ಬೆಂಗಳೂರು: ಕರೊನಾ ಸೋಂಕು ಹರಡಿರುವ ಹಿನ್ನೆಲೆಯಲ್ಲಿ ರಾಜ್ಯ ವಕ್ಫ್​ಬೋರ್ಡ್​ ಶಬ್​ ಇ ಬರಾತ್​ ಪ್ರಾರ್ಥನೆಗೆ ಬ್ರೇಕ್​ ಹಾಕಿದೆ.
ಏಪ್ರಿಲ್ 9 ರಂದು ಶಬ್​ ಇ ಬರಾತ್​ ಪ್ರಾರ್ಥನೆ ಇದ್ದು, ಮಸೀದಿಯಲ್ಲಿ ಪ್ರಾರ್ಥನೆ ಮಾಡುವ ಬದಲು ಮನೆಯಲ್ಲೇ ಪ್ರಾರ್ಥನೆ ಮಾಡಬೇಕು ಹಾಗೂ ಖಬರ್ಸ್ತಾನಕ್ಕೆ ಪ್ರವೇಶ ನಿಷೇಧಿಸಲಾಗಿದೆ ಎಂದು ವಕ್ಫ್​ಬೋರ್ಡ್​ ತಿಳಿಸಿದೆ.
ಪ್ರಾರ್ಥನೆ ರದ್ದು ಮಾಡಿರುವ ವಿಷಯವನ್ನು ಬೋರ್ಡ್​ ರಾಜ್ಯದ ಎಲ್ಲ ಮಸೀದಿ ಹಾಗೂ ಖಬರ್ಸ್ತಾನ ಮುಖ್ಯಸ್ಥರಿಗೆ ರವಾನಿಸಿದೆ.
ರಾಜ್ಯದಲ್ಲಿ ಕರೊನಾ ವೈರಸ್​ ಸೋಂಕು ತೀವ್ರವಾಗಿ ಹರಡಿರುವ ಹಿನ್ನೆಲೆಯಲ್ಲಿ ಪ್ರಾರ್ಥನೆ ಹಾಗೂ ಖಬರ್ಸ್ತಾನಕ್ಕೆ ಭೇಟಿ ನೀಡುವುದನ್ನು ನಿಷೇಧಿಸಲಾಗಿದೆ.
ದೆಹಲಿಯಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ್ದವರಿಗೆ ಕರೊನಾ ಸೋಂಕು ಹರಡಿ ತೀವ್ರ ವಿವಾದ ಸೃಷ್ಟಿಯಾದ ಹಿನ್ನೆಲೆಯಲ್ಲಿ ಬೋರ್ಡ್​ ಈ ನಿರ್ಧಾರ ಕೈಗೊಂಡಿದೆ.
ಕೋವಿಡ್​ 19 ಲಾಕ್​ಡೌನ್​ ವಿಶೇಷ: 2000ದ ನಂತರದಲ್ಲಿ ಭಾರತ ಪಾಲ್ಗೊಂಡ ಕ್ರಿಕೆಟ್​ ಸರಣಿಯ ಮರುಪ್ರಸಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 − 2 =
Remember me
