ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿಯಾಗಿ 8 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿದ ಆರೋಪಗಳನ್ನು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ಸಚಿವ ಪ್ರಲ್ಹಾದ್‌ ಜೋಶಿ ಖಂಡಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ವಾಸ್ತವ ಅಂಕಿ-ಅಂಶಗಳನ್ನೇ ಮರೆಮಾಚಿ ಸುಳ್ಳಿನ ಕಂತೆಯಂತಿರುವ ಪುಸ್ತಕವನ್ನು ಸಿದ್ದರಾಮಯ್ಯ ಬಿಡುಗಡೆ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.ಇಡೀ ದೇಶದ ಭದ್ರತೆಯನ್ನು ಯುಪಿಎ ಸರ್ಕಾರ ಮರೆತಿದ್ದಾಗ, ಸಬ್ಸಿಡಿಗಳಿಂದಲೇ ಸಾಲ ಕೂಪದಲ್ಲಿ ಮುಳುಗಿದ್ದಾಗ ದೇಶವನ್ನ ಸರಿದಾರಿಯಲ್ಲಿ ನಡೆಯುವಂತೆ ಮಾಡಿದ್ದು ಇದೇ ಪ್ರಧಾನಿ ನೇತೃತ್ವದ ಎನ್‌ಡಿಎ ಸರ್ಕಾರ. ನಿತ್ಯವೂ ಶತಕೋಟಿ ರೂಪಾಯಿ ಮೊತ್ತದಲ್ಲಿ ಭ್ರಷ್ಟಾಚಾರ, ಹಗರಣಗಳನ್ನೇ ನಡೆಸುತ್ತಿದ್ದ ಯುಪಿಎ ಸರ್ಕಾರ ಕಾಲದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿ ತ್ವರಿತವಾಗಿ ಕಾರ್ಯವೆಸಗುವಂತೆ ಮಾಡಿದ್ದು ಈ ಸರ್ಕಾರದ ಹೆಗ್ಗಳಿಕೆ ಎಂದು ಜೋಶಿ ಹೇಳಿದರು.
ದೇಶ 21ನೇ ಶತಮಾನದತ್ತ ದಾಪುಗಾಲಿಕ್ಕುತ್ತಿದ್ದರೂ, ಇನ್ನೂ ಬ್ರಿಟಿಷ್‌ ಕಾಲದ ನೀತಿಗಳು, ಬೊಕ್ಕಸಕ್ಕೆ ನಷ್ಟವನ್ನುಂಟು ಮಾಡುವ ಕೆಟ್ಟ ಆರ್ಥಿಕ ನೀತಿಗಳನ್ನೇ ಸಿದ್ದರಾಮಯ್ಯ ಅಭಿವೃದ್ಧಿ ಎಂದು ಹೇಳುತ್ತಿದ್ದಾರೆ. ರಾಜ್ಯಕ್ಕೆ ಈಗಿನ ಕೇಂದ್ರ ಸರ್ಕಾರ ಕೊಟ್ಟಷ್ಟು ಅನುದಾನ, ಬೆಂಬಲಗಳನ್ನು ಹಿಂದಿನ ಬೇರಾವ ಸರ್ಕಾರಗಳೂ ಕೊಟ್ಟಿಲ್ಲ ಎಂದು ಹೇಳಿದ್ದಾರೆ.
ಇದಕ್ಕೆ ಪೂರಕವಾಗಿ ಕೇಂದ್ರ ಸರ್ಕಾರಿ ಯೋಜನೆಗಳಲ್ಲಿ ರಾಜ್ಯದ ಬೆಳವಣಿಗೆಯ ಕುರಿತಾಗಿ ಅವರು ಅಂಕಿ-ಅಂಶಗಳನ್ನು ತೆರೆದಿಟ್ಟಿದ್ದಾರೆ. ಜೀವನಜ್ಯೋತಿ ಬಿಮಾ ಯೋಜನೆಯಲ್ಲಿ 49.95 ಲಕ್ಷ ನೋಂದಣಿಯಾಗಿದ್ದು, 741.42 ಕೋಟಿ ರೂ. ಕ್ಲೇಮು ಆಗಿದೆ. ಸುರಕ್ಷಾ ಬಿಮಾದಲ್ಲಿ 1.1 ಕೋಟಿ ನೋಂದಣಿಯಾಗಿದ್ದು 144.12 ಕೋಟಿ ರೂ. ಕ್ಲೇಮು ಆಗಿದೆ ಎಂದರು. ಹಾಗೆಯೇ ಅಟಲ್‌ ಪಿಂಚಣಿ ಯೋಜನೆಯಲ್ಲಿ 22.06 ಲಕ್ಷ ಚಂದಾದಾರರಿದ್ದು ಯಶಸ್ವಿ ಯೋಜನೆಯಾಗಿದೆ ಎಂದರು.
ಇದನ್ನೂ ಓದಿ:ರಾಷ್ಟ್ರಪತಿ ಅಭ್ಯರ್ಥಿ ಸಿನ್ಹಾಗೆ ಸೋಲು ಬಯಸಿದ್ರಾ ತೆಲಂಗಾಣ ಸಿಎಂ?; ಸದ್ದು ಮಾಡ್ತಿದೆ ಕೆಸಿಆರ್ ವಾಪಸ್ ಪಡೆದ ‘ಶಬ್ದ’
ಪಕೋಡ ಮಾರಿ ಎಂದು ಪ್ರತಿ ಮಾತಿಗೆ ಲೇವಡಿ ಮಾಡುವ ಸಿದ್ದರಾಮಯ್ಯಗೆ ಸ್ವಾವಲಂಬನೆ, ಸ್ವಉದ್ಯೋಗದ ಬೆಲೆ ಎಳ್ಳಷ್ಟೂ ತಿಳಿದಿಲ್ಲ. ಯುವಕರನ್ನು ಸ್ವಾವಲಂಬಿ ಉದ್ಯಮಿಗಳನ್ನಾಗಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಮುದ್ರಾ ಯೋಜನೆ ಅತ್ಯಂತ ಯಶಸ್ವಿ ಯೋಜನೆಯಾಗಿದ್ದು ಇದರಲ್ಲಿ 1.67 ಲಕ್ಷ ಕೋಟಿ ರೂ. ಈವರೆಗೆ ಮಂಜೂರಾಗಿದ್ದು, 1.63 ಲಕ್ಷ ಕೋಟಿ ರೂ. ಸಾಲ ವಿತರಿಸಲಾಗಿದೆ ಎಂದು ಹೇಳಿದರು. ಇನ್ನು ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆಯಡಿ ಗ್ರೀನ್‌ಫೀಲ್ಡ್‌ ಉದ್ಯಮ ಸ್ಥಾಪನೆಗೆ ಎಸ್‌ಸಿ-ಎಸ್‌ಟಿ ಸಮುದಾಯಗಳಿಗೆ ನೀಡುವ ಸಾಲದಲ್ಲೂ 7940 ಖಾತೆಗಳಿಗೆ ಸಾಲ ಮಂಜೂರಾಗಿದ್ದು 1,845 ಕೋಟಿ ರೂ. ಸಾಲ ನೀಡಲಾಗಿದೆ. ಎಮರ್ಜೆನ್ಸಿ ಕ್ರೆಡಿಟ್‌ ಲೈನ್‌ ಗ್ಯಾರಂಟಿ ಯೋಜನೆಯಲ್ಲೂ 9.77 ಲಕ್ಷ ಖಾತೆಗಳಿಗೆ ಸಾಲ ಮಂಜೂರಾಗಿದ್ದು ಒಟ್ಟು 21,709 ಕೋಟಿ ರೂ. ಮಂಜೂರಾಗಿದೆ. ಇದರಲ್ಲಿ 3.59 ಲಕ್ಷ ಖಾತೆಗಳಿಗೆ 16,270 ಕೋಟಿ ರೂ. ಮೊತ್ತ ಬಿಡುಗಡೆಯಾಗಿದೆ ಎಂದು ಹೇಳಿದರು. ಬೀದಿ ವ್ಯಾಪಾರಿಗಳ ಕಲ್ಯಾಣಕ್ಕಾಗಿ 1.61 ಲಕ್ಷ ಖಾತೆಗಳು ಮಂಜೂರಾಗಿದ್ದು, 1.42 ಲಕ್ಷ ಖಾತೆಗಳಿಗೆ 10 ಸಾವಿರ ರೂ.ವರೆಗೆ ವರ್ಕಿಂಗ್‌ ಕ್ಯಾಪಿಟಲ್‌ ಸಾಲ ನೀಡಲಾಗಿದೆ. ಡಿಜಿಟಲ್‌ ಪಾವತಿಗಳಿಗೆ ಇದರಡಿ ಬಹುಮಾನವನ್ನೂ ನೀಡಲಾಗುತ್ತಿದೆ ಎಂದು ಹೇಳಿದರು.
ಪ್ರಧಾನ ಮಂತ್ರಿ ಜನಧನ್‌ ಯೋಜನೆ ಆರಂಭಿಸಿದಾಗ ಬಡವರಿಗೆ ಬ್ಯಾಂಕ್‌ ಖಾತೆ ನಿರ್ವಹಣೆ ಸಾಧ್ಯವೇ? ಅದರಿಂದೇನು ಪ್ರಯೋಜನ ಎಂದು ಹೀಗಳೆದವರು ಇದೇ ಕಾಂಗ್ರೆಸ್ಸಿಗರು. ಆದರೆ ಇದು 1.56 ಕೋಟಿ ಖಾತೆಗಳು ಈ ಯೋಜನೆಯಡಿ ತೆರೆಯಲಾಗಿದ್ದು, ಖಾತೆಗಳಲ್ಲಿ 5,821 ಕೋಟಿ ರೂ. ಇದೆ. ಮಹಿಳೆಯರ ಹೆಸರಿನಲ್ಲಿ 87.38 ಲಕ್ಷ ಖಾತೆಗಳಿದ್ದು ಜನ್‌ಧನ್‌ ಯೋಜನೆ ಅತ್ಯಂತ ಯಶಸ್ವಿಯಾಗಿದೆ. ಪ್ರಧಾನ ಮಂತ್ರಿ ಕಿಸಾನ್‌ ಕ್ರೆಡಿಟ್ ಕಾರ್ಡ್‌ ಯೋಜನೆಯಡಿಯೂ, 19,950 ಕೋಟಿ ರೂ. ಸಾಲ ಮಂಜೂರಾಗಿದೆ ಎಂದು ಕೇಂದ್ರ ಸಚಿವ ಜೋಶಿ ಹೇಳಿದ್ದಾರೆ.ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಬಡಬಡಿಸುವ ಸಿದ್ದರಾಮಯ್ಯ ಅಂಕಿ-ಅಂಶಗಳನ್ನು ನೋಡುವ ಗೋಜಿಗೆ ಹೋಗಿಲ್ಲ. ಕೇವಲ ಸುಳ್ಳು ಆರೋಪ ಮಾಡುತ್ತಿದ್ದಾರೆ. ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಶೇ.148ರಷ್ಟು ಏರಿಕೆಯಾಗಿದ್ದರೆ, ಕೇಂದ್ರದ ಅನುದಾನದಲ್ಲಿ ಶೇ.129ರಷ್ಟು ಏರಿಕೆಯಾಗಿದೆ. 2009-14 ಅವಧಿಯಲ್ಲಿ 54,396 ಕೋಟಿ ರೂ. ಇದ್ದ ತೆರಿಗೆ ಹಂಚಿಕೆ 2014-19ರ ಅವಧಿಯಲ್ಲಿ 1.35 ಲಕ್ಷ ಕೋಟಿಗೆ ಏರಿಕೆಯಾಗಿದೆ. ಹಾಗೆಯೇ ಯುಪಿಎ ಅವಧಿಯಲ್ಲಿದ್ದ 39, 919 ಕೋಟಿ ರೂ. ಅನುದಾನ ಹಂಚಿಕೆ ಎನ್‌ಡಿಎ ಅವಧಿಯಲ್ಲಿ 91, 374 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. 2022-23ರ ಬಜೆಟ್‌ನಲ್ಲಿ ಹಣಕಾಸು ಆಯೋಗದಡಿ 5, 058 ಕೋಟಿ ರೂ.ಗಳನ್ನು ನೀಡಲು ಯೋಜಿಸಲಾಗಿದೆ. 2009-10ರಲ್ಲಿ ಇದು 2, 476 ಕೋಟಿ ರೂ. ಆಗಿತ್ತು. ಹಿಂದಿನ ಯುಪಿಎ ಸರ್ಕಾರ ರಾಜ್ಯದ ಪಾಲಿಗೆ ಮಲತಾಯಿ ಧೋರಣೆ ತೋರಿಸಿದ್ದು, ಆಗ ಸಿದ್ದರಾಮಯ್ಯನವರೂ ಸೇರಿದಂತೆ ಯಾವ ಕಾಂಗ್ರೆಸ್ಸಿಗರೂ ರಾಜ್ಯಕ್ಕೆ ಬರಬೇಕಾದ ಅನುದಾನ, ತೆರಿಗೆ ಹಂಚಿಕೆಗಳ ಬಗ್ಗೆ ತುಟಿಪಿಟಕ್ಕೆನ್ನಲಿಲ್ಲ ಎಂದು ಜೋಶಿಯವರು ಕಟುವಾಗಿ ಟೀಕಿಸಿದ್ದಾರೆ.
ಇದನ್ನೂ ಓದಿ:ಕೋಣೆಯಲ್ಲಿ ನೇತಾಡುತ್ತಿತ್ತು ಯಜಮಾನನ ಶವ; ನೆಲದ ಮೇಲಿತ್ತು ಮಕ್ಕಳು-ಪತ್ನಿ ಸೇರಿ ನಾಲ್ವರ ಮೃತದೇಹ!
ಮೂಲಸೌಕರ್ಯ ಅಭಿವೃದ್ಧಿಗೆ ಹಿಂದೆ ಯಾವ ಸರ್ಕಾರಗಳೂ ಕೊಡದಷ್ಟು ಅನುದಾನವನ್ನು ಪ್ರಧಾನಿ ಮೋದಿ ಅವರ ಸರ್ಕಾರ ರಾಜ್ಯಕ್ಕೆ ನೀಡುತ್ತಿದೆ. ಯುಪಿಎ ಕಾಲದಲ್ಲಿ ರಸ್ತೆಗಳು ಹೇಗಿದ್ದವು, ಹೆದ್ದಾರಿ ಕೆಲಸಗಳು ಹೇಗೆ ವರ್ಷಾನುಗಟ್ಟಲೆ ಕುಂಟುತ್ತ ನಡೆದಿದ್ದವು ಅನ್ನೋದು ಜನರಿಗೆ ಚೆನ್ನಾಗಿ ತಿಳಿದಿದೆ. ಈಗಿನ ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಹಲವಾರು ಯೋಜನೆಗಳು ತ್ವರಿತವಾಗಿ ನಡೆಯುತ್ತಿದ್ದು, ಹಲವಾರು ಸಾರ್ವಜನಿಕ ಸೇವೆಗೆ ಲಭ್ಯವಾಗಿವೆ. ಪೂರಕವಾಗಿ 2022-23ರಲ್ಲಿ ರಸ್ತೆ ಯೋಜನೆಗಳಿಗೆ 9.795 ಕೋಟಿ ರೂ. ನೀಡಲು ಯೋಜಿಸಲಾಗಿದೆ. 2022-23ರ ಅಂತ್ಯಕ್ಕೆ 33,913 ಕೋಟಿ ರೂ. ವೆಚ್ಚದಲ್ಲಿ ರಾಜ್ಯದಲ್ಲಿ 1064 ಕಿ.ಮೀ. ಉದ್ದದ ಪ್ರಮುಖ ರಸ್ತೆ ಯೋಜನೆಗಳು ಅನುಷ್ಠಾನಕ್ಕೆ ಬರಲಿವೆ.
ರಾಜ್ಯದಲ್ಲಿ ಎಲೆಕ್ಟ್ರಾನಿಕ್‌ ಉತ್ಪಾದನೆ ಕೇಂದ್ರ, ಮೀನುಗಾರಿಕೆ ಕ್ಲಸ್ಟರ್‌, ಮೆಗಾಫುಡ್‌ ಪಾರ್ಕ್, ಎನ್‌ಐಸಿಡಿಸಿ, ಫಾರ್ಮಾ, ವಿಶೇಷ ಆರ್ಥಿಕ ವಲಯ ಮತ್ತು ಜವಳಿ ವಲಯಕ್ಕೆ ಕೇಂದ್ರ ಬೆಂಬಲ ನೀಡುತ್ತಿದ್ದು, ಪಿಎಂ ಗತಿಶಕ್ತಿ ರಾಷ್ಟ್ರೀಯ ಪ್ಲ್ಯಾನ್‌ ಭಾಗವಾಗಿ 62 ನೋಡ್‌ಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ.
ಕೇಂದ್ರ ದೂರದೃಷ್ಟಿಯ ಯೋಜನೆಗಳಿಂದ ರಾಜ್ಯ ಆದಾಯ ಹೆಚ್ಚಳದೊಂದಿಗೆ, ಅಭಿವೃದ್ಧಿಯ ಹೊಸ ಶಕೆಗೆ ತೆರೆದುಕೊಂಡಿದೆ. ನೋಟ್ ಬ್ಯಾನ್‌ ಮೂಲಕ ವಿಶ್ವವೇ ಮೂಗಿನ ಮೇಲೆ ಬೆರಳಿಡುವ ರೀತಿಯಲ್ಲಿ ದಾಖಲೆಯ ಡಿಜಿಟಲ್‌ ವಹಿವಾಟನ್ನು ಭಾರತ ಮಾಡುತ್ತಿದೆ. ಎಲ್ಲ ರಂಗಗಳಲ್ಲೂ ವಿಶ್ವದಲ್ಲೇ ನಂಬರ್‌ 1 ಆಗುವತ್ತ ದಾಪುಗಾಲಿಕ್ಕುತ್ತಿದೆ. ಯುಪಿಎ ಭ್ರಷ್ಟಾಚಾರದಿಂದಲೇ ಮನೆಮಾತಾಗಿತ್ತು. ಆದರೆ ಮೋದಿಯವರ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಂದ ಜಾಗತಿಕ ನಾಯಕರೂ ಭಾರತವನ್ನು ಗುರುತಿಸುವಂತಾಗಿದೆ.
ಇದನ್ನೂ ಓದಿ:ಕದ್ದ ಬಳಿಕ ಫ್ರಿಡ್ಜ್​ನಲ್ಲಿದ್ದ ತಿಂಡಿ ತಿನ್ನುತ್ತಿದ್ದ ಕಳ್ಳ; ಪರಾರಿಯಾಗಲು ಯತ್ನಿಸಿದವನನ್ನು ಹಿಡಿದುಕೊಡ್ತು ಸಾಕುನಾಯಿ!
ಕೋವಿಡ್ ಮಹಾಮಾರಿ ಜಗತ್ತನ್ನೇ ನರಳುವಂತೆ ಮಾಡಿದ್ದಾಗ 200 ಕೋಟಿ ವ್ಯಾಕ್ಸಿನ್​ಗಳನ್ನು ತನ್ನ ಪ್ರಜೆಗಳಿಗೆ ಉಚಿತವಾಗಿ ನೀಡಿದ್ದು ಭಾರತ ಮಾತ್ರ. ಯುರೋಪ್‌ನ ಹಲವು ರಾಷ್ಟ್ರಗಳ ಒಟ್ಟು ಜನಸಂಖ್ಯೆಗಿಂತಲೂ ಹೆಚ್ಚು ವ್ಯಾಕ್ಸಿನ್‌ ಭಾರತ ತನ್ನ ಪ್ರಜೆಗಳಿಗೆ ಉಚಿತವಾಗಿ ನೀಡಿದೆ.
ಕೋವಿಡ್‌ನಂತ ತುರ್ತು ಸಂದರ್ಭದಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಮೂಲಕ ದೇಶದ ಜನರಿಗೆ ಉಚಿತ ಆಹಾರ ಒದಗಿಸುವ ಕೆಲಸವನ್ನೂ ಎನ್‌ಡಿಎ ಸರ್ಕಾರ ಮಾಡಿದೆ. ಹಿಂದೆಂದೂ ಕಂಡು ಕೇಳರಿಯದ ರೀತಿಯ ಅತಿ ಸಂಕೀರ್ಣ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದು ಇದೇ ಮೋದಿ ಸರ್ಕಾರ. ಆದರೆ ಇದನ್ನು ಸಿದ್ದರಾಮಯ್ಯ ಮರೆತಿದ್ದಾರೆ.ಯುಪಿಎ ಸರ್ಕಾರದ ಅವಧಿಯಲ್ಲಿ ಅದು ಕರ್ನಾಟಕಕ್ಕೆ ಕೊಟ್ಟ ಕೊಡುಗೆ ಏನು? ತನ್ನ ಸಾಧನೆ ಏನು? ಅಂತ ಮೊದಲು ಸಿದ್ದರಾಮಯ್ಯನವರು ಹೇಳಲಿ. ಯುಪಿಎ ಅವಧಿಯಲ್ಲಿ ಒಂದು ಕುಟುಂಬ ಅಭಿವೃದ್ಧಿಯಾಗಿದ್ದು ಬಿಟ್ಟರೆ ಬೇರೇನೂ ಆಗಿಲ್ಲ.
ದೇಶವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುತ್ತಿರುವ ಕೇಂದ್ರ ಸರ್ಕಾರವನ್ನು ವಿರೋಧ ಪಕ್ಷವಾಗಿ ವಿರೋಧಿಸುವುದೇ ನಮ್ಮ ಕೆಲಸ ಎಂಬ ಕಾರಣಕ್ಕೆ ವಿರೋಧಿಸುವ ಚಾಳಿ ಬೇಡ. ಸತ್ಯಾಂಶಗಳನ್ನು ತಿಳಿದುಕೊಳ್ಳದೆ ತಮ್ಮ ಮಗನ ವಯಸ್ಸಿನ ನಕಲಿ ಗಾಂಧಿ, ಅಪ್ರಬುದ್ಧ ರಾಜಕಾರಣಿ ರಾಹುಲ್ ಗಾಂಧಿಯವರನ್ನು ಮೆಚ್ಚಿಸಲು ಸಿದ್ದರಾಮಯ್ಯ ಗುಲಾಮಗಿರಿ ಮಾಡುತ್ತಿದ್ದಾರೆ. ವಿಚಿತ್ರ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್‌ ಸೇರಿದಂತೆ ಅದರ ನಾಯಕರು ಹೇಳುತ್ತಿರುವ ಸುಳ್ಳುಗಳನ್ನು, ದಾರಿತಪ್ಪಿಸುವ ಹೇಳಿಕೆಗಳನ್ನು ಪರಾಮರ್ಶಿಸುವಷ್ಟು ಈಗ ಜನರೂ ಬುದ್ಧಿವಂತರಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ.
ಯುಪಿಎ ಸರ್ಕಾರದ ಅವಧಿಯಲ್ಲಿ ದೇಶದ ಗಡಿಭಾಗದಲ್ಲಿ ಹಾಗೂ ದೇಶದೊಳಗೆ ಭಯೋತ್ಪಾದಕ ಚಟುವಟಿಕೆಗಳು ತೀವ್ರವಾಗಿದ್ದವು. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಅಂತಹ ಭಯೋತ್ಪಾದಕ ಚಟುವಟಿಕೆಗಳನ್ನು ನಿಯಂತ್ರಿಸಿ ರಾಷ್ಟ್ರೀಯ ಸುರಕ್ಷೆ ಕಠಿಣ ಕ್ರಮಗೊಳ್ಳುವಲ್ಲಿ ಯಶಸ್ವಿಯಾಗಿದೆ.
ಹೀಗಿದ್ದರೂ ಸಿದ್ದರಾಮಯ್ಯನವರು ವಿತಂಡವಾದ ಮುಂದಿಡುತ್ತ ಇಂತಹ ಹೇಳಿಕೆಗಳನ್ನು ಕೊಡುತ್ತಿರುವುದು ನೋಡಿದರೆ ಇವರೇನು ಸಿದ್ದರಾಮಯ್ಯನವರೋ? ಸುಳ್ಳುರಾಮಯ್ಯನವರೋ? ಎಂಬ ಸಂದೇಶ ಮೂಡುತ್ತಿದೆ ಎಂದು ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಭಾರತದ ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ಹೋರಾಟಗಾರರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ಕಾಂಗ್ರೆಸ್ ಎಂದರೆ "ಸ್ವಾತಂತ್ರ್ಯ ಹೋರಾಟದ ಚರಿತ್ರೆ" ಎಂದು ಬಿಂಬಿಸುವ ಕಾಂಗ್ರೆಸ್ ಈ ದೇಶದ ಹೋರಾಟಗಾರರಿಗೆ ಘೋರ ಅಪಮಾನ ಮಾಡಿದೆ ಮತ್ತು ನೈಜ ಇತಿಹಾಸವನ್ನೇ ತಿರುಚಲು ಯತ್ನಿಸುತ್ತಿದೆ.pic.twitter.com/4LPQomi4vT— Pralhad Joshi (@JoshiPralhad)July 2, 2022
ಭಾರತದ ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ಹೋರಾಟಗಾರರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ಕಾಂಗ್ರೆಸ್ ಎಂದರೆ "ಸ್ವಾತಂತ್ರ್ಯ ಹೋರಾಟದ ಚರಿತ್ರೆ" ಎಂದು ಬಿಂಬಿಸುವ ಕಾಂಗ್ರೆಸ್ ಈ ದೇಶದ ಹೋರಾಟಗಾರರಿಗೆ ಘೋರ ಅಪಮಾನ ಮಾಡಿದೆ ಮತ್ತು ನೈಜ ಇತಿಹಾಸವನ್ನೇ ತಿರುಚಲು ಯತ್ನಿಸುತ್ತಿದೆ.pic.twitter.com/4LPQomi4vT
‘ನಮಸ್ಕಾರ ದೇವರು’ ಅಂತ ಹೇಳೋದ್ಯಾಕೆ ಡಾಕ್ಟರ್​ ಬ್ರೋ?; ಹಣ ಬೇಕಾದಾಗ ಯಾವ ಹೋಟೆಲ್​ಗೆ ಹೋಗ್ತಾರೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − two =
Remember me
