ಬೆಂಗಳೂರು:ಕಳೆದ ಕೆಲ ತಿಂಗಳಿನಿಂದ ಭಾರಿ ಕೋಲಾಹಲ ಸೃಷ್ಟಿಸಿ ಇದೀಗ ಕರೊನಾ ಎರಡನೆಯ ಅಲೆಯ ನಡುವೆ ತಣ್ಣಗಾಗಿದ್ದ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರ ವಿರುದ್ಧದ ಸಿಡಿ ಕೇಸ್‌ ಪುನಃ ಮುನ್ನೆಲೆಗೆ ಬಂದಿದೆ.
ಸಿಡಿಯಲ್ಲಿರುವ ಯುವತಿ ಕಮಿಷನರ್‌ ಕಮಲ್ ಪಂತ್ ಅವರಿಗೆ ಪತ್ರ ಬರೆದಿದ್ದು, ಇದರಲ್ಲಿ ಜಾರಕಿಹೊಳಿ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಈ ಹಿಂದೆ ಕೂಡ ಪತ್ರ ಬರೆದು ಇದೇ ರೀತಿಯ ಆರೋಪ ಮಾಡಿದ್ದ ಯುವತಿ, ಇದೀಗ ಮತ್ತೊಂದು ಪತ್ರ ಬರೆದಿದ್ದಾರೆ.
ತಮ್ಮ ವಕೀಲರಾದ ಸೂರ್ಯ ಮುಕುಂದರಾಜ್ ಮತ್ತು ಜಗದೀಶ್ ಕುಮಾರ್ ಅವರಿಗೆ ಜಾರಕಿಹೊಳಿ ಅವರು ಆಮಿಷ ತೋರಿಸುತ್ತಿದ್ದಾರೆ, ಸಾಕ್ಷ್ಯ ನಾಶ ಮಾಡಲು ರಮೇಶ್ ಜಾರಕಿಹೊಳಿ ಯತ್ನಿಸುತ್ತಿದ್ದು, ತಮ್ಮ ಪರ ವಕೀಲರಿಗೆ ಕೋಟಿಗಟ್ಟಲೇ ಆಫರ್ ನೀಡಿದ್ದಾರೆ ಎಂದು ಯುವತಿ ಪತ್ರದಲ್ಲಿ ದೂರಿದ್ದಾರೆ.
ರಮೇಶ್ ಜಾರಕಿಹೊಳಿಯವರನ್ನು ಕೂಡಲೇ ಬಂಧಿಸಿ ಎಂದು ಅವರು ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ಮಗನ ಸ್ನೇಹಿತ ಅಮರ್‌ನಾಥ್‌ ಎನ್ನುವವರಿಂದ ಫೋನ್‌ಕಾಲ್ ಬಂದು ಆಮಿಷ ಒಡ್ಡಲಾಗುತ್ತಿದೆ, ಜತೆಗೆ ವಾಟ್ಸ್‌ಆ್ಯಪ್‌ ಕಾಲ್‌ ಕೂಡ ಬರುತ್ತಿದೆ. ವಕೀಲರು, ತನಿಖಾಧಿಕಾರಿ ಗಮನಕ್ಕೆ ಈ ವಿಷಯ ತರ್ತಿನಿ ಎಂದ ಕೂಡಲೇ ಕರೆ ಕಟ್ ಮಾಡುತ್ತಿದ್ದಾರೆ. 15 ದಿನಗಳಿಂದ ವಕೀಲರಿಗೆ ಕೋಟಿ ಕೋಟಿ ಆಮಿಷ ಒಡ್ಡಿದ್ದಾರೆ ಎಂದು ದೂರಿನಲ್ಲಿ ಯುವತಿ ಗಂಭೀರ ಆರೋಪ ಮಾಡಿದ್ದಾರೆ.
ಆಸ್ಪತ್ರೆಗಳ ಹಾಸಿಗೆ ಮಾರಾಟ ದಂಧೆಗೆ ಬೀಳಲಿದೆ ಕಡಿವಾಣ- ಸಿದ್ಧವಾಗಲಿದೆ ಹೊಸ ಸಾಫ್ಟ್‌ವೇರ್

ದುಡಿಯುವ ಅಹಂನಲ್ಲಿ ಬೇಡದ್ದೆಲ್ಲಾ ಮಾಡಿದೆ- ಇಳಿ ವಯಸ್ಸಿನಲ್ಲಿ ಪತ್ನಿ ಹತ್ತಿರ ಸೇರಿಸ್ತಿಲ್ಲ, ಏನು ಮಾಡಲಿ ಈಗ?

ಮೂರನೇ ಬಾರಿ ಸಿಎಂ ಆಗಿ ಗದ್ದುಗೆಗೇರಿದ ಮಮತಾ- ಆರು ತಿಂಗಳ ಒಳಗೆ ಗೆದ್ದರೆ ಖುರ್ಚಿ ಭದ್ರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + thirteen =
Remember me
