ಬೆಂಗಳೂರು:ಅಪರಾಧ ಪ್ರಕರಣಗಳಲ್ಲಿ ಜಪ್ತಿ ಮಾಡಿದ ವಾಹನಗಳ ಶೀಘ್ರ ವಿಲೇವಾರಿಗೆ ಹೈಕೋರ್ಟ್ ಸೂಚನೆ ನೀಡಿದೆ. ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಪೀಠ, ಬಾಂಡ್ ಪಡೆದುಕೊಂಡು ವಾಹನಗಳನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಸೂಚನೆ ನೀಡಿದೆ. ಧನತೇಜಾ ಎಂಬುವವರು ಹೈಕೋರ್ಟ್​​​​​ಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರಣೆ ವೇಳೆ ನ್ಯಾಯಾಲಯದಿಂದ ಆದೇಶ ಹೊರಬಿದ್ದಿದೆ.
‘ಅನಗತ್ಯವಾಗಿ ಠಾಣೆಗಳ ಮುಂದೆ ವಾಹನಗಳನ್ನು ನಿಲ್ಲಿಸುವುದರಿಂದ ಯಾವುದೇ ಪ್ರಯೋಜನ ಇಲ್ಲ, ಇದರ ಬದಲಾಗಿ ಬಾಂಡ್ ಪಡೆದು ತ್ವರಿತವಾಗಿ ವಿಲೇವಾರಿ ಮಾಡಬೇಕು..’ ಎಂದು ಹೈಕೋರ್ಟ್ ಹೇಳಿದೆ.
ನಗರದ ಪೊಲೀಸ್ ಠಾಣೆಗಳಲ್ಲಿ ಸಾವಿರಾರು ವಾಹನಗಳು ಬಿಡುಗಡೆಯಾಗದೆ ಪೊಲೀಸ್​​ ಠಾಣೆಗಳ ಸುಪರ್ದಿಯಲ್ಲೇ ಇವೆ. ಇದರಿಂದ ಸಾರ್ವಜನಿಕರಿಗೂ ಕಿರಿಕಿರಿ, ಪೊಲೀಸ್ ಸಿಬ್ಬಂದಿಗಳಿಗೂ ತೊಂದರೆ ಆಗುತ್ತಿತ್ತು. ಹಲವೆಡೆ ಟ್ರಾಫಿಕ್​​ ಸಮಸ್ಯೆಯೂ ಎದುರಾಗುತ್ತಿತ್ತು. ಈಗ ಹೈಕೋರ್ಟ್​​​ ಸೂಚನೆಯಿಂದ ಜನರಿಗೆ ಆಗುತ್ತಿದ್ದ ಅನಗತ್ಯ ತೊಂದರೆಗೆ ಫುಲ್​​ಸ್ಟಾಪ್​​ ಬಿದ್ದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + seven =
Remember me
