ಬೆಂಗಳೂರು:ಪಿಎಸ್ಐ ನೇಮಕಾತಿಗೆ ಸಂಬಂಧಿಸಿದಂತೆ ಅಕ್ರಮ ನಡೆಸಿರುವ ಒಬ್ಬೊಬ್ಬರೇ ಆರೋಪಿಗಳು ಪೊಲೀಸರ ಬಲೆಗೆ ಬೀಳುತ್ತಿದ್ದಾರೆ.
ಈ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೈಗ್ರೌಂಡ್ಸ್​ ಪೊಲೀಸ್​ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್​​ನ ಮೊದಲ ಆರೋಪಿ ಜಾಗೃತ್‌ ಈಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಚನ್ನಪಟ್ಟಣದಲ್ಲಿ ಈತನನ್ನು ಬಂಧಿಸಲಾಗಿದೆ. ಪಿಎಸ್​ಐ ಪರೀಕ್ಷೆಯಲ್ಲಿ ನಡೆದ ಅಕ್ರಮ ನೇಮಕಾತಿ ಬಯಲಿಗೆ ಬರುತ್ತಿದ್ದಂತೆಯೇ ಇದರ ವಿರುದ್ಧ ಪ್ರತಿಭಟನೆ ಮಾಡಿದ ಮುಂದಾಳತ್ವವನ್ನೂ ಈತ ವಹಿಸಿದ್ದ ಎನ್ನುವುದು ಪೊಲೀಸ್​ ತನಿಖೆಯಿಂದ ಬಯಲಿಗೆ ಬಂದಿದೆ.
ಹಗರಣ ಕುರಿತು ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದ ಈತನ ಜಾತಕಕ್ಕಾಗಿ ಜಾಲಾಡಿದ್ದರು. ಕೊನೆಗೆ ತಿಳಿದುಬಂದದ್ದು ಏನೆಂದರೆ, ಜಾಗೃತ್, ಮೊದಲ ಹಂತದಲ್ಲೇ ಹಣ ಕೊಟ್ಟು ಒಎಂಆರ್ ಶೀಟ್ ತಿದ್ದಿಸಿರುವುದು ಗೊತ್ತಾಗಿತ್ತು. ಎಫ್​ಎಸ್​​ಎಲ್ ವರದಿಯನ್ವಯ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದ. ಇದಾದ ನಂತರ ತಲೆಮರೆಸಿಕೊಂಡಿದ್ದ.
ತನ್ನನ್ನು ಹಿಡಿಯಲು ಪೊಲೀಸರು ತಂಡ ರಚಿಸಿರುವುದು ತಿಳಿಯುತ್ತಲೇ ಹೈಕೋರ್ಟ್​ನಲ್ಲಿ ಎಫ್‌ಐಆರ್‌ ವಜಾಕ್ಕೆ ಆಗ್ರಹಿಸಿ ಅರ್ಜಿ ಸಲ್ಲಿಸಿದ್ದ. ಕೇರಳ ಹಾಗೂ ಬೇರೆ ಬೇರೆ ಕಡೆ ತಪ್ಪಿಸಿಕೊಂಡು ತಿರುಗುತ್ತಿದ್ದ. ಈತ ಹಣ ನೀಡಿ ಮಧ್ಯವರ್ತಿ ಹಾಗೂ ಎಫ್​ಡಿಎ ಹರ್ಷ ಮೂಲಕ ವ್ಯವಹಾರ ಮಾಡಿರುವುದು ಬೆಳಕಿಗೆ ಬಂದಿದೆ
ಸದ್ಯ ಜಾಗೃತ್​ನನ್ನು ಸಿಐಡಿ ಪೊಲೀಸರು ವಿಚಾರಣೆಗಾಗಿ 10 ದಿನ ಕಸ್ಟಡಿಗೆ ಪಡೆದಿದ್ದಾರೆ.
ವೈದ್ಯೆಯಾಗುವ ಕನಸು ಕಾಣುತ್ತಿದ್ದ ಬಳ್ಳಾರಿಯ ವೈದ್ಯಕೀಯ ವಿದ್ಯಾರ್ಥಿನಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

VIDEO: ಟೈಲರ್​ ರುಂಡ ತುಂಡರಿಸಿದವರು ಮಕ್ಕಳು, ಕ್ಷಮಿಸಿಬಿಡೋಣ ಎಂದ್ರಾ ರಾಹುಲ್​ ಗಾಂಧಿ? ವಿಡಿಯೋದಲ್ಲಿ ಇರೋದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
