ಬೆಂಗಳೂರು:ಹಿಂದಿನ ಬಾರಿ ತಮ್ಮ ಸರ್ಕಾರದ ಅವಧಿಯಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಳ್ಳಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಿ, ಅದರ ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಕರ್ನಾಟಕ ಶೋಷಿತ ವರ್ಗಗಳ ಮಹಾಒಕ್ಕೂಟದ ನಿಯೋಗವನ್ನು ಭೇಟಿ ಮಾಡಿ ಮಾತನಾಡಿದರು. ಜಾತಿವಾರು ಸಮೀಕ್ಷೆಯಿಂದ ಜನರಿಗೆ ಒದಗಿಸಬೇಕಾದ ಸೌಲಭ್ಯಗಳು, (preferential treatment) ಮೊದಲಾದ ಅಂಶಗಳ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಅಗತ್ಯವಿರುವ ದತ್ತಾಂಶ ಲಭ್ಯವಾಗುವುದು. ಮೀಸಲಾತಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ವೈಜ್ಞಾನಿಕ ಹಾಗೂ ನಿಖರ ಮಾಹಿತಿ ಅತಿ ಅಗತ್ಯ. ಈ ಉದ್ದೇಶದಿಂದ ಜಾತಿವಾರು ಸಮೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ವರದಿಯನ್ನು ಸ್ವೀಕರಿಸಿ, ಅದರಲ್ಲಿನ ದತ್ತಾಂಶಗಳ ಆಧಾರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ:ನನ್ನ ನಿನ್ನೆ, ಇಂದು, ನಾಳೆಗಳು ನೀನೆ…ಚಿರು ಪುಣ್ಯತಿಥಿಯಂದು ಭಾವುಕರಾದ ಮೇಘನಾ ರಾಜ್
ಬಿಜೆಪಿ ಸರ್ಕಾರವು ಮೀಸಲಾತಿಯಲ್ಲಿ ಸೃಷ್ಟಿಸಿದ ಗೊಂದಲ ನಿವಾರಣೆ ಮಾಡಲಾಗುವುದು. ಇಲ್ಲವಾದರೆ ಯಾರಿಗೂ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಾಗದು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.
ಒಕ್ಕೂಟದ ಮುಖಂಡರಾದ ಕೆ.ಎಂ.ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಮಾವಳ್ಳಿ ಶಂಕರ್, ಪ್ರೊ.ರವಿ ವರ್ಮಕುಮಾರ್, ಅನಂತ್ ನಾಯಕ್, ಡಾ.ನರಸಿಂಹಯ್ಯ, ಪ್ರೊ.ಜಾಫೆಟ್, ಬಿ.ಟಿ.ಲಲಿತಾನಾಯಕ್, ಜಿ.ಎಸ್.ಪಾಟೀಲ್ ಸೇರಿ 150 ಕ್ಕೂ ಹೆಚ್ಚು ಮಂದಿ ನಾನಾ ಜಾತಿಗಳ ಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.
ವಯಸ್ಸಾಯ್ತೆಂದು ಖುಷಿ ಇಲ್ಲದೇ ಸಾಯ್ಬೇಕಾ? ಸಂಗಾತಿ ಬೇಕು ಅನಿಸಿದ್ರೆ ಯಾಕೆ ಪಡೆಯಬಾರದು?: ಆಶಿಶ್ ವಿದ್ಯಾರ್ಥಿ ಪ್ರಶ್ನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
