ಬಾಗಲಕೋಟೆ:ಕರೊನಾ ವಾರಿಯರ್​ಗಳಿಗೆ ಸೀರೆ ಗಿಫ್ಟ್ ಕೊಡಲು ಸರ್ಕಾರ ಸಜ್ಜಾಗಿದ್ದು, ಆ ಮೂಲಕ ಸಂಕಷ್ಟದಲ್ಲಿರುವ ನೇಕಾರರಿಗೆ ನೆರವು ನೀಡಲಿದೆ.
ರಾಜ್ಯದಲ್ಲಿ ಕಾರೊನಾ ಸೋಂಕು ಮಣಿಸುವ ಹೋರಾಟದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಆಶಾ, ಅಂಗನವಾಡಿ ಸೇರಿ ವಿವಿಧ ಇಲಾಖೆಯ ಕಾರ್ಯಕರ್ತೆಯರಿಗೆ ಸೀರೆಗಳನ್ನು ಗಿಫ್ಟ್ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಜವಳಿ ಸಚಿವ ಶ್ರೀಮಂತ ಪಾಟೀಲ ಹೇಳಿದರು.
ಇದನ್ನೂ ಓದಿರಿರಾತ್ರಿಯಿಡೀ ಪರದಾಡಿದ ನಟಿ ಸುಧಾರಾಣಿ, ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮ; ಡಾ.ಕೆ. ಸುಧಾಕರ್
ಕರೊನಾ ಪರಿಣಾಮ ನೇಕಾರರ ಬದುಕು ಬೀದಿಗೆ ಬಿದ್ದಿದೆ. ಇರುವ ಬಟ್ಟೆಗಳ ವ್ಯಾಪಾರವೂ ಆಗದೆ, ಇತ್ತ ಕೆಲಸವೂ ಇಲ್ಲದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂಕಷ್ಟಕಾಲದಲ್ಲಿ ನೇಕಾರರಿಗೆ ನೆರವಾಗಲು ಯೋಜಿಸಿದ ಸರ್ಕಾರ, ಅವರಿಂದ ಸೀರೆಗಳನ್ನು ಖರೀದಿಸಲಿದೆ. ಆ ಸೀರೆಗಳನ್ನು ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಉಡುಗೊರೆಯಾಗಿ ನೀಡುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಲಾಗುವುದು ಎಂದು ಸಚಿವ ಶ್ರೀಮಂತ ಪಾಟೀಲ ತಿಳಿಸಿದರು.
ಸದ್ಯ 6 ಲಕ್ಷ ಸೀರೆ ಖರೀದಿ ಮಾಡುತ್ತೇವೆ. ಇದಕ್ಕೆ ಸಿಎಂ ಯಡಿಯೂರಪ್ಪ ಕೂಡ ಒಪ್ಪಿದ್ದಾರೆ ಎಂದು ವಿವರಿಸಿದರು.
ಮಗಳ ಸಾವಿನ ಸೇಡಿಗೆ ಪ್ರಿಯಕರನ ಕೊಲೆ, ಎರಡೂ ಕುಟುಂಬಗಳ ದ್ವೇಷದ ಜ್ವಾಲೆಗೆ ಹಾಡಹಗಲೇ ಹೊತ್ತಿ ಉರಿದ ಮನೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + twenty =
Remember me
