ಬೆಂಗಳೂರು:ತ್ರಿವಳಿ ತಲಾಖ್​ ನಿಷೇಧವಾಗಿ ವರ್ಷಗಳೇ ಕಳೆದರೂ, ಅದನ್ನು ನೀಡುವವರು ಮಾತ್ರ ಕಮ್ಮಿಯಾಗಲಿಲ್ಲ. ಅದೇ ರೀತಿಯ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಲಿಫ್ಟ್​ನಲ್ಲಿ ತ್ರಿವಳಿ ತಲಾಖ್ ಹೇಳಿದ್ದಾನೆ ಪತಿರಾಯ. ಈತನ ವಿರುದ್ಧ ಪತ್ನಿ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಮೊಹಮ್ಮದ್ ಅಕ್ರಂ ವಿರುದ್ಧ ಪತ್ನಿ ವರದಕ್ಷಿಣೆ ಕಿರುಕುಳ ಸೇರಿದಂತೆ ತ್ರಿವಳಿ ತಲಾಖ್​ ವಿರುದ್ಧ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಮದುವೆಯ ಸಂದರ್ಭದಲ್ಲಿ ತಮ್ಮ ತವರಿನವರು ಪತಿಗೆ ಒಟ್ಟು 30 ಲಕ್ಷ ವಸ್ತುಗಳನ್ನು ವರದಕ್ಷಿಣೆಯಾಗಿ ನೀಡಿದ್ದರು. ಆದರೆ ತಮ್ಮ ಪತಿ ಇನ್ನೂ ಹೆಚ್ಚಿನ ಹಣಕ್ಕೆ ಬೇಡಿಕೆ ಒಡ್ಡಿದ್ದರು. ಇದು ಕೊಡದ ಕಾರಣ, ಹಿಂಸೆ ನೀಡುತ್ತಿದ್ದಾರೆ ಎಂದು ತಸ್ಮಿಯಾ ಹುಸೇನಿ ದೂರು ದಾಖಲಿಸಿದ್ದಾರೆ.
ತಾವು ರಂಜಾನ್ ಹಬ್ಬಕ್ಕೆ ತವರಿಗೆ ಹೋದಾಗ 10 ಲಕ್ಷ ರೂಪಾಯಿ ತರಲು ಹೇಳಿದ್ದ. ಹಣ ತರದಿದ್ದಲ್ಲಿ ಮನೆಗೆ ಸೇರಿಸೋದಿಲ್ಲ ಎಂದಿದ್ದ. ನಂತರ ನಾನು ಅದನ್ನು ಕೊಡಲು ಆಗಿರಲಿಲ್ಲ. ಆಗ ಅಪಾರ್ಟ್​ಮೆಂಟ್​ ಒಂದಕ್ಕೆ ಕರೆಸಿಕೊಂಡಿದ್ದ ಪತಿ, ಹಣ ನೀಡಿಲ್ಲ ಅಂದ್ರೆ ಮಂಗಳಸೂತ್ರ ಬಿಚ್ಚಿ ಕೊಡುವಂತೆ ಹೇಳಿದ್ದ. ಇದಕ್ಕೆ ಒಪ್ಪಲಿಲ್ಲ. ಅಪಾರ್ಟ್​ಮೆಂಟ್​ನಿಂದ ಲಿಫ್ಟ್​ನಲ್ಲಿ ಹೋಗುತ್ತಿದ್ದಾಗ ಮೂರು ಬಾರಿ ತಲಾಖ್ ಹೇಳಿ ಪತ್ನಿಯನ್ನ ಹೊರ ದಬ್ಬಿದ್ದ ಎಂದು ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ.
ಸದ್ಯ ಪತಿ ಅಕ್ರಂ ವಿರುದ್ಧ ಬೆಂಗಳೂರಿನ ಸುದ್ಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.
ಚಿಕನ್ ಅಂಗಡಿ ತೆರೆದಿದ್ದೇ ಪ್ರಾಣಕ್ಕೆ ಮುಳುವು? ಪ್ರವೀಣ್​ಗೆ ಮೊದಲೇ ಸಿಕ್ಕಿತ್ತಾ ಸಾವಿನ ಸುಳಿವು? ಸಹೋದರ ನೀಡಿದರು ಸ್ಫೋಟಕ ಹೇಳಿಕೆ

ಶಾಲೆ ಪ್ರವೇಶಿಸ್ತಿದ್ದಂತೆಯೇ ವಿದ್ಯಾರ್ಥಿನಿಯರ ಮೈಮೇಲೆ ಬರ್ತಿದೆ ‘ದೆವ್ವ’! ಕಿರುಚುತ್ತಾ, ಕೂದಲು ಕೆದರಿಕೊಳ್ತಿರೋ ಮಕ್ಕಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + seven =
Remember me
