ತಿರುವನಂತಪುರಂ:ಅಯ್ಯಪ್ಪ ಸ್ವಾಮಿ ದೇವಸ್ಥಾನ ಎರಡು ತಿಂಗಳ ಮಟ್ಟಿಗೆ ಭಕ್ತಾದಿಗಳ ದರ್ಶನಕ್ಕೆ ತೆರೆದಿದ್ದು ಅಲ್ಲಿ ಜನಸಾಗರ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ದರ್ಶನದ ವೇಳಾಪಟ್ಟಿಯನ್ನು ಬದಲಾಯಿಸಲು ನಿರ್ಧರಿಸಿದೆ.
ಸಮಗ್ರ ವೇಳಾಪಟ್ಟಿಯ ಪ್ರಕಾರ, ಪ್ರಸಕ್ತ ವರ್ಷದ ಮೊದಲ ಹಂತ ಡಿಸೆಂಬರ್ 27ಕ್ಕೆ ಅಂತ್ಯಗೊಳ್ಳುತ್ತದೆ. ಡಿಸೆಂಬರ್ 30ಕ್ಕೆ ಎರಡನೇ ಹಂತ ಪ್ರಾರಂಭವಾಗುತ್ತದೆ. ಧಾರ್ಮಿಕ ಆಚರಣೆಗಳು ಜನವರಿ 14ಕ್ಕೆ ಮುಗಿಯುತ್ತವೆ. ಅಂದು ‘ಮಕರ ವಿಳಕ್ಕು’ (ಆಕಾಶದಲ್ಲಿ ಬೆಳಕು) ಸೂರ್ಯಾಸ್ತದ ನಂತರ ಮೂರು ಬಾರಿ ದಿಗಂತದಲ್ಲಿ ಕಾಣಿಸಿಕೊಳ್ಳುತ್ತದೆ. ಮಕರ ಬೆಳಕಿನ ಜತೆ ಬೆಟ್ಟದ ತುದಿಯಲ್ಲಿ “ಸ್ವಾಮಿಯೇ ಶರಣಂ ಅಯ್ಯಪ್ಪ” ನಿನಾದ ಪ್ರತಿಧ್ವನಿಸುತ್ತದೆ.
ಶಬರಿಮಲೆಯ ಅಯ್ಯಪ್ಪ ದೇವಸ್ಥಾನಕ್ಕೆ ಭಕ್ತಸಾಗರವೇ ಹರಿದು ಬರುತ್ತಿದ್ದು ದರ್ಶನ ಸಮಯದಲ್ಲಿ ಬದಲಾವಣೆ ಮಾಡಲು ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ. ಮಧ್ಯಾಹ್ನ 3 ರಿಂದಲೇ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ರಾತ್ರಿ 11ರವರೆಗೂ ದರ್ಶನ ಪಡೆಯಬಹುದಾಗಿದೆ. ಈ ಮಾಹಿತಿಯನ್ನು ಶಬರಿಮಲೆ ದೇವಸ್ಥಾನದ ಆಡಳಿತ ಮಂಡಳಿ ನೀಡಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − six =
Remember me
