದೇವೆ. ನಮ್ಮ ಯಾವ ಬೇಡಿಕೆಗಳನ್ನು ಈಡೇರದ ಕಾರಣ ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದರು.
ಪಠ್ಯಕ್ರಮದ ಬಗ್ಗೆ ಘೋಷಿಸುವಂತೆ ಕೇಳಿದ ನಮ್ಮ ಮನವಿಗೆ ಪ್ರತಿಕ್ರಿಯೆ ಬಂದಿಲ್ಲ. ಖಾಸಗಿ ಶಾಲೆಗಳಿಗೆ ಪರಿಹಾರ ನೀಡುವಂತೆ ಮಾಡಿಕೊಂಡ ಮನವಿ ಬಗ್ಗೆ ರಾಜ್ಯ ಸರ್ಕಾರ ಯೋಚನೆ ಮಾಡಲಿಲ್ಲ. ನಮ್ಮ ಒಕ್ಕೂಟದ ಅಡಿ ಸುಮಾರು 5 ಲಕ್ಷ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಇದುವರೆಗೆ ಯಾವುದೇ ಬೇಡಿಕೆ ಈಡೇರಿಸಲಿಲ್ಲ ಎಂದು ಅವರು ಹೇಳಿದರು.
ನಾವು ನೋವಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇವೆ. ಶಾಲೆ ಉಳಿವಿಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಅನುದಾನಿತ ಶಾಲೆಗಳು ರಾಜ್ಯ ಸರ್ಕಾರವನ್ನ ಬೆಂಬಲಿಸುತ್ತಿವೆ. ಬೆಂಗಳೂರಿನಲ್ಲಿರುವುದು ಕಾರ್ಪೊರೇಟ್ ಶಿಕ್ಷಣ ಸಂಸ್ಥೆಗಳು. ಇದಕ್ಕೆ ಹಳ್ಳಿಯ ಶಾಲೆಗಳು ಯಾವುದೇ ಬೆಂಬಲ ನೀಡಿಲ್ಲ ಎಂದು ತಾಳಿಕೋಟೆ ಹೇಳಿದರು.
ಪಕ್ಕದ್ಮನೆ ಆಂಟಿಗೆ ಗಂಡ ಸುಖಕೊಡಲ್ವಂತೆ- ಸದಾ ಪೀಡಿಸುತ್ತಿದ್ದಾಳೆ: ಹೇಗೆ ತಪ್ಪಿಸಿಕೊಳ್ಳಲಿ?

‘ಪಾಕ್​ಗಿಂತ ಭಾರತದಲ್ಲೇ ಹೆಚ್ಚು ಮುಸ್ಲಿಂರಿದ್ದು, ಅವರ ಅಲ್ಪಸಂಖ್ಯಾತ ಸ್ಥಾನಮಾನ ರದ್ದಾಗಲಿ’

ಬಿಜೆಪಿ- ಜೆಡಿಎಸ್​ ವಿಲೀನ ಆಗುತ್ತಾ? ಸಿಎಂ ಯಡಿಯೂರಪ್ಪ ಏನೆಂದ್ರು ನೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
