ಬೆಂಗಳೂರು:ವಿಧಾನಸಭಾ ಉಪಚುನಾವಣೆಯಲ್ಲಿ ತೀವ್ರ ಕೂತುಹಲದ ಕ್ಷೇತ್ರವಾಗಿರುವ ರಾಜರಾಜೇಶ್ವರಿ ನಗರಕ್ಕೆ ಮಾಜಿ ಶಾಸಕ ಮುನಿರತ್ನಗೆ ಬಿಜೆಪಿ ಟಿಕೆಟ್​ ಫಿಕ್ಸ್​ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಪ್ರತಿಯೊಂದನ್ನು ಕೂಲಂಕಶವಾಗಿ ಪರಿಶೀಲಿಸಿ ತೀರ್ಮಾನಿಸುತ್ತದೆ. ಏನೇ ಆದರೂ ಮುನಿರತ್ನ ಅವರೇ ಅಭ್ಯರ್ಥಿಯಾಗುವುದು ಖಚಿತ ಎಂದು ಅವರು ಪತ್ರಕರ್ತರ ಜತೆ ಮಾತನಾಡುತ್ತಾ ಹೇಳಿದ್ದಾರೆ.
ಮುನಿರತ್ನ ಅವರಿಗೆ ಟಿಕೆಟ್ ಕೈ ತಪ್ಪಲಿದೆ ಎಂಬ ವದಂತಿಯನ್ನು ಹಬ್ಬಿಸುತ್ತಿದ್ದಾರೆ. ಇದರಲ್ಲಿ ಎಳ್ಳಷ್ಟೂ ಸತ್ಯಾಂಶವಿಲ್ಲ. ನಾವೆಲ್ಲರೂ ಅವರಿಗೇ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದೇವೆ. ವರಿಷ್ಠರು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ವರಿಷ್ಠರು ತೊಡಗಿಸಿಕೊಂಡ ಕಾರಣ ರಾಜ್ಯದ ಎರಡು ಉಪಚುನಾವಣೆಗೆ ಟಿಕೆಟ್ ಘೋಷಣೆ ಮಾಡಲು ವಿಳಂಬವಾಗಿದೆ, ಆದರೆ ಮುನಿರತ್ನ ಅವರಿಗೇ ಟಿಕೆಟ್​ ನೀಡುವುದು ಖಚಿತ ಎಂದು ಹೇಳಿದರು.
ಇದನ್ನೂ ಓದಿ:ಬಿಗಿ ಬಂದೋಬಸ್ತ್​ನಲ್ಲಿ ಕೋರ್ಟ್​ಗೆ ಹಾಜರಾಗಲಿರುವ ಹಾಥರಸ್​ ಕುಟುಂಬ- ಇಂದು ವಿಚಾರಣೆ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾದ ನಾನೂ ಸೇರಿದಂತೆ ಎಲ್ಲರಿಗೂ ಟಿಕೆಟ್ ನೀಡಿರುವಾಗ ಒಬ್ಬರಿಗೆ ಟಿಕೆಟ್ ಕೈ ತಪ್ಪಿಸಲು ಸಾಧ್ಯವಿಲ್ಲ. ಒಂದು ವೇಳೆ ಟಿಕೆಟ್ ನೀಡುವುದು ನನ್ನ ಕೈಯಲ್ಲಿದ್ದರೆ ನಾನು ಮುನಿರತ್ನ ಅವರನ್ನು ಅಭ್ಯರ್ಥಿ ಎಂದು ಘೋಷಿಸುತ್ತಿದ್ದೆ ಎಂದೂ ಹೇಳಿದರು.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದರು. ಪಕ್ಷದ ಕೋರ್ ಕಮಿಟಿಯಲ್ಲಿ ನಡೆದ ನಿರ್ಧಾರದಂತೆ ಈ ಕ್ಷೇತ್ರದಿಂದ ಎರಡು ಹೆಸರುಗಳನ್ನು ಶಿಫಾರಸು ಮಾಡಲಾಗಿದೆ. ಏನೇ ಆದರೂ ಮುನಿರತ್ನ ಅಭ್ಯರ್ಥಿಯಾಗುವುದು ಖಚಿತ. ಯಾವ ಶಕ್ತಿಗಳೂ ಕೂಡ ಕೈ ತಪ್ಪಿಸಲು ಸಾಧ್ಯವಿಲ್ಲ ಎಂದು ಸುಧಾಕರ್ ಹೇಳಿದರು.
ಕಪ್ಪು ಬಣ್ಣದ ಭೀತಿಯಲ್ಲಿ ಪಾಕ್​ ಗಡಗಡ: 21ನೇ ತಾರೀಖು ಮುಹೂರ್ತ ಫಿಕ್ಸ್​? ವಿನಾಶದಿಂದ ಹೊರಬರಲು ಸರ್ಕಸ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three + six =
Remember me
