ಬೆಂಗಳೂರು: ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳ (ಎಸ್ಕಾಂ) ಸಬ್ ಸ್ಟೇಷನ್‌ಗಳ ಬಳಿ ಸೋಲಾರ್ ಪಾರ್ಕ್‌ಗಳ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ಬುಧವಾರ ಎಸ್ಕಾಂ ಅಧಿಕಾರಿಗಳ ಸಭೆ ನಡೆಸಿದ ಇಂಧನ ಸಚಿವ ಕೆ.ಜೆ.ಜಾರ್ಜ್, ಸೋಲಾರ್ ಪಾರ್ಕ್ ಯೋಜನೆಯ ಪ್ರಗತಿ ಬಗ್ಗೆ ಮಾಹಿತಿ ಪಡೆದುಕೊಂಡರು.
ಐದು ವಿದ್ಯುತ್ ಸರಬರಾಜು ಕಂಪನಿಗಳ ಪೈಕಿ ಬೆಸ್ಕಾಂ, ಸೆಸ್ಕಾಂ ಮತ್ತು ಹೆಸ್ಕಾಂ ಈಗಾಗಲೇ ಸೋಲಾರ್ ಪಾರ್ಕ್‌ಗಳನ್ನು ಸ್ಥಾಪಿಸಲು ಭೂಮಿ ಗುರುತಿಸಿವೆ. ಉಳಿದ ವಿದ್ಯುತ್ ಸರಬರಾಜು ಕಂಪನಿಗಳು ಭೂಮಿ ಗುರುತಿಸುವ ಪ್ರಕ್ರಿಯೆಯಲ್ಲಿವೆ.
ರಾಜ್ಯದ ಪ್ರಗತಿಯಲ್ಲಿ ಇಂಧನವು ಮಹತ್ವದ ಪಾತ್ರವನ್ನು ವಹಿಸುತ್ತದೆ, ಅದನ್ನು ಅತ್ಯಂತ ಪರಿಣಾಮಕಾರಿಯಾಗಿ ಸಂರಕ್ಷಿಸಬೇಕು. ಸೌರಶಕ್ತಿಯ ಸುಲಭ ಸ್ಥಾಪನೆ ಮತ್ತು ದೀರ್ಘಕಾಲ ಬಾಳಿಕೆ ಬರುವ ಕಾರಣದಿಂದ ಗ್ರಾಮೀಣ ಪ್ರದೇಶಗಳಲ್ಲೂ ಸೌರ ತಂತ್ರಜ್ಞಾನ ಹೆಚ್ಚು ಜನಪ್ರಿವಾಗುತ್ತಿದೆ ಎಂದರು.ಈ ಯೋಜನೆಯ ಅನುಷ್ಠಾನದಿಂದ ಸ್ಥಳೀಯವಾಗಿ ವಿದ್ಯುತ್ ಉತ್ಪಾದನೆ ಹೆಚ್ಚುತ್ತದೆ. ಇದರಿಂದಾಗಿ ರೈತರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಇದೇ ವೇಳೆ ಸೌರಶಕ್ತಿ ಚಾಲಿತ ನೀರಾವರಿ ಪಂಪ್ ಸೆಟ್ (ಐಪಿ) ತಯಾರಕರೊಂದಿಗೆ ಸಭೆ ನಡೆಸಿದ ಸಚಿವರು, ಸೋಲಾರ್ ಪಂಪ್ ಸೆಟ್ ಅಳವಡಿಕೆಯನ್ನು ಹೆಚ್ಚಿಸುವ ಸಾಧ್ಯತೆಯನ್ನು ಪರಿಶೀಲಿಸಲು ಸೂಚಿಸಿದರು. ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಮತ್ತು ಕರ್ನಾಟಕ ಸರ್ಕಾರದ ಧನ ಸಹಾಯದೊಂದಿಗೆ ರಾಜ್ಯದಲ್ಲಿ 2014-15ರಲ್ಲಿ ಸೌರ ಚಾಲಿತ ಪಂಪ್ ಸೆಟ್ ಯೋಜನೆ ಪ್ರಾರಂಭಿಸಲಾಯಿತು. ಇಂಧನ ಸಚಿವಾಲಯವು ರಾಜ್ಯದಲ್ಲಿ ಒಟ್ಟು 4369 ಸೋಲಾರ್ ಪಂಪ್ ಸೆಟ್‌ಗಳನ್ನು ಸ್ಥಾಪಿಸಿದೆ.
ಪ್ರಧಾನ ಮಂತ್ರಿ ಕುಸುಮ್ ಯೋಜನೆಯಡಿ ಗ್ರಿಡ್ ಪೂರೈಕೆ ಲಭ್ಯವಿಲ್ಲದಿರುವಲ್ಲಿ ಡೀಸೆಲ್ ಕೃಷಿ ಪಂಪ್‌ಗಳು/ನೀರಾವರಿ ವ್ಯವಸ್ಥೆ ಬದಲಿಗೆ 7.5 ಎಚ್‌ಪಿ ವರೆಗಿನ ಸೌರ ಕೃಷಿ ಪಂಪ್ ಸೆಟ್‌ಗಳನ್ನು ಸ್ಥಾಪಿಸಲು ರೈತರಿಗೆ ಹಣಕಾಸಿನ ನೆರವು ನೀಡಲಾಗುತ್ತದೆ.ಸಭೆಯಲ್ಲಿ ಇಂಧನ ಮತ್ತು ಮೂಲಸೌಕರ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ ರುದ್ರಪ್ಪಯ್ಯ, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × four =
Remember me
