ಬೆಳಗಾವಿ:ಬಿಜೆಪಿ ಬಿಡುಗಡೆ ಮಾಡಿರುವ ಮೊದಲ ಹಾಗೂ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಘೋಷಿಸದಿರುವುದಕ್ಕೆ ಅತೃಪ್ತಗೊಂಡಿರುವ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಕಾಂಗ್ರೆಸ್​ ಸೇರಿದರೆ ಅವರನ್ನು ಸ್ವಾಗತಿಸಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ಧಾರೆ.
ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಬಿಜೆಪಿ ಅವರು ತಮ್ಮ ಪಕ್ಷದ ಹಿರಿಯ ನಾಯಕರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ದೂರಿದ್ಧಾರೆ.
ಸದಾ ಪಕ್ಷ, ತತ್ವ, ಸಿದ್ಧಾಂತ ಎನ್ನುತ್ತಿದ್ದ ಈಶ್ವರಪ್ಪ ಈಗ ಎಲ್ಲಿಗೆ ಹೋದರು. ಅವರ ಸ್ಥಿತ ಈಗ ಏನಾಯ್ತು ನೋಡಿ. ಇದನ್ನು ನೋಡಿದರೆ ಗೊತ್ತಾಗುತ್ತದೆ ಬಿಜೆಪಿ ಅವರು ಅವರ ಪಕ್ಷದ ಹಿರಿಯ ನಾಯಕರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಛೇಡಿಸಿದ್ಧಾರೆ.
ಇದನ್ನೂ ಒದಿ:ಕೇಜ್ರಿವಾಲ್​ಗೆ ಸಿಬಿಐ ಸಮನ್ಸ್​; ನ್ಯಾಯಾಲಯದಲ್ಲಿ ನಮ್ಮ ಹೋರಾಟ ಎಂದ ದೆಹಲಿ ಸಿಎಂ
ಜಗದೀಶ್​ ಶೆಟ್ಟರ್​​ ಜೊತೆಗೆ ನಾನು ಮಾತನಾಡಿಲ್ಲ ಅವರು ಕಾಂಗ್ರೆಸ್​​ಗೆ ಬರುವುದಾದರೆ ಅವರನ್ನು ಸ್ವಾಗತಿಸುತ್ತೇನೆ. ಲಕ್ಷ್ಮಣ್​ ಸವದಿ ಆಗಮನದಿಂದ ಬೆಳಗಾವಿ ಭಾಗದಲ್ಲಿ ಕಾಂಗ್ರೆಸ್​​ಗೆ ಬಲ ಬಂದಂತಾಗಿದೆ.
ಇನ್ನು ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ವಸತಿ ಸಚಿವ ಸೋಮಣ್ಣ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿ ಅವನು ಹೊರಗಿನವನು ಅವನ ಪರವಾಗಿ ಅಲ್ಲಿ ಒಂದು ಮತವೂ ಇಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
