ತುಮಕೂರು:ಬಿಜೆಪಿಗೆ ಬಲವಿಲ್ಲದ ಶಿರಾ ಕ್ಷೇತ್ರದಲ್ಲಿ ಒಮ್ಮೆಲೆ ಇಬ್ಬರು ಶಾಸಕರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಅಚ್ಚರಿಯಂತೆ ಈಗಾಗಲೇ ಬಿಜೆಪಿ ಅಭ್ಯರ್ಥಿ ಡಾ.ರಾಜೇಶ್ ಗೌಡ ಆಯ್ಕೆಯಾಗಿದ್ದಾರೆ. ಶಿರಾದವರೇ ಆದ ಎಂ.ಚಿದಾನಂದಗೌಡ ಕೂಡ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಬೆಂಬಲದೊಂದಿಗೆ ಗೆದ್ದು ವಿಧಾನ ಪರಿಷತ್ ಪ್ರವೇಶಿಸುವುದು ಖಚಿತವಾಗಿದೆ.
ಕಾರ್ಯಕರ್ತರೇ ಇಲ್ಲದೆ ಪರದಾಡುತ್ತಿದ್ದ ಶಿರಾ ಕ್ಷೇತ್ರದಲ್ಲಿ ಬಿಜೆಪಿಗೆ ಒಮ್ಮೆಲೆ ಆನೆ ಭಲ ಬಂದಿರುವುದು ರಾಜಕೀಯ ರಂಗದ ವಿಸ್ಮಯ ಎಂದೇ ವಿಶ್ಲೇಷಿಸಲಾಗುತ್ತಿದೆ.
ಚಿತ್ರದುರ್ಗ, ದಾವಣಗೆರೆ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳನ್ನೊಳಗೊಂಡ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಅ.28ರಂದು ಮತದಾನ ನಡೆದಿತ್ತು. ನವೆಂಬರ್ 2ರಂದೇ ನಡೆಯಬೇಕಿದ್ದ ಮತ ಎಣಿಕೆಯನ್ನು ನವೆಂಬರ್ 10ಕ್ಕೆ ಚುನಾವಣಾ ಆಯೋಗ ಮುಂದೂಡಿತ್ತು. ಸದ್ಯ ಮತ ಎಣಿಕೆ ನಡೆಯುತ್ತಿದ್ದು, ಒಟ್ಟು 14 ಟೇಬಲ್​ಗಳಲ್ಲಿ ನಡೆದ ಮತ ಎಣಿಕೆಯಲ್ಲಿ ಚಿದಾನಂದಗೌಡ 24,217 ಮತ ಪಡೆಯುವ ಮೂಲಕ ಮುನ್ನಡೆ ಕಾಯ್ದುಕೊಂಡಿದ್ದಾರೆ. ಆ ಮೂಲಕ ಅವರ ಗೆಲುವು ಬಹುತೇಕ ಖಚಿತವಾಗಿದೆ.
ಜಯಚಂದ್ರ ಕೇಳಿದ್ದನ್ನ ಡಿಕೆಶಿ ಕೊಡ್ಲಿಲ್ವಂತೆ… ಅದಕ್ಕೆ ಶಿರಾದಲ್ಲಿ ಕಾಂಗ್ರೆಸ್​ ಸೋಲ್ತಂತೆ!

ಆರ್​ ಆರ್​ ನಗರ, ಶಿರಾದಲ್ಲಿ ಕಾಂಗ್ರೆಸ್​ ಸೋಲಿಗೆ ಪ್ರಮುಖ ಕಾರಣ ಇಲ್ಲಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + eleven =
Remember me
