ದಾವಣಗೆರೆ:ದಾವಣಗೆರೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಹುತೇಕ ಜುಲೈ 3ಕ್ಕೆ ಬಜೆಟ್ ಅಧಿವೇಶನ ಆರಂಭವಾಗಲಿದೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, “ಜುಲೈ 3ಕ್ಕೆ ಅಧಿವೇಶನ ಪ್ರಾರಂಭವಾದರೆ ಜುಲೈ 7ಕ್ಕೆ ಬಜೆಟ್ ಮಂಡನೆ ನಡೆಯಲಿದೆ” ಎಂದಿದ್ದಾರೆ. ಇದೇ ಸಂದರ್ಭದಲ್ಲಿ ವಿದ್ಯುತ್​ ದರ ಏರಿಕೆ, ಗೋಹತ್ಯೆ ಕಾಯ್ದೆ ತಿದ್ದುಪಡಿ ಮುಂತಾದ ವಿಚಾರಗಳ ಬಗ್ಗೆ ಮಾತನಾಡಿರುವ ಸಿಎಂ, “ವಿದ್ಯುತ್ ದರ ಹೆಚ್ಚಳ ನಾವು ಮಾಡಿಲ್ಲ, ಕೆ.ಇ.ಆರ್.ಸಿ ನವರು ಮಾಡಿದ್ದಾರೆ. ನಾವು ಬರೋ ಮುಂಚನೆ ರೆಗ್ಯುಲೆಟರಿ ಆ್ಯಕ್ಟ್ ಪ್ರಕಾರ ದರ ಪರಿಷ್ಕರಣೆ ಮಾಡಿದ್ದಾರೆ” ಎಂದಿದ್ದಾರೆ.
ಇದನ್ನೂ ಓದಿ:ನಿಗಮ-ಮಂಡಳಿ ಲೆಕ್ಕಾಚಾರ ಶುರು: ಪ್ರಮುಖರ ಮೇಲೆ ಆಕಾಂಕ್ಷಿಗಳ ಒತ್ತಡ; ಬಜೆಟ್ ಮಂಡನೆ ಬಳಿಕ ನೇಮಕ ಪ್ರಕ್ರಿಯೆ
ಇನ್ನು ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುವ ಬಗ್ಗೆ ಪ್ರತಿಕ್ರಿಯಿಸಿ “1964 ರಲ್ಲಿ ಕಾನೂನು ಆಗಿದೆ, ನಂತರ ತಿದ್ದುಪಡಿಗಳಾಗಿವೆ. ಅದನ್ನ ಕ್ಯಾಬಿನೆಟ್​ನಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ತಗೋತಿವಿ. ಮುಂಗಾರು ಬಿತ್ತನೆ ಬಗ್ಗೆ ಜಿಲ್ಲಾಧಿಕಾರಿಗಳು ಜಿಲ್ಲಾ ಪಂಚಾಯತ್ ಸಿಇಓ ಜೊತೆ ಮಾತನಾಡಿದ್ದೀನಿ. ಬಿತ್ತನೆಗೆ ಬೀಜ ಗೊಬ್ಬರ ಕೊರತೆ ಆಗದಂತೆ ನೋಡಿಕೊಳ್ಳಬೇಕು ಅಂತ ಸೂಚನೆ ಕೊಟ್ಟಿದ್ದೇನೆ” ಎಂದು ದಾವಣಗೆರೆಯಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:13 + eleven =
Remember me
