ಬೆಂಗಳೂರು:ರಾಜ್ಯದ ರಾಜಧಾನಿಯ ಸಮೀಪ ಮತ್ತೊಂದು ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ. ಇದನ್ನು ಎಲ್ಲಿ ನಿರ್ಮಿಸಬೇಕು ಎನ್ನುವ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆ ಮತ್ತು ಮುಖ್ಯಮಂತ್ರಿಗಳ ಜತೆ ವಿಚಾರ ವಿನಿಮಯ ನಡೆಸಿ ತೀರ್ಮಾನಿಸಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎರಡನೇ ಏರ್ಪೋರ್ಟ್ ಅಭಿವೃದ್ಧಿ ಕುರಿತು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯಲ್ಲಿ ಒಂದು ಸಭೆ ನಡೆದಿದೆ. ಸದ್ಯಕ್ಕೆ ಬಿಐಎಎಲ್ ಜತೆ ಚಾಲ್ತಿಯಲ್ಲಿರುವ ಒಪ್ಪಂದದಲ್ಲಿ 2033ರವರೆಗೂ 150 ಕಿ.ಮೀ. ಅಂತರದಲ್ಲಿ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸಬಾರದು ಎಂಬ ಷರತ್ತಿದೆ. ನಾವು ಈಗಿನಿಂದಲೇ ಕಾರ್ಯ ಪ್ರವೃತ್ತರಾದರೆ ಇನ್ನು ಎಂಟು ವರ್ಷಗಳಲ್ಲಿ ಪ್ರಗತಿ ಸಾಧಿಸಬಹುದು ಎಂದರು.ಪ್ರಯಾಣಿಕರ ಒತ್ತಡ ನೋಡಿದರೆ ಬೆಂಗಳೂರಿನ ದಕ್ಷಿಣ ಭಾಗ, ಕನಕಪುರ ಇತ್ಯಾದಿ ಭಾಗಗಳಿವೆ. ಈಗಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲೇ ನೂತನ ವಿಮಾನ ನಿಲ್ದಾಣವು ಬರಬೇಕು ಎಂದಾದರೆ ದಾಬಸಪೇಟೆ, ತುಮಕೂರು ಇತ್ಯಾದಿಗಳು ಬರುತ್ತವೆ. ಇವೆಲ್ಲವನ್ನೂ ಪರಿಗಣಿಸಿ ಸ್ಥಳ ನಿಗದಿ, ಭೂ ಸ್ವಾಧೀನ, ಪರಿಹಾರ ಹಂಚಿಕೆ ಇತ್ಯಾದಿಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದರು.
ಮುಂಬಯಿ ನಗರದಲ್ಲಿ ಎರಡು ವಿಮಾನ ನಿಲ್ದಾಣಗಳ ನಡುವೆ ಕೇವಲ 36 ಕಿ.ಮೀ. ಅಂತರವಿದೆ. ನ್ಯೂಯಾರ್ಕ್ ಮತ್ತು ಲಂಡನ್ ನಗರಗಳಲ್ಲಿ ಕೂಡ ಹೆಚ್ಚು ದೂರವಿಲ್ಲ. ಜೊತೆಗೆ ಬಿಐಎಎಲ್ ಹೊಂದಿರುವ ಷರತ್ತು ತಮಿಳುನಾಡಿಗೂ ಅನ್ವಯಿಸುತ್ತದೋ ಇಲ್ಲವೋ ಪರಿಶೀಲಿಸಬೇಕು ಎಂದರು.ನಾವು ಎರಡನೇ ವಿಮಾನ ನಿಲ್ದಾಣದ ಬಗ್ಗೆ ಮಾತನಾಡಿದ ಮೇಲೆ ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ಏರ್ಪೋರ್ಟ್ ಕಟ್ಟುವುದಾಗಿ ಹೇಳುತ್ತಿದೆ. ಇದರ ಸಾಧಕ-ಬಾಧಕಗಳನ್ನು ಅಧ್ಯಯನ ಮಾಡಲಾಗುವುದು ಎಂದು ಎಂ.ಬಿ.ಪಾಟೀಲ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − five =
Remember me
