ಶಿವಮೊಗ್ಗ:ಪ್ರೇಮ್‌ಸಿಂಗ್‌ಗೆ ಚಾಕು ಇರಿತ ಪ್ರಕರಣದಲ್ಲಿ ಬಂಧಿತರಾಗಿರುವ ನದೀಮ್, ಅಬ್ದುಲ್ ರೆಹಮಾನ್ ಮತ್ತು ತನ್ವೀರ್‌ನನ್ನು ಮತ್ತೆರಡು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಮೂವರ ಪೊಲೀಸ್ ಕಸ್ಟಡಿ ಗುರುವಾರ ಸಂಜೆ 5ಕ್ಕೆ ಅಂತ್ಯವಾಗಿತ್ತು. ಹಾಗಾಗಿ ಸಂಜೆ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದರು. ತನಿಖೆ ಇನ್ನೂ ಪೂರ್ಣಗೊಳ್ಳದ ಕಾರಣ ಮತ್ತೆರಡು ದಿನ ಕಸ್ಟಡಿಗೆ ಒಪ್ಪಿಸುವಂತೆ ಕೇಳಿಕೊಂಡರು. ಈ ವೇಳೆ ಆರೋಪಿಗಳ ಪರ ವಕೀಲರು ಮತ್ತೆ ಪೊಲೀಸ್ ಕಸ್ಟಡಿಗೆ ಹಸ್ತಾಂತರಿಸಲು ಆಕ್ಷೇಪಿಸಿದರು.
ಪೊಲೀಸರು ನ್ಯಾಯ ಮೂರ್ತಿಗಳ ಮುಂದೆ ಆರೋಪಿಗಳನ್ನ ಐದು ದಿನಗಳ ಕಾಲ ಕಸ್ಟಡಿ ಕೇಳಿದ್ದರು. ಆದರೆ ಆರೋಪಿಗಳ ಪರ ವಕೀಲರು ಸರಿಯಾದ ಕಾರಣ ನೀಡಿ ನಂತರ ಕಸ್ಟಡಿಗೆ ಹಸ್ತಾಂತರಿಸಬೇಕು ಎಂದು ಆಕ್ಷೇಪಿಸಿದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿಗಳು ಸರ್ಕಾರದ ಪರ ವಕೀಲರಿಗೆ ಕಾರಣ ಕೊಡಲು ಸೂಚಿಸಿದರು. ಸರ್ಕಾರಿ ಪರ ವಕೀಲ ಎಪಿಪಿ ಕಿರಣ್ ರವರು ತನಿಖಾ ಹಂತದಲ್ಲಿ ಕಾರಣ ಕೊಡಲು ಬರಲ್ಲ. ಪ್ರತಿ ಹೆಜ್ಜೆ ಹೆಜ್ಜೆಗೂ ಆಕ್ಷೇಪಣೆ ಹಾಕಿದರೆ ಸರಿಯಲ್ಲ ಎಂದು ವಾದಿಸಿದ್ದರು. ವಾದಗಳನ್ನ ಆಲಿಸಿದ 5ನೇ ಜೆಎಂಎಫ್‌ಸಿ ನ್ಯಾಯಾಧೀಶ ಶಿವಕುಮಾರ್, ಆ.20ರವರೆಗೆ ಮೂವರನ್ನೂ ಕಸ್ಟಡಿಗೆ ಪಡೆದುಕೊಳ್ಳುವಂತೆ ಪೊಲೀಸರಿಗೆ ಆದೇಶಿಸಿದರು.
ಆ.15ರಂದು ಗಾಂಧಿಬಜಾರ್‌ನಲ್ಲಿ ಪ್ರೇಮ್‌ಸಿಂಗ್ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಆ ಬಳಿಕ ನಾಲ್ವರನ್ನು ಬಂಧಿಸಲಾಗಿತ್ತು. ಅದರಲ್ಲಿ ಪ್ರಮುಖ ಆರೋಪಿ ಮಹಮ್ಮದ್ ಜಬೀ ಅಲಿಯಾಸ್ ಚರ್ಬಿ ಕಾಲಿಗೆ ಮಂಗಳವಾರ ಬೆಳಗಿನಜಾವ ಫೈರಿಂಗ್ ಮಾಡಿ ಸೆರೆ ಹಿಡಿದಿದ್ದರು. ಗಾಯಗೊಂಡ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಾಗಾಗಿ ಮೂವರನ್ನು ಆ.16ರಂದು ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿತ್ತು.
ಶಿವಮೊಗ್ಗದಲ್ಲಿ ಹಿಂದೂ ಯುವಕರ ಮೇಲೆ ಚಾಕು ಇರಿತ: ನಾಲ್ವರು ಆರೋಪಿಗಳು ಅರೆಸ್ಟ್​- ಉಳಿದವರಿಗಾಗಿ ಶೋಧ

ಶಿವಮೊಗ್ಗದಲ್ಲಿ ಚಾಕು ಇರಿತ: ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಹೋಗಿದ್ದ ಆರೋಪಿಗೆ ಗುಂಡೇಟು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + one =
Remember me
