ಬೆಂಗಳೂರು:: ಬೆಂಗಳೂರು ನಗರದ ವಸತಿ ಪ್ರದೇಶಗಳಲ್ಲಿ ಪದೇ ಪದೇ ಚಿರತೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಗರಕ್ಕೆ ಪ್ರತ್ಯೇಕ ಸಮರ್ಪಿತ ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
ಈ ಬಾರಿ ಮಳೆಯ ಅಭಾವ ಇರುವ ಹಿನ್ನೆಲೆಯಲ್ಲಿ ಆಹಾರ ಹುಡುಕಿಕೊಂಡು ವನ್ಯ ಮೃಗಗಳು ಕಾಡಿನಿಂದ ನಾಡಿಗೆ ಹೆಚ್ಚಾಗಿ ಬರುತ್ತಿವೆ. ಅದರಲ್ಲೂ ಬೆಂಗಳೂರು ನಗರದ ಹೊರವಲಯದಲ್ಲಿ ಕಾಡು ಮತ್ತು ಬೆಟ್ಟಗುಡ್ಡ ಇರುವ ಪ್ರದೇಶದಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಮೂಡಿದೆ. ಕೂಡಲೇ ಬೆಂಗಳೂರಿನಲ್ಲಿ ಒಂದು ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸಿ, ವನ್ಯಮೃಗಗಳು ನಾಡಿಗೆ ಬಂದರೆ ಕೂಡಲೇ ಸೆರೆ ಹಿಡಿದು ಕಾಡಿಗೆ ಅಥವಾ ಪುನರ್ವಸತಿ ಕೇಂದ್ರಕ್ಕೆ ಕಳುಹಿಸುವ ಕಾರ್ಯವನ್ನು ತ್ವರಿತವಾಗಿ ಮಾಡಬೇಕೆಂದು ತಿಳಿಸಿದ್ದಾರೆ.
ಈಗಾಗಲೇ ಹಾಲಿ ಇದ್ದ 5 ಆನೆ ಕ್ಷಿಪ್ರಕಾರ್ಯಪಡೆಗಳ ಜೊತೆಗೆ ಬೆಂಗಳೂರು (ಬನ್ನೇರುಘಟ್ಟ) ಮತ್ತು ರಾಮನಗರದಲ್ಲಿ ತಲಾ ಒಂದರಂತೆ 2 ಕಾರ್ಯಪಡೆಯನ್ನು ಹೆಚ್ಚುವರಿಯಾಗಿ ರಚಿಸಲಾಗಿದೆ. ಅದೇ ರೀತಿ ಹೆಚ್ಚು ಕಾಡಿರುವ ಮತ್ತು ಚಿರತೆಗಳು, ಕರಡಿಗಳು ಇರುವ ಬೆಟ್ಟಗುಡ್ಡದ ಪ್ರದೇಶದಲ್ಲಿ ಕನಿಷ್ಠ 3 ಜಿಲ್ಲೆಗೆ ಒಂದರಂತೆ ಕ್ಷಿಪ್ರ ಕಾರ್ಯಪಡೆ ರಚಿಸಿ, ಅತ್ಯಾಧುನಿಕ ಸಲಕರಣೆಗಳನ್ನು ಒದಗಿಸಲು ಸೂಚಿಸಿದ್ದಾರೆ.
ಚಿರತೆ ಕಾರ್ಯಪಡೆಯ ಸಿಬ್ಬಂದಿಗೆ ಸೂಕ್ತ ತರಬೇತಿ ಕೊಡಿಸುವಂತೆ ಮತ್ತು ಅಣಕು ಕಾರ್ಯಾಚರಣೆಗಳನ್ನೂ ನಡೆಸಿ ಸಿಬ್ಬಂದಿಯನ್ನು ಸಜ್ಜುಗೊಳಿಸುವಂತೆ ಈಶ್ವರ ಖಂಡ್ರೆ ನಿರ್ದೇಶಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 6 =
Remember me
