ಬೆಂಗಳೂರು:ತಕ್ಷಣವೇ ನಿಮ್ಮ ವಾಹನಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಭರ್ತಿ ಮಾಡಿಕೊಳ್ಳಿ. ಇಲ್ಲದಿದ್ದರೆ 31ರ ನಂತರ ಪೆಟ್ರೋಲ್ ಬಂಕ್‍ಗಳಲ್ಲಿ ಇಂಧನ ಸಿಗುವ ಸಾಧ್ಯತೆಗಳಿಲ್ಲ.
ಏಕೆಂದರೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಪೆಟ್ರೋಲಿಯಂ ಮಾರಾಟಗಾರರ ಒಕ್ಕೂಟವು ಇದೇ 31ರ ನಂತರ ಡಿಪೋಗಳಿಂದ ತೈಲ ಖರೀದಿಸದೆ ಪ್ರತಿಭಟನೆ ನಡೆಸಲು ಮುಂದಾಗಿದೆ.
ಪರಿಣಾಮ ವಾಹನಗಳಿಗೆ ಬಂಕ್‍ಗಳಲ್ಲಿ ಇಂಧನ ಸಿಗದೆ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯಿದೆ. 2017ರಿಂದ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲೆ 1ರೂ. ಕಮಿಷನ್ ನೀಡಬೇಕೆಂಬುದು ಫೆಡರೇಷನ್‍ನ ಪ್ರಮುಖ ಬೇಡಿಕೆಯಾಗಿತ್ತು. ಅಂದಿನಿಂದ ಇಂದಿನವರೆಗೂ ನಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ. ಹೀಗಾಗಿ ವಿಧಿಯಲ್ಲದೆ ನಾವು ತೈಲ ಡಿಪೋಗಳಿಂದ ಇಂಧನ ಖರೀದಿ ಮಾಡದೆ ಪ್ರತಿಭಟನೆ ಮಾಡುತ್ತೇವೆ ಎಂದು ಫೆಡರೇಷನ್ ಪ್ರಮುಖ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.
2017ರಲ್ಲಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದಿಗೆ ಹೋಲಿಕೆ ಮಾಡಿದರೆ ದ್ವಿಗುಣವಾಗಿದೆ. ಕಮಿಷನ್ ಹೆಚ್ಚಳ ಮಾಡಬೇಕೆಂದು ಕೇಂದ್ರ ಪೆಟ್ರೋಲಿಯಂ ಸಚಿವರು ಹಾಗೂ ರಾಜ್ಯದ ಮುಖ್ಯಮಂತ್ರಿಗೆ ಮನವಿ ಮಾಡಲಾಗಿತ್ತು. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಬೇಕೆಂಬ ಕಾರಣಕ್ಕಾಗಿಯೇ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಬಂಕ್‍ಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಪ್ರತಿ ವರ್ಷ ವೇತನ ಪರಿಷ್ಕರಣೆ ಮಾಡಬೇಕು. ಅಲ್ಲದೆ, ಕಂಪೆನಿಗಳ ಡೀಲರ್ಸ್‍ಗಳು ಬಂಕ್‍ಗಳಲ್ಲಿ ಸಿಬ್ಬಂದಿಗಳಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂದು ಸೂಚನೆ ಕೊಡುತ್ತಾರೆ.
ಶೌಚಾಲಯ, ತಿಂಡಿ, ಊಟದ ವ್ಯವಸ್ಥೆ, ಶುಚಿತ ಹೀಗೆ ಎಲ್ಲವನ್ನೂ ನಿರ್ವಹಿಸಬೇಕಾಗಿರುವುದರಿಂದ ಬಂಕ್ ನಡೆಸುವುದೇ ದುಸ್ತರವಾಗಿದೆ ಎಂಬುದು ಮಾಲೀಕರ ಅಳಲು. ನಾವು ಕೇಂದ್ರ ಅಥವಾ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿಲ್ಲ. ಐದು ವರ್ಷವಾದರೂ ಬೇಡಿಕೆ ಈಡೇರಿಸದ ಕಾರಣ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರ ಕಳೆದ ಹಲವು ತಿಂಗಳುಗಳಿಂದ ನಿರಂತರವಾಗಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯನು ಪ್ರತಿ ದಿನ ಲೀಟರ್‍ಗೆ ಪೈಸೆಗಳಲ್ಲಿ ಏರಿಕೆ ಮಾಡಿದರು. ಆದರೆ, ಕಳೆದ ವಾರ ಇದ್ದಕ್ಕಿದ್ದಂತ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯಲ್ಲಿ ಸರಿ ಸುಮಾರು 10ರಿಂದ 8ರೂ.ವರೆಗೆ ಕಡಿತ ಮಾಡಿತು. ಇದರಿಂದ ಪ್ರತಿಯೊಂದು ಬಂಕ್‍ಗಳಿಗೆ ಕನಿಷ್ಠ 5ರಿಂದ 25 ಲಕ್ಷವರೆಗೂ ನಷ್ಟವಾಯಿತು.
ಮೊದಲೇ ಸಂಕಷ್ಟದಲ್ಲಿರುವ ನಮಗೆ ಕೇಂದ್ರ ಸರ್ಕಾರ ಗಾಯದ ಮೇಲೆ ಬರೆ ಎಳೆದಿದೆ ಎಂದು ಅಳಲು ತೋಡಿಕೊಂಡರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಾವೋಸ್‍ನಿಂದ ಹಿಂದುರಿಗಿದ ತಕ್ಷಣವೇ ಭೇಟಿಯಾಗಿ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿ ಮಾಡಲಿದ್ದೇವೆ.
ಅಲ್ಲದೆ, ಶೀಘ್ರದಲ್ಲೇ ಕೇಂದ್ರ ಪೆಟ್ರೋಲಿಯಂ ಸಚಿವರನ್ನು ಸಹ ಭೇಟಿ ಮಾಡಲಿದ್ದೇವೆ, ನಾವು ಸಾರ್ವಜನಿಕರಿಗೆ ತೊಂದರೆ ಕೊಟ್ಟು ಪ್ರತಿಭಟನೆ ನಡೆಸುವ ಉದ್ದೇಶ ಹೊಂದಿಲ್ಲ. ಬಂಕ್ ಮಾಲೀಕರ ಸಂಕಷ್ಟವನ್ನು ಜನರಿಗೆ ತಿಳಿಸುವ ಸದುದ್ದೇಶವಾಗಿದೆ. ನಮ್ಮ ಪ್ರತಿಭಟನೆಗೆ ಸಾರ್ವಜನಿಕರು ಕೂಡ ಕೈ ಜೋಡಿಸಬೇಕೆಂದು ಮುಖಂಡರು ಮನವಿ ಮಾಡಿದ್ದಾರೆ.
ಲವ್​ ಜಿಹಾದ್​ಗೆ ಉಡುಪಿ ಯುವತಿ ಬಲಿ! ದೈಹಿಕ ಸಂಪರ್ಕ ಬೆಳೆಸಿ ಮತಾಂತರಕ್ಕೆ ಪ್ರಯತ್ನ- ಪತ್ನಿಯೂ ಸಾಥ್​?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 8 =
Remember me
