ಬೆಂಗಳೂರು: ಶಿರೂರಿನ ಗುಡ್ಡ ಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರು ಭೇಟಿ ನೀಡುವುದು ಸುದ್ದಿಯಾಗದಂತೆ ತಡೆಯಲು ಯತ್ನಿಸಿರುವುದು ಸಿಎಂ ಸಿದ್ದರಾಮಯ್ಯ ಅವರ ಅಂಜು ಬುರುಕುತನ ತೋರಿಸುತ್ತದೆ.
ರಕ್ಷಣಾ ಕಾರ್ಯಾಚರಣೆ ಸ್ಥಳದಿಂದ 5 ಕಿ.ಮೀ ದೂರದಲ್ಲೇ ಬ್ಯಾರಿಕೇಡ್ ಹಾಕಿ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದಾರೆ. ಮಾಧ್ಯಮಗಳ ಸ್ವತಂತ್ರ್ಯ ಹತ್ತಿಕ್ಕುವ ನಿಮ್ಮ ಈ ನಡೆ ಸಂವಿಧಾನ ವಿರೋಧಿ ಅಲ್ಲವೇ ಮುಖ್ಯಮಂತ್ರಿಗಳೇ? ಎಂದು ಜೆಡಿಎಸ್ ಪ್ರಶ್ನಿಸಿದೆ.
ದುರಂತ ನಡೆದು ಇಷ್ಟು ದಿನಗಳಾದರೂ ಶಿರೂರಿಗೆ ನೀವಾಗಲಿ, ನಿಮ್ಮ ಸರ್ಕಾರದ ಯಾವುದೇ ಸಚಿವರಾಗಲಿ, ಸ್ಥಳಕ್ಕೆ ಭೇಟಿ ನೀಡಿಲ್ಲ. ಸಂತ್ರಸ್ಥರ ಸಂಕಷ್ಟ ಆಲಿಸಿಲ್ಲ. ಆದರೆ ಕುಮಾರಸ್ವಾಮಿ ಅವರು ಶಿರೂರು ಗ್ರಾಮಕ್ಕೆ ಭೇಟಿ ನೀಡುವ ವೇಳೆಯೂ ನಿಮ್ಮ ಸರ್ಕಾರದ ಈ ಸೇಡಿನ ರಾಜಕೀಯ ಥರವೇ? ಎಂದು ಕೇಳಿದೆ.
ಅದೇನೇ ಇರಲಿ, ಕುಮಾರಸ್ವಾಮಿ ಅವರಂತೂ ಪ್ರಚಾರಕ್ಕೆನೂ ಶಿರೂರಿಗೆ ಭೇಟಿ ನೀಡುತ್ತಿಲ್ಲ, ಜಿಲ್ಲಾಡಳಿತವನ್ನು ಬಳಸಿ ಮಾಧ್ಯಮದವರನ್ನು ತಡೆದ ಮಾತ್ರಕ್ಕೆ ಕುಮಾರಸ್ವಾಮಿ ಅವರ ಭೇಟಿ ನಿಲ್ಲಿಸಲು ಸಾಧ್ಯವೇ? ಸಂತ್ರಸ್ಥರ ಕಷ್ಟ ಆಲಿಸುವುದನ್ನು ತಡೆಯಲು ಸಾಧ್ಯವೇ? ಎಂದು ಜೆಡಿಎಸ್ ಪ್ರಶ್ನಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + five =
Remember me
