ಬೆಂಗಳೂರು:ಮುಖ್ಯಮಂತ್ರಿ ಖಾತೆಯ ಹಗ್ಗ ಜಗ್ಗಾಟದಲ್ಲಿ ಸಿಎಂ ಸ್ಥಾನ ಕೊನೆಗೂ ಸಿದ್ದರಾಮಯ್ಯ ಪಾಲಾಗಿದೆ. ಡಿಸಿಎಂ ಸ್ಥಾನಕ್ಕೆ ಡಿ.ಕೆ ಶಿವಕುಮಾರ್​​ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತಿದ್ದಾರೆ ಎನ್ನುವ ಸುದ್ದಿ ಖಚಿತವಾಗುತ್ತಿದ್ದಂತೆ ಹಲವು ಯೋಜನಗಳಿಗೆ ಮತ್ತೆ ಮರುಜೀವ ಸೀಗುತ್ತಾ? ಎನ್ನುವ ಚರ್ಚೆ ಶುರುವಾಗಿದೆ.
ಇದನ್ನೂ ಓದಿ: ಆರೋಪ ಸಾಬೀತು ಮಾಡಿದರೆ ಸರ್ಕಲ್​ನಲ್ಲಿ ನೇಣು ಹಾಕಿಕೊಂಡು ಸಾಯುವೆ ಎಂದು ಸವಾಲೆಸೆದ ಪರಾಜಿತ ಅಭ್ಯರ್ಥಿ!
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಕರ್ನಾಟಕದಾದ್ಯಂತ ಆರಂಭಿಸಲಾಗಿದ್ದ, ಅವರ ಕನಸಿನ ಕೂಸಾಗಿದ್ದ ಇಂದಿರಾ ಕ್ಯಾಂಟೀನ್​ಗೆ ಮರುಜೀವ ದೊರೆಯುವ ನಿರೀಕ್ಷೆ ಇದೆ. ಇಂದಿರಾ ಕ್ಯಾಂಟಿನ್​​​ಗಳಿಗೆ ಮರುಜೀವ ನೀಡಬೇಕೆನ್ನುವ ಆಗ್ರಹ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಹುತೇಕ ಕ್ಯಾಂಟೀನ್​ಗಳು ಮುಚ್ಚಲ್ಪಟ್ಟಿದ್ದರೆ, ಅನೇಕ ಕ್ಯಾಂಟೀನ್​ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ. ಬಡವರಿಗೆ, ಕೂಲಿ ಕಾರ್ಮಿಕರಿಗೆ ಬೆಳಿಗ್ಗೆ ತಿಂಡಿ ಮಧ್ಯಾಹ್ನದ ಊಟ ಸಿಗುತ್ತಿತ್ತು. ಕೇವಲ 10 ರೂಪಾಯಿಗೆ ಬಡ ಜನರಿಗೆ ಊಟ ಸಿಗುತ್ತಿತ್ತು. ಕಾಂಗ್ರೆಸ್ ಅಧಿಕಾರವಧಿಯಲ್ಲಿ ರಾಜ್ಯದ ಎಲ್ಲಾ ಕ್ಯಾಂಟಿನ್​​ಗಳಿಗೆ ಅನುದಾನ ನೀಡಲಾಗಿತ್ತು. ಅದ್ರೆ ಬಿಜೆಪಿ ಸರ್ಕಾರ ಬಂದ ಕೆಲವೇ ದಿನಗಳಲ್ಲಿ ರಾಜ್ಯದ ಹಲವು ಕಡೆ ಅನುದಾನ ಕೊಡದೆ ಕ್ಯಾಂಟಿನ್ ಬಂದ್ ಮಾಡಲಾಗಿತ್ತು. ಹೀಗಾಗಿ ಮತ್ತೆ ಇಂದಿರಾ ಕ್ಯಾಂಟಿನ್​​​ಗಳು ತೆರೆಯಬೇಕು ಎಂದು ಬಿಬಿಎಂಪಿ ಕಾಂಗ್ರೆಸ್ ಸದಸ್ಯರು ಪಟ್ಟು ಹಿಡಿದಿದ್ದಾರೆ. ಬಡವರ ಪಾಲಿನ ಇಂದಿರಾ ಕ್ಯಾಂಟಿನ್ ಮುಂದಿನ ದಿನಗಳಲ್ಲಿ ಮತ್ತೆ ರಾಜ್ಯದೇಲ್ಲೆಡೆ ಕಾರ್ಯನಿರ್ವಹಿಸುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.
ಚುನಾವಣೆಯಲ್ಲಿ ಸೋತ ಮಾತ್ರಕ್ಕೆ ನಾನು ಮನೆ ಸೇರುವ ವ್ಯಕ್ತಿಯಲ್ಲ:ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − five =
Remember me
