ಶಿರಾ ವಿಧಾನಸಭಾ ಕ್ಷೇತ್ರದ ಜೆಡಿಎಸ್​ ಶಾಸಕ ಬಿ.ಸತ್ಯನಾರಾಯಣ್​ ಅವರು ಇಂದು ರಾತ್ರಿ 10.45ರ ಹೊತ್ತಿಗೆ ನಿಧನರಾಗಿದ್ದಾರೆ. ಅವರಿಗೆ 69ವರ್ಷ ವಯಸ್ಸಾಗಿತ್ತು.
ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸತ್ಯನಾರಾಯಣ್​ ಅವರನ್ನು ಓಲ್ಡ್ ಏರ್​ಪೋರ್ಟ್ ರೋಡ್​​ನಲ್ಲಿರುವ ಮಣಿಪಾಲ್​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಬೆಳಗ್ಗೆಯೇ ಒಮ್ಮೆ ಸತ್ಯನಾರಾಯಣ್​ ಅವರು ಮೃತಪಟ್ಟಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಆದರೆ ನಂತರ ಅದು ಸುಳ್ಳು ಎಂದು ಹೇಳಲಾಗಿತ್ತು.
ಇದೀಗ ಶಿರಾ ಶಾಸಕರು ಮೃತಪಟ್ಟಿದ್ದನ್ನು ಮಣಿಪಾಲ್ ಆಸ್ಪತ್ರೆಯೇ ಖಚಿತಪಡಿಸಿದೆ. ದೀರ್ಘಕಾಲದ ಪಿತ್ತಜನಕಾಂಗದ ಸಮಸ್ಯೆಯಿಂದ ಬಳಲುತ್ತಿದ್ದರು. ಬಹುಅಂಗಾಂಗ ವೈಫಲ್ಯಕ್ಕೆ ಒಳಗಾದ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೂ, ಆರೋಗ್ಯ ಸ್ಥಿತಿ ತುಂಬ ಹದಗೆಟ್ಟಿತ್ತು ಎಂದು ಮಣಿಪಾಲ್ ನಿರ್ದೇಶಕ ತಿಳಿಸಿದ್ದಾರೆ.
FACT CHECK| ಜೆಡಿಎಸ್​ ಶಾಸಕ ಬಿ. ಸತ್ಯನಾರಾಯಣ ನಿಧನ ಸುದ್ದಿ ನಿಜವಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 10 =
Remember me
