
ಉಡುಪಿ: ಹಿರಿಯ ಭಾಷಾ ವಿಜ್ಞಾನಿ, ತುಳು ವಿದ್ವಾಂಸ ಡಾ. ಯು. ಪಿ ಉಪಾಧ್ಯಾಯ (85) ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ನಿಧನರಾದರು.
ಕಾಪು, ಉಳಿಯಾರು ಗ್ರಾಮದ ಡಾ.ಉಪಾಧ್ಯಾಯ ಜಾನಪದ, ಸಂಸ್ಕೃತಿ, ಭಾಷೆಯ ವಿಚಾರಗಳಲ್ಲಿ ಅತ್ಯಮೂಲ್ಯ ಅಧ್ಯಯನ ಮಾಡಿ ಬಹಳಷ್ಟು ಸಾಧನೆ ಮಾಡಿದ್ದರು. ರಾಷ್ಟ್ರಕವಿ ಗೋವಿಂದ ಪೈ ತುಳು ನಿಘಂಟು ಯೋಜನೆಯ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದರು. ಈ ಯೋಜನೆಗೆ ಸಂಬಂಧಿಸಿ ಆರು ಸಂಪುಟಗಳ ( 3,440 ಪುಟ, ಒಂದು ಲಕ್ಷ ಶಬ್ಧ) ತುಳು ನಿಘಂಟು ಬಿಡುಗಡೆ ಮಾಡಲಾಗಿತ್ತು. ಕರಾವಳಿಯಲ್ಲಿ ಕನ್ನಡ ಶಾಸನಗಳ ಅಧ್ಯಯನ ಬಗ್ಗೆಯೂ ಸಂಶೋಧನೆ ಕೈಗೊಂಡಿದ್ದರು .
ಇದನ್ನೂ ಓದಿ:ಮಕ್ಕಳಲ್ಲಿ ನಾಯಕತ್ವ ಲಕ್ಷಣಗಳನ್ನು ಬೆಳೆಸುವ ಬಗೆ
ಭಾಷಾ‌ ಅಧ್ಯಯನದಲ್ಲಿ ಕುರಿತಾಗಿ ವಿಶೇಷ ಆಸಕ್ತರಾಗಿದ್ದ ಅವರು ಆಫ್ರಿಕಾ ಖಂಡದ ದೇಶಗಳಿಗೆ ತೆರಳಿ ಜಾನಪದ ಭಾಷೆಗಳ ಕುರಿತು ಸಂಶೋಧನೆ ಕೈಗೊಂಡು ದಾಖಲಿಕರಣ ಮಾಡಿದ್ದರು. ಪತ್ನಿ ದಿ. ಡಾ. ಸುಶೀಲಾ ಉಪಾಧ್ಯಾಯ ಅವರೊಂದಿಗೆ ಸೇರಿಕೊಂಡು ಬಹಳಷ್ಟು ಮಹತ್ವದ ಸಂಶೋಧನೆ ಕಾರ್ಯಗಳನ್ನು ನಡೆಸಿದ್ದರು.
ಕನ್ನಡದ ಹಿರಿಯ ಪೋಷಕ ನಟ ಹುಲಿವಾನ್ ಗಂಗಾಧರಯ್ಯ ನಿಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − nineteen =
Remember me
