ಬೆಂಗಳೂರು:ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಮತದಾನದ ಹಿನ್ನೆಲೆಯಲ್ಲಿ ನ.1ರ ಸಂಜೆ 6 ಗಂಟೆಯಿಂದ ನ.4ರ ಸಂಜೆ 6 ಗಂಟೆವರೆಗೆ ಕ್ಷೇತ್ರದಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ನಿಷೇಧಾಜ್ಞೆ ವಿಧಿಸಿದ್ದಾರೆ.
ನ.3ರಂದು ಮತದಾನ ನಡೆಯಲಿದೆ. ಶಾಂತಿಯುತ ಮತದಾನದ ಸಲುವಾಗಿ ನಿಷೇಧಾಜ್ಞೆ ಹೊರಡಿಸಿದ್ದು, 5ಕ್ಕಿಂತ ಹೆಚ್ಚಿನ ಜನರು ಗುಂಪು ಸೇರುವಂತಿಲ್ಲ. ಮೆರವಣಿಗೆ, ಪ್ರತಿಭಟನೆ ಮಾಡುವಂತಿಲ್ಲ. ಮಾರಕಾಸ್ತ್ರ ಮತ್ತು ಸ್ಫೋಟಕ ವಸ್ತು ಸಾಗಾಟ, ಪ್ರಚೋದನಕಾರಿ ಭಾಷಣ, ಬ್ಯಾನರ್ ಪ್ರದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ.
ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವಯ ಮತದಾನದ ಹಿಂದಿನ 48 ಗಂಟೆಗಳ ಅವಧಿಯಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರು 10 ಸಂಖ್ಯೆ ಮೀರದಂತೆ ಮನೆ ಮನೆಗೆ ಭೇಟಿ ಕೊಟ್ಟು ಚುನಾವಣಾ ಪ್ರಚಾರ ನಡೆಸಲು ವಿನಾಯಿತಿ ನೀಡಲಾಗಿದೆ.
ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು ಹಾಗೂ ದೇವಸ್ಥಾನ, ಚರ್ಚ್ ಮತ್ತು ಮಸೀದಿಗಳಲ್ಲಿ ಪ್ರಾರ್ಥನೆಗೆ ಹಾಗೂ ಪೊಲೀಸರಿಂದ ಅನುಮತಿ ಪಡೆದಿರುವರಿಗೆ ಈ ನಿಷೇಧಾಜ್ಞೆ ಅನ್ವಯಿಸುವುದಿಲ್ಲ ಎಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ.
ದೆಹಲಿ ಮಹಾರಾಣಿಗೆ ಖುಷಿ ತರುವ ಕೆಲಸ ಮಾಡಿದರೆ ಬಡ್ತಿ ನೀಡುವ ಪಕ್ಷದಂಥಲ್ಲ ನಮ್ಮ ಬಿಜೆಪಿ: ಸಿ.ಟಿ.ರವಿ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:ten + 12 =
Remember me
