ಬೆಂಗಳೂರು:ವಿಧಾನ ಪರಿಷತ್​ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಅಖಾಡಕ್ಕಿಳಿಯಲು ಸಜ್ಜಾಗಿದ್ದ ಮಾಜಿ ಸಚಿವ ವಿಶ್ವನಾಥ್​ಗೆ ಹಿನ್ನಡೆಯಾಗಿದ್ದು, ಇದರ ಹಿಂದೆ ದೊಡ್ಡ ಷಡ್ಯಂತ್ರವೇ ಅಡಗಿದೆ ಎಂದು ಅವರು ಆರೋಪಿಸಿದ್ದಾರೆ.
ತನಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಎಚ್​.ಡಿ. ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರ ಹೆಸರನ್ನು ತಳುಕು ಹಾಕಿರುವ ವಿಶ್ವನಾಥ್, ಪಕ್ಷದ ಒಳಗಡೆ ಹಾಗೂ ಹೊರಗಡೆ ಪಿತೂರಿ ನಡೆದಿದೆ. ಇದನ್ನು ಕೆಲವೇ ದಿನಗಳಲ್ಲಿ ಬಹಿರಂಗ ಪಡಿಸುವೆ ಎಂದು ಕಿಡಿಕಾರಿದ್ದಾರೆ. ಈ ಆರೋಪ ಅಲ್ಲಗೆಳೆದಿರುವ ಸಿದ್ದರಾಮಯ್ಯ, ‘ಹಾಗಾದರೆ ಅವನ ಪ್ರಕಾರ ಬಿಜೆಪಿಗೂ ನಾನೇ ಹೈಕಮಾಂಡ್​?’ ಎಂದು ಲೇವಡಿ ಮಾಡಿದ್ದಾರೆ.ಇದನ್ನೂ ಓದಿರಿಬಿಜೆಪಿ ಕಚೇರಿಯಲ್ಲಿ ಆರ್.ಶಂಕರ್​ ಗಳಗಳನೇ ಅತ್ತಿದ್ದೇಕೆ?
‘ಎಂಎಲ್​ಸಿ ಚುನಾವಣೆಗೆ ಎಚ್​.ವಿಶ್ವನಾಥ್​ಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ನಾನೇ ಕಾರಣ ಅನ್ನೋದಾದರೆ ಅವನ ಪ್ರಕಾರ ನಾನು ಬಿಜೆಪಿ ಹೈಕಮಾಂಡ್. ಅವನಿಗೆ ಬುದ್ಧಿ ಇಲ್ಲ…’ ಎಂದು ಸಿದ್ದರಾಮಯ್ಯ ಏಕವಚನದಲ್ಲೇ ವಿಶ್ವನಾಥ್​ ಆರೋಪಕ್ಕೆ ಕಿಡಿಕಾರಿದರು.
ಇನ್ನು ವಿಶ್ವನಾಥ್​ ಆರೋಪದ ಬಗ್ಗೆ ಮಾನಾಡಿರುವ ಎಚ್​.ಡಿ.ಕುಮಾರಸ್ವಾಮಿ, ಅವರು ಯಾವಾಗ ಏನು ಮಾತನಾಡುತ್ತಾರೆ ಅಂತಾ ಗೊತ್ತಿಲ್ಲ. ಬಿಜೆಪಿ ಪಕ್ಷದಲ್ಲಿ ನನ್ನ ಪ್ರಭಾವ ಇದೆ ಎಂದು ಹೇಳುವ ಮೂಲಕ ಅಲ್ಲಿ ನನ್ನ ಪ್ರಭಾವ ಇನ್ನೂ ಇದೆ ಅಂತಾ ಅವರೇ ಹೇಳುತ್ತಿದ್ದಾರೆ. ನಾಲಿಗೆ ಇದೆ ಅಂತಾ ಏನೇನೋ ಮಾತನಾಡುವುದು ಬೇಡ ಎಂದರು.
ಇದನ್ನೂ ಓದಿರಿಇಂಚರ ಗೋವಿಂದರಾಜುಗೆ ಜೆಡಿಎಸ್​ ಟಿಕೆಟ್​ ಕೊಟ್ಟಿದ್ದರ ಹಿಂದಿದೆ ಮಾಸ್ಟರ್​ ಪ್ಲ್ಯಾನ್​…
ಇಂಚರ ಗೋವಿಂದರಾಜುಗೆ ಜೆಡಿಎಸ್​ ಟಿಕೆಟ್​ ಕೊಟ್ಟಿದ್ದರ ಹಿಂದಿದೆ ಮಾಸ್ಟರ್​ ಪ್ಲ್ಯಾನ್​…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 + 5 =
Remember me
