ವಿಜಯನಗರ:ಹಲವಾರು ರೀತಿಯ ಸಮಾಜಸೇವೆ ಮಾಡಿ ಜನರ ಪಾಲಿಗೆ ದೇವರು ಎನಿಸಿಕೊಂಡಿರುವ ನಟ ಪುನೀತ್ ರಾಜ್‌ಕುಮಾರ್‌ ಅವರ ಅಭಿಮಾನಿಗಳು ಕೋಟ್ಯಂತರ ಮಂದಿ. ಇದೇ ಕಾರಣಕ್ಕೆ ತಮ್ಮ ಪ್ರೀತಿಯ ಅಪ್ಪು ಸದಾ ತಮ್ಮ ಕಣ್ಮುಂದೆ ಇರಬೇಕು ಎಂದು ಬಯಸಿರುವ ಹೊಸಪೇಟೆಯ ಅಭಿಮಾನಿಗಳು ಪುನೀತ್‌ ಅವರ ಏಳೂವರೆ ಅಡಿ ಎತ್ತರದ ಪುತ್ಥಳಿಯನ್ನು ಭಾನುವಾರ (ಜೂನ್‌ 5) ಅನಾವರಣಗೊಳಿಸಿದ್ದಾರೆ.
ಪುನೀತ್ ವೃತ್ತದಲ್ಲಿ ಸಚಿವ ಆನಂದ ಸಿಂಗ್ ಹಾಗೂ ಅವರ ಮಗ ಸಿದ್ದಾರ್ಥ್ ಸಿಂಗ್ ಸಹಕಾರದೊಂದಿಗೆ 7.4 ಎತ್ತರದ ಕಂಚಿನ ಪ್ರತಿಮೆ ಮಾಡಿ ಇಂದು ಅನಾವರಣಗೊಳಿಸಲಾಗಿದೆ. ಕಾರ್ಯಕ್ರಮದಲ್ಲಿನಟರಾದ ರಾಘವೇಂದ್ರ ರಾಜ್ ಕುಮಾರ್, ಅಜಯ್ ರಾವ್, ನಿರ್ದೇಶಕ ಸಂತೋಷ್ ಆನಂದ್ ರಾಮ್, ಸಚಿವ ಆನಂದ್ ಸಿಂಗ್ ಭಾಗವಹಿಸಿದ್ದರು. ಇದರಿಂದ ಹೊಸಪೇಟೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
ಆದರೆ ತಮ್ಮ ನೆಚ್ಚಿನ ನಟನಿಗೆ ಭಾವಪೂರ್ಣ ನಮನ ಸಲ್ಲಿಸುವ ಬದಲು ಅಭಿಮಾನಿಗಳು ಅತಿರೇಕವಾಡಿದ್ದು, ಇಡೀ ಸಮಾರಂಭಕ್ಕೆ ಕಪ್ಪುಚುಕ್ಕೆಯಾಗಿದೆ. ಅಭಿಮಾನಿಗಳ ಅತಿರೇಕಕ್ಕೆ ನೂರಾರು ಕುರ್ಚಿಗಳು ಪೀಸ್ ಪೀಸ್ ಆಗಿದೆ. ರಸ್ತೆಯದ್ದಕ್ಕೂ ಕುರ್ಚಿಗಳು ಮುರಿದು ಬಿದ್ದಿವೆ.
ಕಾರ್ಯಕ್ರಮದುದ್ದಕ್ಕೂ ಅಭಿಮಾನಿಗಳು ಗಲಾಟೆ ಮಾಡುತ್ತಾ, ಕುರ್ಚಿಗಾಗಿ ಹೊಡೆದಾಟ ಮಾಡಿಕೊಂಡಿದ್ದು ಅಪಾರ ನಷ್ಟ ಉಂಟು ಮಾಡಿದ್ದಾರೆ. ಈ ಹಿಂದೆ ನಟ ಶಿವರಾಜ‌ಕುಮಾರ್‌, ಪುನೀತ್‌ ಅವರ ಪತ್ನಿ ಅಶ್ವಿನಿ ಸೇರಿದಂತೆ ಡಾ.ರಾಜ್‌ ಕುಟುಂಬಸ್ಥರು ಮತ್ತು ಸಿನಿ ತಾರೆಯರು ಅಭಿಮಾನಿಗಳಿಗೆ ಈ ರೀತಿ ಅತಿರೇಕದಲ್ಲಿ ವರ್ತಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದರು. ಆದರೆ ಅಭಿಮಾನಿಗಳು ಮಾತ್ರ ಹೀಗೆಲ್ಲಾ ವರ್ತಿಸಿ ಮುಜುಗರಕ್ಕೀಡು ಮಾಡುತ್ತಿರುವುದು ಖೇದಕರ ಸಂಗತಿ ಎನ್ನುತ್ತಾರೆ ಜನರು.
ನಿಜವಾಯ್ತು ಸಂದೇಹ: ಶೀಘ್ರದಲ್ಲೇ ನಿನ್ನ ಮರ್ಡರ್‌- ನಟ ಸಲ್ಮಾನ್‌ ಖಾನ್‌ ಟೇಬಲ್‌ ಮೇಲೆ ಬೆದರಿಕೆ ಪತ್ರ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
