ರಾಮನಗರ: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಘೋಷಣೆಯಾದ ಹಿನ್ನೆಲೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತವರು ಜಿಲ್ಲೆಯಲ್ಲಿ ಪೊಲೀಸರಿಗೆ ಅಲರ್ಟ್ ಆಗಿರಲು ಉನ್ನತ ಅಧಿಕಾರಿಗಳು ಸೂಚಿಸಿದ್ದಾರೆ.
ಜಿಲ್ಲೆಗೆ ಹೆಚ್ಚುವರಿ ಪೊಲೀಸ್ ತುಕಡಿ ನಿಯೋಜನೆ ಮಾಡಲಾಗಿದೆ. ಬೆಂಗಳೂರು, ಮೈಸೂರಿನಿಂದ ಆರು ಕೆಎಸ್ ಆರ್​​ಪಿ ತುಕಡಿ ಆಗಮಿಸಿದ್ದಾರೆ. ಡಿಕೆಶಿಗೆ ಸಿಎಂ ಸ್ಥಾನ ತಪ್ಪಿರುವ ಹಿನ್ನೆಲೆ ಗಲಾಟೆ, ಪ್ರತಿಭಟನೆ ಸಾಧ್ಯತೆ ಇದೆ. ಹೀಗಾಗಿ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಯುವ ಸಾಧ್ಯತೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರಿಂದ ಅಲರ್ಟ್ ಆಗಿರುವಂತೆ ಹೇಳಲಾಗಿದೆ.
ಇದನ್ನೂ ಓದಿ: ಸಮ್ಮಿಶ್ರ ಸರ್ಕಾರದ ದಿನಗಳಲ್ಲಿ ಸಿದ್ದರಾಮಯ್ಯನವರ ಅಸಹಾಯಕತೆ ಕೆಲವರನ್ನು ಪಕ್ಷ ಬಿಡಲು ಪ್ರೋತ್ಸಾಹಿಸಿತ್ತು: ಎಸ್​​.ಟಿ ಸೋಮಶೇಖರ್
ಯಾವುದೇ ರೀತಿಯ ಪ್ರತಿಭಟನೆ ನಡೆಸಿ ಪಕ್ಷಕ್ಕೆ ಮುಜುಗರವಾಗುವಂತೆ ನಡೆದುಕೊಳ್ಳದಂತೆ ಬೆಂಬಲಿಗರಿಗೆ ಡಿಕೆ ಬ್ರದರ್ಸ್ ಮನವಿ ಮಾಡಿಕೊಂಡಿದ್ದಾರೆ. ಪೋನ್ ಮೂಲಕ ಬಂದಿರುವ ಈ ಸೂಚನೆ ಹಿನ್ನೆಲೆಯಲ್ಲಿ, ಸದ್ಯಕ್ಕೆ ಡಿಕೆ ಅಭಿಮಾನಿಗಳು ಸೈಲೆಂಟ್ ಆಗಿದ್ದಾರೆ.
ನಾಳೆ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಕಾರ್ಯಕ್ರಮ ನಗರದ ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿದೆ. ಸಿಎಂ ಸ್ಥಾನ ಖಚಿತವಾದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ದೆಹಲಿಯಿಂದ ಬೆಂಗಳೂರಿಗೆ ತೆರಳಲಿದ್ದಾರೆ. ದೆಹಲಿ ಪ್ರವಾಸ ಫಲ ನೀಡಿದ್ದು, ಸಂಜೆ ಒಳಗೆ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ ಬರಲಿದ್ದಾರೆ ಎಂದು ಕಾಂಗ್ರೆಸ್ ಉನ್ನತ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.
ದರೋಡೆಗೆ ಬಂದು ಕಂಠಪೂರ್ತಿ ಕುಡಿದು ಮನೆ ಮಾಲೀಕನ ಬೆಡ್​​ರೂಂನಲ್ಲೇ ನಿದ್ರೆಗೆ ಜಾರಿದ ಕಳ್ಳ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 14 =
Remember me
