ಬೆಂಗಳೂರು:ಮಂಗಳವಾರ (ಜು.23) ಲೋಕಸಭೆಯಲ್ಲಿ ನಡೆದ ಕೇಂದ್ರ ಬಜೆಟ್​ 2024 ಹಾಗೂ ವಿತ್ತ ಸಚಿವೆ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಿಂದಲೇ ಆಯ್ಕೆಯಾಗಿ ಹೋಗಿರುವ ಕೇಂದ್ರ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಸೇರಿದಂತೆ ರಾಜ್ಯದ ಸಂಸದರೆಲ್ಲರ ಸಭೆ ಕರೆದು ರಾಜ್ಯದ ಅತ್ಯವಶ್ಯಕ ಬೇಡಿಕೆಗಳನ್ನು ಮುಂದಿಟ್ಟು ಮನವರಿಕೆ ಮಾಡಿಕೊಟ್ಟಿದ್ದರೂ ಸಹ ಮಂಡಿಸಲಾಗಿರುವ ಕೇಂದ್ರ ಬಿಜೆಪಿ ಸರ್ಕಾರದ ಬಜೆಟ್​ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದರು.
ಇದನ್ನೂ ಓದಿ:ಐಸಿಸಿಗೆ ಗಾಳ ಹಾಕಿದ ಪಿಸಿಬಿ! ತಮ್ಮ ನೆಲಕ್ಕೆ ಟೀಮ್ ಇಂಡಿಯಾ ಕರೆಸಿಕೊಳ್ಳಲು ಸಖತ್ ಪ್ಲಾನ್ ಮಾಡಿದೆ ಪಾಕ್​
ಕೇಂದ್ರ ಸರ್ಕಾರದ ಈ ಉದ್ದೇಶಪೂರ್ವ ನಿರ್ಲಕ್ಷ್ಯ ಮತ್ತು ತಾರತಮ್ಯ ನೀತಿಯನ್ನು ಖಂಡಿಸಿ, ಇದೇ ಜುಲೈ 27ರಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಕರೆಯಲಾಗಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ. ಇಂದು ಮಂಡಿಸಲಾದ 2024-25ರ ಸಾಲಿನ ಬಜೆಟ್ ನೋಡಿದ ನಂತರ ನಮಗೆ ಕೇಂದ್ರ ಸರ್ಕಾರದ ಮೇಲಿನ ವಿಶ‍್ವಾಸವೇ ಹೊರಟುಹೋಗಿದೆ. ಬಜೆಟ್​ನಲ್ಲಿ ರೈತರ ಕಲ್ಯಾಣದ ಕಾಳಜಿ ವ್ಯಕ್ತಪಡಿಸಿರುವ ಹಣಕಾಸುವ ಸಚಿವರು ನಮ್ಮ ಬಹುದಿನಗಳ ಬೇಡಿಕೆಯಾಗಿರುವ ಮೇಕೆದಾಟು ಯೋಜನೆಯ ಬಗ್ಗೆ ಪ್ರಸ್ತಾವವನ್ನೇ ಮಾಡಿಲ್ಲ ಎಂದು ಹೇಳಿದರು.
ಭದ್ರಾ ಮೇಲ್ದಂಡೆಗೆ ವಿಶೇಷ ನೆರವು ನೀಡುವ ತಮ್ಮದೇ ಭರವಸೆಯನ್ನೂ ಉಳಿಸಿಕೊಳ್ಳಲಿಲ್ಲ. ಕಳಸಾ-ಬಂಡೂರಿ ಯೋಜನೆಯನ್ನೂ ನಿರ್ಲಕ್ಷಿಸಲಾಗಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3ನೇ ಹಂತದ ಯೋಜನೆ ಮತ್ತು ಬೆಂಗಳೂರು ನಗರದ ಉದ್ದೇಶಿತ ಅಷ್ಟಪಥ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣಕ್ಕೆ ಅಗತ್ಯ ಅನುಮತಿ ಮತ್ತು ಅನುದಾನವನ್ನೂ ನೀಡಿಲ್ಲ. ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವ ಸೂಚನೆ ಕೂಡಾ ಬಜೆಟ್​ನಲ್ಲಿ ಇಲ್ಲ. ಕೇಂದ್ರ ಸರ್ಕಾರದ ತಾರತಮ್ಯ ನೀತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ ಬಿಜೆಪಿಯನ್ನು ತಿರಸ್ಕರಿಸಿರುವ ಕರ್ನಾಟಕವೂ ಸೇರಿದಂತೆ ದಕ್ಷಿಣ ರಾಜ್ಯಗಳ ವಿರುದ್ಧ ರಾಜಕೀಯ ಸೇಡು ತೀರಿಸಿಕೊಳ್ಳಲು ನರೇಂದ್ರ ಮೋದಿ ಸರ್ಕಾರ ನಿರ್ಧಾರ ಮಾಡಿದಂತಿದೆ ಎಂದಿದ್ದಾರೆ.
ಇದನ್ನೂ ಓದಿ:ಇಲ್ಲಿಯವರೆಗೂ ಯಾವೊಬ್ಬ ನಟನಿಗೂ ಸಿಗದಂತಹ ಗೌರವ ಶಾರುಖ್‌ಗೆ! ಈ ಸಾಧನೆ ಮಾಡದಿರುವುದು ವಿಶೇಷ….
ದೇಶದಲ್ಲಿ 28 ರಾಜ್ಯಗಳು ಮತ್ತು ಎಂಟು ಕೇಂದ್ರಾಡಳಿತ ಪ್ರದೇಶಗಳಿವೆ ಎನ್ನುವುದನ್ನು ನರೇಂದ್ರ ಮೋದಿ ಸರ್ಕಾರ ಮರೆತಂತಿದೆ. ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ಸುರಿದಿರುವ ವಿಶೇಷ ಅನುದಾನದ ಸುರಿಮಳೆಯನ್ನು ನೋಡಿದರೆ ನರೇಂದ್ರ ಮೋದಿಯವರ ಲೆಕ್ಕಾಚಾರದಲ್ಲಿ ಆ ಎರಡು ರಾಜ್ಯಗಳು ಮಾತ್ರ ಅಸ್ತಿತ್ವದಲ್ಲಿರುವ ಹಾಗೆ ಕಾಣುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನಿಲುವಾಗಿದೆ. ಈ ಅನ್ಯಾಯ ಸಹಿಸಲಾಗದು. ಈ ರೀತಿ ನಿರ್ಲಕ್ಷ್ಯಕ್ಕೊಳಗಾಗಿರುವ ಬಿಜೆಪಿಯೇತರ ಪಕ್ಷಗಳ ಆಡಳಿತದ ರಾಜ್ಯಗಳ ಜೊತೆ ಸೇರಿ ಕೇಂದ್ರ ಸರ್ಕಾರದ ತಾರತಮ್ಯ ನೀತಿ ಮತ್ತು ಸೇಡಿನ ರಾಜಕಾರಣದ ವಿರುದ್ಧ ಹೋರಾಟ ನಡೆಸಲಾಗುವುದು. ಈ ಹೋರಾಟದಲ್ಲಿ ಕೇಂದ್ರ ಸರ್ಕಾರದ ಕರ್ನಾಟಕ ವಿರೋಧಿ ನಿಲುವಿನ ಬಗ್ಗೆ ಅಸಮಾಧಾನಗೊಂಡಿರುವ ರಾಜ್ಯದ ಜನತೆ ನಮ್ಮ ಜೊತೆ ನಿಲ್ಲಲಿದ್ದಾರೆ ಎಂಬ ಭರವಸೆ ನನಗಿದೆ ಎಂದರು.
ಐಸಿಸಿಗೆ ಗಾಳ ಹಾಕಿದ ಪಿಸಿಬಿ! ತಮ್ಮ ನೆಲಕ್ಕೆ ಟೀಮ್ ಇಂಡಿಯಾ ಕರೆಸಿಕೊಳ್ಳಲು ಸಖತ್ ಪ್ಲಾನ್ ಮಾಡಿದೆ ಪಾಕ್​

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × four =
Remember me
