ಕೊಪ್ಪಳ:ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರವಷ್ಟೇ ಪ್ರಕಟವಾಗಿದೆ. ಹಲವು ವಿದ್ಯಾರ್ಥಿಗಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ನೋವಿನ ಸಂಗತಿ. ಆದರೆ, ಇಪ್ಪತ್ತು ವರ್ಷಗಳ ಹಿಂದೆ ಪರೀಕ್ಷೆಯಲ್ಲಿ ಫೇಲಾದ ತಂದೆಯೊಬ್ಬರು ಮಗನೊಂದಿಗೆ ಅಭ್ಯಾಸ ಮಾಡಿ ಪರೀಕ್ಷೆ ಬರೆದಿರುವುದಲ್ಲದೇ ಪುತ್ರನಿಗಿಂತ ಹೆಚ್ಚು ಅಂಕ ಪಡೆದು ಪಾಸಾಗಿದ್ದಾರೆ.
ಕೊಪ್ಪಳ ನಗರಸಭೆ ಮಾಜಿ ಸದಸ್ಯ ಪ್ರಾಣೇಶ ಮಹೇಂದ್ರಕರ್ ಎಂಬುವರು 1999ರಲ್ಲಿ ಗವಿಸಿದ್ದೇಶ್ವರ ಕಾಲೇಜಿನಲ್ಲಿ ಶಿಕ್ಷಣ ವಿಭಾಗದಲ್ಲಿ ದ್ವೀತಿಯ ಪಿಯುಸಿ ಮುಗಿಸಿದ್ದಾರೆ. ಎಲ್ಲ ವಿಷಯಗಳಲ್ಲಿ ಪಾಸ್ ಆದರೂ, ಇಂಗ್ಲಿಷ್​ನಲ್ಲಿ ಅನುತ್ತೀರ್ಣಗೊಂಡಿದ್ದರು.
2000ರಲ್ಲಿ ಮರು ಪರೀಕ್ಷೆ ಕಟ್ಟಿದರೂ ತೇರ್ಗಡೆಯಾಗಿರಲಿಲ್ಲ. ಅಲ್ಲಿಗೆ ಪ್ರಯತ್ನ ಕೈ ಬಿಟ್ಟಿದ್ದರು. ಈ ವರ್ಷ ಇವರ ಪುತ್ರ ವಿನಾಯಕ ದ್ವಿತೀಯ ಪಿಯುಸಿ ಪೂರ್ಣಗೊಳಿಸಿದ್ದಾನೆ. ಮಗನೊಂದಿಗೆ ಪರೀಕ್ಷೆ ಕಟ್ಟಿದ ಪ್ರಾಣೇಶ್ ಇಂಗ್ಲಿಷ್ ನಲ್ಲಿ 40 ಅಂಕಗಳಿಸಿ ಪಾಸಾಗಿದ್ದಾರೆ. ಇವರು ಒಟ್ಟಾರೆ 344 ಅಂಕ ಪಡೆದಿದ್ದರೆ, ಇವರ ಮಗ 333 ಅಂಕ ಪಡೆದಿದ್ದಾನೆ. ಮಗನಿಗಿಂತ 10 ಹೆಚ್ಚು ಅಂಕಗಳನ್ನು ಪಡೆದಿದ್ದು, ಓದಿಗೆ ವಯಸ್ಸಿನ ಹಂಗಿಲ್ಲವೆಂದು ಸಾಬೀತು ಮಾಡಿದ್ದಾರೆ.
ಈ ಕುರಿತು ಮಾತನಾಡಿರುವ ಪ್ರಾಣೇಶ ಮಹೇಂದ್ರಕರ್, ಅಂಕಗಳು ಜೀವನದ ಮಾನದಂಡವಲ್ಲ. ಮೊದಲು ನಾನು ಫೇಲಾದೆ ಎಂಬ ಭಾವ ಇತ್ತು. ಅದನ್ನು ಬದಿಗಿಟ್ಟು ಜೀವನ ಕಟ್ಟಿಕೊಂಡಿದ್ದೇವೆ. ನನ್ನ ಮಗ ದ್ವಿತೀಯ ಪಿಯುಸಿ ಇದ್ದ ಕಾರಣ ಆತನೊಂದಿಗೆ ಪರೀಕ್ಷೆ ಕಟ್ಟಿ ಈಗ ಉತ್ತೀರ್ಣನಾಗಿರುವೆ. ಯಾವ ಮಕ್ಕಳು ನಪಾಸಾದವೆಂದು ಬೇಸರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದಿದ್ದಾರೆ.
29 ವರ್ಷಗಳ ಬಳಿಕ ಪಿಯು ಪರೀಕ್ಷೆ ಬರೆದ ಶಾಸಕರ ಪತ್ನಿ ಫಸ್ಟ್​ ಕ್ಲಾಸ್​ನಲ್ಲಿ ಪಾಸ್

‘ಅಗ್ನಿಪಥ್’​ಗೆ ನೇಮಕಾತಿ ಶುರು: ಏನೆಲ್ಲಾ ಸೌಲಭ್ಯಗಳಿವೆ? ಅರ್ಹತೆ ಏನು? ವೇತನವೆಷ್ಟು? ಸಂಪೂರ್ಣ ಡಿಟೇಲ್ಸ್​ ಇಲ್ಲಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
