ಚಿಕ್ಕಬಳ್ಳಾಪುರ:ಶಿಡ್ಲಘಟ್ಟ ಜೆಡಿಎಸ್ ಕಾರ್ಯಕರ್ತ ಚಿಕ್ಕ ಅಂಜಿನಪ್ಪ ಸಾವಿನ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಇದು ಸಾವಲ್ಲ ಬದಲಿಗೆ ಕೊಲೆ ಎನ್ನುವುದು ತನಿಖೆಯಿಂದ ತಿಳಿದುಬಂದಿದೆ.
ಶಿಡ್ಲಘಟ್ಟ ಹಾಗೂ ಚೀಮಮಂಗಲ ಮಾರ್ಗದ ನಾರಾಯಣದಾಸರಹಳ್ಳಿ ಬಳಿ ಜೂನ್ 02 ರ ರಾತ್ರಿ 10 ಗಂಟೆ ಸುಮಾರಿಗೆ ಚಿಕ್ಕ ಅಂಜಿನಪ್ಪ ರಸ್ತೆ ಮಧ್ಯೆ ಬೈಕ್ ಸಮೇತ ಬಿದ್ದು ತಲೆಯಲ್ಲಿ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದರು. ಮೇಲ್ನೋಟಕ್ಕೆ ಇದು ಬೈಕ್​ ಅಪಘಾತ ಎನ್ನುವಂತೆ ಬಿಂಬಿಸಲಾಗಿತ್ತು. ಎಲ್ಲರೂ ಹಾಗೆಯೇ ಅಂದುಕೊಂಡಿದ್ದರು.
ಆದರೆ ಪೊಲೀಸರು ಈ ಸಾವಿನ ಪ್ರಕರಣವನ್ನು ಭೇದಿಸಿದ್ದಾರೆ. ಇದು ಅಪಘಾತದ ಸಾವಲ್ಲ, ಬದಲಿಗೆ ಕೊಲೆ ಎನ್ನುವುದು ತಿಳಿದುಬಂದಿದೆ. ಕೊಲೆಗೆ ಸಂಬಂಧಿಸಿದಂತೆ ಕೊಂಡ ಅಲಿಯಾಸ್ ವೆಂಕಟೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ವೈಯುಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ. ಆರೋಪಿ ವೆಂಕಟೇಶ್​ನ ಅಣ್ಣ ನಾಗೇಶ್​ ಹೆಸರಿನಲ್ಲಿ ಜಮೀನು ಖಾತೆ ಮಾಡಿಕೊಳ್ಳಲು ಚಿಕ್ಕ ಅಂಜಿನಪ್ಪ ಸಹಾಯ ಮಾಡುತ್ತಿದ್ದುದೇ ಅವರ ಜೀವಕ್ಕೆ ಕುತ್ತಾಗಿ ಪರಿಣಮಿಸಿದೆ. ಅಣ್ಣನಿಗೆ ಸಹಾಯ ಮಾಡುತ್ತಿರುವ ಕಾರಣ, ತಮ್ಮ ಈ ಕೊಲೆ ಮಾಡಿದ್ದಾನೆ!
ತಾಲೂಕು ಕಚೇರಿಯಲ್ಲಿ ಭೂ ದಾಖಲೆಗಳನ್ನ ಮಾಡಿಸುವುದಲ್ಲಿ ಚಿಕ್ಕ ಅಂಜಿನಪ್ಪ ಎಕ್ಸ್​ಪರ್ಟ್​ ಆಗಿದ್ದರು. ನನಗೆ ಯಾವುದೇ ಆಸ್ತಿಬಾರದೆ ಇರುವ ಹಾಗೆ ಮಾಡಿ ಬಿಡುತ್ತಾನೆ ಎಂದು ಹೆದರಿಗೆ ವೆಂಕಟೇಶ್​ ಈ ಕೊಲೆ ಮಾಡಿದ್ದಾನೆ. ವೆಂಕಟೇಶ್​ ಬೈಕ್​ನಲ್ಲಿ ಬರುತ್ತಿದ್ದ ವೇಳೆ ಬೈಕ್​ ನಿಲ್ಲಿಸಿ ದೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಿ ನಂತರ ಅಪಘಾತದ ರೀತಿಯಲ್ಲಿ ಬಿಂಬಿಸಲು ಹೋಗಿದ್ದ. ಆದರೆ ಈಗ ಸಿಕ್ಕಿಬಿದ್ದಿದ್ದಾನೆ. ಪೊಲಿಸರು ಆತನನ್ನು ಬಂಧಿಸಿದ್ದಾರೆ.
‘ಆ ಇನ್ಸ್‌ಪೆಕ್ಟರ್‌ನ ರೌಡಿಸಂ ನನ್ನತ್ರ ನಡಿಯಲ್ಲ, ಎಲ್ಲಾ ಮಾಡೇ ಬಂದವ ನಾನು… ಮೂರನೇ ಕಣ್ಣು ಬಿಟ್ರೆ ಅಷ್ಟೇ..’
ಪತ್ನಿಯಿಂದ ವರದಕ್ಷಿಣೆ ಕಿರುಕುಳ ಕೇಸ್​: ಗಂಡ, ಮನೆಯವರಿಗೆ ಹೈಕೋರ್ಟ್​ನಿಂದ ಗುಡ್​ ನ್ಯೂಸ್​!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
