ಬೆಂಗಳೂರು:ದಿಗ್ವಿಜಯ ನ್ಯೂಸ್ ಜತೆ ಮಾತನಾಡಿರುವ ಸಿದ್ದರಾಮಯ್ಯ ಮೊಮ್ಮಗ ಧವನ್, “ನನ್ನ ಸ್ವ ಇಚ್ಛೆಯಿಂದ ರಾಜಕಾರಣಕ್ಕೆ ಬರುತ್ತಿದ್ದೇನೆ” ಎಂದಿದ್ದಾರೆ.
ಸುದ್ದಿಗಾರರ ಬಳಿ ಮಾತನಾಡಿದ ಸಿದ್ದು ಮೊಮ್ಮಗ, “ನನ್ನ ರಾಜಕೀಯ ಪ್ರವೇಶ ಮನೆಯವರೆಲ್ಲರಿಗೂ ಖುಷಿ ಕೊಟ್ಟಿದೆ. ತಾತನ ಪತವಾಗಿ ಪ್ರಚಾರ ಮಾಡುತ್ತೇನೆ. ನಾಮಪತ್ರ ಸಲ್ಲಿಕೆ ವೇಳೆ ಕೂಡ ಭಾಗವಹಿಸುತ್ತೇನೆ. ತಾತ ಅವರಿಗೆ ವೋಟ್ ಕೊಡಿ ಅಂತ ಎಲ್ಲರನ್ನು ಕೇಳಿಕೊಳ್ಳುತ್ತೇನೆ” ಎಂದು ಸಿದ್ದರಾಮಯ್ಯ ಪರವಾಗಿ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ.
“ಮೊದಲಿನಿಂದಲೂ ನನಗೆ ರಾಜಕೀಯ ಅಂದ್ರೆ ಆಸಕ್ತಿ. ತಂದೆ ರಾಕೇಶ್ ಮನೆಯಲ್ಲಿ ರಾಜಕೀಯದ ಬಗ್ಗೆ ಮಾತನಾಡುವಾಗ ಆಸಕ್ತಿಯಿಂದ ಕೇಳುತ್ತಿದ್ದೆ. ನನ್ನ ತಂದೆಯನ್ನ ಸದಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಚಿಕ್ಕಪ್ಪ ಯತೀಂದ್ರ ಅವರು ನನ್ನ ಜೀವನದಲ್ಲಿ ತಂದೆಯ ಸ್ಥಾನವನ್ನು ತುಂಬಿದ್ದಾರೆ. ಅವರು ಕೂಡ ರಾಜಕಾರಣದ ಬಗ್ಗೆ ಹೇಳುತ್ತಿರುತ್ತಾರೆ. ನನಗೆ 25 ವರ್ಷ ತುಂಬಲಿ. ಆಗ ಚುನಾವಣೆ ಸ್ಪರ್ಧೆಗೆ ಕ್ವಾಲಿಫೈ ಆಗುತ್ತೇನೆ. ನಂತರ ಅದರ ಬಗ್ಗೆ ಚರ್ಚೆ ಮಾಡೋಣ.
ತಾತ ಹಾಗೂ ಚಿಕ್ಕಪ್ಪ ಮೊದಲು ಓದುವಂತೆ ಹೇಳಿದ್ದಾರೆ. ತಾತನಂತೆ ನಾನೂ ಕೂಡ ಕಾನೂನನ್ನು ಕಲಿಯುತ್ತೇನೆ. ಸಂವಿಧಾನದ ಬಗ್ಗೆ ಹೆಚ್ಚು ಹೇಳಿಕೊಡುತ್ತಿದ್ದಾರೆ. ವರುಣದಲ್ಲಿ ಸ್ನೇಹಿತರನ್ನು ಮಾಡಿಕೊಳ್ಳಬೇಕು. ಬಹಳ ದಿನಗಳು ಆಗಿತ್ತು ಇಲ್ಲಿಗೆ ಬಂದು” ಎಂದು ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಮಾತನಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + eight =
Remember me
