ಮಹದೇಶ್ವರ ಬೆಟ್ಟ:ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಉತ್ತರಾಧಿಕಾರಿ ಎಂ.ನಾಗೇಂದ್ರ (ಶ್ರೀಶಾಂತಮಲ್ಲಿಕಾರ್ಜುನ ಸ್ವಾಮೀಜಿ ) ಅವರ ಪಟ್ಟಾಭಿಷೇಕ ಮಹೋತ್ಸವ ಇಂದು(ಶನಿವಾರ) ಬೆಳಗ್ಗೆ 4.30ಕ್ಕೆ ಬ್ರಾಹ್ಮೀ ಮುಹೂರ್ತದಲ್ಲಿ ನೆರವೇರಿತು.
ಪಟ್ಟಾಭಿಷೇಕದ ಅಂಗವಾಗಿ ಮಠದಲ್ಲಿ ಬೆಳಗ್ಗೆ ಪಂಚಕಳಸ ಪೂಜಾಪೂರ್ವಕ, ಶ್ರೀ ಕರ್ತೃ ಗದ್ದುಗೆಗಳಿಗೆ ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಅಷ್ಟೋತ್ತರ ಶತನಾಮಾವಳಿ ಹಾಗೂ ಇನ್ನಿತರ ಪೂಜಾ ಕೈಂಕರ್ಯಗಳು ಜರುಗಿದವು. ಈ ವೇಳೆ ನಿಕಟಪೂರ್ವ ಮಠಾಧ್ಯಕ್ಷ ಶ್ರೀಗುರುಸ್ವಾಮಿ ಅವರು ನಾಗೇಂದ್ರ ಅವರನ್ನು ಆಶೀರ್ವದಿಸಿದರು.
ಇದನ್ನೂ ಓದಿರಿದೇವಸ್ಥಾನದ ನಿಧಿ ದೋಚಲು ಬಂದವ ಸ್ಥಳದಲ್ಲೇ ದುರ್ಮರಣ, ಮೂವರ ಸ್ಥಿತಿ ಗಂಭೀರ
ಬಳಿಕ ನಾಗೇಂದ್ರ ಅವರು ಗುರುಸ್ವಾಮಿ ಸೇರಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಕನಕಪುರ ದೇಗುಲ ಮಠದ ಡಾ.ಮುಮ್ಮಡಿ ನಿರ್ವಾಣ ಸ್ವಾಮೀಜಿ ಅವರಿಗೆ ಪಾದಪೂಜೆ ನೆರವೇರಿಸಿ ಆಶೀರ್ವಾದ ಪಡೆದರು. ಆ ಮೂಲಕ ಸಾಲೂರು ಬೃಹನ್ಮಠದ 17ನೇ ಮಠಾಧಿಪತಿಯಾಗಿ ಪೀಠ ಅಲಂಕರಿಸಿದರು.
ಮಠದ ಗುರು ಸ್ವಾಮೀಜಿ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಾರೆ. ಕಿರಿಯ ಶ್ರೀಗಳಾಗಿದ್ದ ಇಮ್ಮಡಿ ಮಹದೇವಸ್ವಾಮಿ ‘ಸುಳ್ವಾಡಿ ವಿಷ ಪ್ರಸಾದ ಪ್ರಕರಣ’ದಡಿ ಜೈಲು ಸೇರಿದ್ದು, ಮಠ ಮುನ್ನಡೆಸುವ ಮಹತ್ತರ ಜವಾಬ್ದಾರಿಯನ್ನು ಹನೂರು ತಾಲೂಕಿನ ಬಂಡಹಳ್ಳಿ ಗ್ರಾಮದ ಸುಂದ್ರಮ್ಮ ಮತ್ತು ಮಹದೇವಪ್ಪ ದಂಪತಿ ಪುತ್ರ ನಾಗೇಂದ್ರ ಅವರಿಗೆ ವಹಿಸಲಾಗಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fifteen − eleven =
Remember me
