ಬೆಂಗಳೂರು: ಕರೊನಾ ಭೀತಿ, ಹೊಸ ಕರೊನಾ ಅಲೆ ಇವೆಲ್ಲವುಗಳ ನಡುವೆಯೇ ರಾಜ್ಯಾದ್ಯಂತ 10 ಮತ್ತು 12ನೇ ತರಗತಿಗಳು ಶುರುವಾಗಿದೆ. ತರಗತಿಗಳು ಆರಂಭವಾಗಿರುವ ಬೆನ್ನಲ್ಲೇ ಇದೀಗ ಖಾಸಗಿ ಶಾಲೆಗಳ ಶಿಕ್ಷಕರು ಸರ್ಕಾರಕ್ಕೆ ಶಾಕ್​ ನೀಡಿದ್ದಾರೆ. ಇದೇ 6ರ ಬುಧವಾರ ಶಾಲೆ ಕ್ಲೋಸ್​ ಮಾಡುವುದಾಗಿ ಹೇಳಿದ್ದಾರೆ.
ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ- ರುಪ್ಸಾ (RECOGNIZED UNAIDED PRIVATE SCHOOLS ASSOCIATION-RUPSA) ಇದರ ಅಡಿ ಬರುವ ಎಲ್ಲಾ ಶಾಲೆಗಳನ್ನು ಬಂದರ್​ ಮಾಡುವುದಾಗಿ ರುಪ್ಸಾ ಹೇಳಿದೆ.
ಹೀಗೆ ಆದಲ್ಲಿ ರುಪ್ಸಾ ಅಡಿ ಬರುವ ಈ 12,800 ಶಾಲೆಗಳು ಪುನಃ ಕ್ಲೋಸ್​ ಆಗಲಿವೆ. ಅಷ್ಟಕ್ಕೂ ಇಂಥದ್ದೊಂದು ನಿರ್ಧಾರ ತೆಗೆದುಕೊಳ್ಳಲು ಕಾರಣ, ಒಕ್ಕೂಟದ 15 ಬೇಡಿಕೆಗಳನ್ನು ಸರ್ಕಾರ ಈಡೇರಿಸಿಲ್ಲವಂತೆ. ಕಳೆದ ಕೆಲ ದಿನಗಳ ಹಿಂದೆ ತಾವು ಆನ್​ಲೈನ್​ ಕ್ಲಾಸ್​ ಬಂದ್​ ಮಾಡುವಾಗ ಹೇಳಿದ ಸಂದರ್ಭದಲ್ಲಿ, ಮೂರು ದಿನಗಳಲ್ಲಿ ತಮ್ಮ 15 ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ ಇದುವರೆಗೂ ಈಡೇರಿಸಿಲ್ಲ ಎನ್ನುವುದು ಸಂಘದ ಆರೋಪ.
ಈವರೆಗೆ ಯಾವುದೇ ಭರವಸೆಯನ್ನು ಈಡೇರಿಸದ ಕಾರಣ ಅನಿವಾರ್ಯವಾಗಿ ನಾವು ಮತ್ತೆ ಪ್ರತಿಭಟನೆ ಮಾಡಬೇಕಾಗಿದೆ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕೋಟೆ ಹೇಳಿದ್ದಾರೆ. ಆಗ ಭರವಸೆ ಈಡೇರಿಸುವುದಾಗಿ ಹೇಳಿದ್ದರಿಂದ ನಮ್ಮ ಪ್ರತಿಭಟನೆ ವಾಪಸ್ ಪಡೆದಿದ್ದೆವು. ಈಗ ಸರ್ಕಾರ ಯಾವ ಬೇಡಿಕೆಗಳನ್ನೂ ಈಡೇರಿಸಿಲ್ಲ ಎಂದು ಹೇಳಿದರು.
ಈ ಒಕ್ಕೂಟ ಕೆಲವು ಬೇಡಿಕೆಗಳ ಕುರಿತು ಅವರು ನೀಡಿರುವ ಮಾಹಿತಿ ಎಂದರೆ:* ಸಾಲ ಪಡೆದು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದೇವೆ. ಸಾಲದ ಇಎಂಐಅನ್ನು ಕನಿಷ್ಠ ಒಂದು ವರ್ಷದವರೆಗೆ ಮುಂದೂಡಲು ಬ್ಯಾಂಕ್‍ಗಳಿಗೆ ಸರ್ಕಾರ ಸೂಚಿಸಬೇಕು.
* 1995ರಿಂದ 2000ದ ಅವಯಲ್ಲಿ ಪ್ರಾರಂಭವಾದ ಅನುದಾನ ರಹಿತ ಶಾಲೆಗಳನ್ನು ಅನುದಾನಿತ ಶಾಲೆಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳಬೇಕು.
* ಮೂಲಭೂತ ಸೌಕರ್ಯ ಕೊರತೆ ನೆಪದಲ್ಲಿ ಮುಚ್ಚಲು ಹೊರಟಿರುವ ಬೀದರ್ ಜಿಲ್ಲೆಯ 124 ಶಾಲೆಗಳನ್ನು ಮುಚ್ಚಬಾರದು.
* ಖಾಸಗಿ ಶಿಕ್ಷಣ ಸಂಸ್ಥೆಗಳ ನವೀಕರಣವನ್ನು ಐಸಿಎಸ್‍ಸಿ ಮತ್ತು ಸಿಬಿಎಸ್‍ಸಿ ಶಾಲೆಗಳ ರೀತಿಯಲ್ಲಿ ತಾಲ್ಲೂಕು ಹಂತದಲ್ಲಿ ಅದಾಲತ್ ನಡೆಸಿ ನವೀಕರಿಸಿ ಪ್ರಮಾಣ ಪತ್ರ ನೀಡಬೇಕು.
* ಗ್ರಾಮೀಣ ಹಾಗೂ ಸಣ್ಣ ಬಜೆಟ್ ಶಾಲೆಗಳ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಅಭಿವೃದ್ಧಿ ಪ್ರಾಕಾರ ಸ್ಥಾಪನೆ ಮಾಡಬೇಕು.
* ರಾಜ್ಯ ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯಗಳು ಖಾಸಗಿ ಶಾಲಾ ನೌಕರರಿಗೂ ಸಿಗುವಂತೆ ನೋಡಿಕೊಳ್ಳುವುದು, ಕೋವಿಡ್ ಸಂದರ್ಭದಲ್ಲಿ ಮಕ್ಕಳ ಕಲಿಕೆಗೆ ಅನುಕೂಲವಾಗಲು ಪಠ್ಯವನ್ನು ಕಡಿತಗೊಳಿಸಿ ತಕ್ಷಣವೇ ಪಠ್ಯಕ್ರಮ ಹಾಗೂ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಬೇಕು ಇತ್ಯಾದಿ.
ಬಾಬಾ ರಾಮ್‌ದೇವ್‌ರನ್ನು ನೃತ್ಯಕ್ಕೆ ಆಹ್ವಾನಿಸಿ ಸುಸ್ತಾದ ಬಾಲಿವುಡ್​ ನಟ! ಈ ವಿಡಿಯೋ ನೋಡಿ

ಭೂಲೋಕದ ಸ್ವರ್ಗದ ದರ್ಶನ ಮಾಡಿರುವಿರಾ? ಇಲ್ಲಿದೆ ನೋಡಿ ಕಣ್ಮನ ಸೆಳೆಯುವ ವಿಡಿಯೋ…

ಅನಾರೋಗ್ಯದಿಂದ ಬಳಲುತ್ತಿರುವವರು ವಿಲ್‌ ಬರೆದರೆ ಅದು ಮಾನ್ಯವಾಗುತ್ತಾ?

ಬೇರೆ ಹೆಣ್ಣಿನತ್ತ ಕಣ್ಣೆತ್ತಿಯೂ ನೋಡಲ್ಲ, ಆದರೂ ಪತ್ನಿ ಒದೀತಾಳೆ, ಹೊಡೀತಾಳೆ… ಏನು ಮಾಡಲಿ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − ten =
Remember me
