ಬೆಂಗಳೂರು:ಯಕ್ಷಗಾನ ಲೋಕದ ಗಾನ ಮಾಂತ್ರಿಕ, ಕರಾವಳಿ ಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ಅವರು ಇಂದು (ಏಪ್ರಿಲ್​ 25) ಬೆಳಗ್ಗೆ ಇಹಲೋಕ ತ್ಯಜಿಸಿದರು.
ಸುಬ್ರಹ್ಮಣ್ಯ ಧಾರೇಶ್ವರ ಅವರಿಗೆ 67 ವರ್ಷ ವಯಸ್ಸಾಗಿತ್ತು. ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಬೆಳಗ್ಗೆ ಕೊನೆಯುಸಿರೆಳೆದರು. ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಇಂದು ಸಂಜೆ ಉಡುಪಿಯ ಕುಂದಾಪುರ ತಾಲೂಕಿನ ನಾಗೂರಿನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ.
ಧಾರೇಶ್ವರ ಅವರು ತಮ್ಮ ಜೀವನವನ್ನು ಯಕ್ಷಗಾನಕ್ಕೆ ಮುಡುಪಾಗಿಟ್ಟಿದ್ದರು. ಯಕ್ಷಗಾನದ ಭಾಗವತಿಕೆಗೆ ವಿಶಿಷ್ಟ ಮೆರುಗು ತಂದ ದೈತ್ಯ ಪ್ರತಿಭೆ ಸುಬ್ರಹ್ಮಣ್ಯ ಧಾರೇಶ್ವರ. ಯಕ್ಷಗಾನ ಕ್ಷೇತ್ರದಲ್ಲಿ 47 ವರ್ಷಗಳ ಸುದೀರ್ಘ ಸೇವೆಯನ್ನು ಸಲ್ಲಿಸಿದ್ದಾರೆ. ಕೋಟ ‘ಅಮೃತೇಶ್ವರಿ ಮೇಳ’ ಶ್ರೀ ಪೆರ್ಡೂರು ಮೇಳದಲ್ಲಿ ಭಾಗವತರಾಗಿ, ಹೊಸರಾಗಗಳನ್ನು ಹೊಸ ತಾಂತ್ರಿಕತೆಯನ್ನು ಯಕ್ಷರಂಗದಲ್ಲಿ ಯಶಸ್ವಿಯಾಗಿ ಬಳಸಿದರು. 400ಕ್ಕಿಂತಲೂ ಅಧಿಕ ಯಕ್ಷಗಾನದ ಆಡಿಯೋ ಕ್ಯಾಸೆಟ್​ಗಳಿಗೆ ಧಾರೇಶ್ವರ ಅವರು ಧ್ವನಿಯಾಗಿದ್ದಾರೆ.
ಕರ್ನಾಟಕ ರಾಜ್ಯೋತ್ಸವ ರಾಜ್ಯಮಟ್ಟದ ಪ್ರಶಸ್ತಿ, ಕರಾವಳಿ ರತ್ನ, ಕನ್ನಡ ಕುಲಭೂಷಣ, ಶ್ರೀ ಗುರು ನರಸಿಂಹ, ಶ್ರೀರಾಮ ವಿಠಲ, ನಾರ್ಣಪ್ಪ ಉಪ್ಪರು, ಕಾಳಿಂಗ ನಾವುಡ ಪ್ರಶಸ್ತಿ ಸೇರಿದಂತೆ ದೇಶ ವಿದೇಶಗಳ ಅನೇಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಒಂದೇ ಬೈಕ್​ನಲ್ಲಿ ಏಳು ಮಂದಿ! ಭಾವುಕರಾಗಿ ಟ್ವೀಟ್​ ಮಾಡಿದ ಹುಬ್ಬಳ್ಳಿ ಹುಲಿ ವಿಶ್ವನಾಥ್​ ಸಜ್ಜನರ್

ನನ್ನ ಕೂದಲಿನ ಬಗ್ಗೆ ನಿಮಗೇಕೆ ಚಿಂತೆ! ಟ್ರೋಲ್​ ಮಾಡುವವರಿಗೆ ಖಡಕ್​ ತಿರುಗೇಟು ಕೊಟ್ಟ ಪ್ರಾಚಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:6 − 3 =
Remember me
