ಬೆಂಗಳೂರು:ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah)ಅವರ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದ್ದು, ಅನ್ನಭಾಗ್ಯ ಯೋಜನೆ ಜಾರಿಗೆ ತರುವ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ.
ಇದನ್ನೂ ಓದಿ:ಐದು ಮಕ್ಕಳು ಸೇರಿ ಆರು ಜನರು ಮಲಗಿದ್ದಲ್ಲೇ ಸುಟ್ಟುಕರಕಲು
ಅನ್ನಭಾಗ್ಯ ಯೋಜನೆ ಪೂರೈಸಲು ಕೇಂದ್ರ ಸರ್ಕಾರ(Central Government)ಅಕ್ಕಿ ಕೊಡಲು ನಿರಾಕರಿಸುತ್ತಿದೆ ಎಂದು ಆರೋಪಿಸಿರುವ ಸಿಎಂ, ಇಂದು ಟೆಂಡರ್ ಮೂಲಕ ಅಕ್ಕಿ ಖರೀದಿ ಮಾಡುವ ಬಗ್ಗೆ ಪ್ರಸ್ತಾಪ ನಡೆಸಿದ್ದಾರೆ. ರಾಜಕೀಯ(Political)ಕಾರಣದಿಂದಲೇ ಅಕ್ಕಿ ವಿತರಣೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಕಾರಣವನ್ನು ಮುಂದಿಟ್ಟುಕೊಂಡು ಅವರು ಅಕ್ಕಿಯನ್ನು ಕೊಡಲು ನಿರಾಕರಿಸಿದ್ದಾರೆ ಎಂದು ಹೇಳಿದ್ದಾರೆ.
“ಅಕ್ಕಿಯನ್ನು ನೀಡಿದರೆ ಕಾಂಗ್ರೆಸ್ ಸರ್ಕಾರಕ್ಕೆ(Congress Government)ಲಾಭವಾಗಲಿದೆ. ನಮ್ಮ ಯೋಜನೆ ಸಫಲವಾಗಲಿದೆ ಎಂಬ ಹಿನ್ನೆಲೆ ನಮಗೆ ಅಕ್ಕಿ ಪೂರೈಕೆಗೆ ಕೇಂದ್ರ ಹಿಂದೇಟು ಹಾಕಿದೆ. ನಾವು ಶೀಘ್ರವೇ ಈ ಯೋಜನೆಯನ್ನು ಜಾರಿಗೊಳಿಸಲೇಬೇಕು! ಜನರ ವಿಶ್ವಾಸ ಉಳಿಸಿಕೊಳ್ಳಬೇಕು” ಎಂದು ಸಚಿವರಿಗೆ ಹೇಳಿದ್ದಾರೆ.
ಇದನ್ನೂ ಓದಿ:ಐದು ಮಕ್ಕಳು ಸೇರಿ ಆರು ಜನರು ಮಲಗಿದ್ದಲ್ಲೇ ಸುಟ್ಟುಕರಕಲು
“ನಾವು ಜನರಿಗೆ ಅಕ್ಕಿಯನ್ನು ನೀಡುವ ವ್ಯವಸ್ಥೆಯನ್ನು ಶೀಘ್ರವೇ ಜಾರಿಗೊಳಿಸಬೇಕು. ಛತ್ತೀಸಘಡ, ತೆಲಂಗಾಣ ಸರ್ಕಾರಗಳನ್ನು ನೋಡಿಕೊಂಡು ಮುಂದುವರೆಯೋಣ” ಎಂದು ಸಂಪುಟ ಸಭೆಯಲ್ಲಿ ಸಚಿವರೊಂದಿಗೆ ಸಿಎಂ ಸುದೀರ್ಘ ಚರ್ಚೆ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಮಾತಿಗೆ ಸಚಿವರು ಬೆಂಬಲ ಸೂಚಿಸಿದ್ದು, ಹೊರ ರಾಜ್ಯದಿಂದ ಅಕ್ಕಿ ಖರೀದಿ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದಾರೆ. ಹೆಚ್ಚುವರಿ ಹಣ ಎಷ್ಟು ಬರಬಹುದು ಎಂದು ಲೆಕ್ಕಾಚಾರದ ಕುರಿತು ಅಧಿಕಾರಿಗಳ ಅಂದಾಜು ಹಾಕಿದ್ದಾರೆ.
ವಿಪಕ್ಷ ನಾಯಕ ಆಯ್ಕೆ ವಿಳಂಬದ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು?

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:five × 5 =
Remember me
