ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಮೇಲ್ವಿಚಾರಣೆ ಸಮಿತಿ ರಚಿಸಿರುವುದನ್ನು ಸರ್ಕಾರ ಪುನರ್ ಪರಿಶೀಲಿಸಬೇಕು ಎಂದು ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟ ಮನವಿ ಮಾಡಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಶ್ರೀ ನಾರಾಯಣ ಗುರು ಮಹಾ ಸಂಸ್ಥಾನದ ಪೀಠಾಧ್ಯಕ್ಷ ರೇಣುಕಾನಂದ ಸ್ವಾಮೀಜಿ ನೇತೃತ್ವದಲ್ಲಿ ಒಕ್ಕೂಟದ ನಿಯೋಗ ಭೇಟಿ ಮಾಡಿ ಶನಿವಾರ ಮನವಿ ಸಲ್ಲಿಸಿತು.
ದೇವಸ್ಥಾನಕ್ಕೆ ಅಪಾರ ಪ್ರಮಾಣದ ಭಕ್ತರು, ಹಿಂದುಳಿದ, ದಲಿತ ವರ್ಗಗಳ ಸಮುದಾಯ ಸೇವಾ ನಿಷ್ಠರು ಇದ್ದಾರೆ. ಈಡಿಗ ಸಮುದಾಯದ ಡಾ.ರಾಮಪ್ಪ ನೇತೃತ್ವದ ಧರ್ಮದರ್ಶಿ ಮಂಡಳಿ ಕಳೆದ 30 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳ ಮೂಲಕ ದೇವಸ್ಥಾನದ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸಿದೆ.
ಇದನ್ನೂ ಓದಿ:ಸಿಗಂದೂರು ವಿವಾದ ಭುಗಿಲೇಳಲು ಕಾಗೋಡು ತಿಮ್ಮಪ್ಪ ಕಾರಣ
ಸಣ್ಣಪುಟ್ಟ ಲೋಪದೋಷಗಳಿದ್ದರೆ ಸರಿಪಡಿಸಿಕೊಳ್ಳಲು ಹಾಗೂ ಎಂದಿನಂತೆ ಈ ಟ್ರಸ್ಟ್ ಗೆ ಧಾರ್ಮಿಕ, ಸಾಮಾಜಿಕ ಕಾರ್ಯಗಳ ನಿರ್ವಹಣೆ ಜವಾಬ್ದಾರಿ ನೀಡಿ, ಜಿಲ್ಲಾಧಿಕಾರಿ ರಚಿಸಿದ ಮೇಲ್ವಿಚಾರಣೆ ಸಮಿತಿಯನ್ನು ಕೈಬಿಡಬೇಕು ಎಂದು ಕೋರಿದ್ದು, ವಸ್ತುಸ್ಥಿತಿ ಮಾಹಿತಿ ತರಿಸಿಕೊಂಡು ಸೂಕ್ತ ಕ್ರಮವಹಿಸುವುದಾಗಿ ಬಿಎಸ್ ವೈ ಭರವಸೆ ನೀಡಿದ್ದಾರೆ.
ಇದನ್ನೂ ಓದಿ:ಸಿಗಂದೂರು ಕ್ಷೇತ್ರದ ವಿಷಯದಲ್ಲಿ ರಾಜಕಾರಣ
ನಿಯೋಗದಲ್ಲಿ ಒಕ್ಕೂಟದ ಮಠಾಧೀಶರಾದ ಮಧುರೆ ಹೊಸದುರ್ಗ ಭಗೀರಥ ಪೀಠಾಧಿಪತಿ ಪುರುಷೋತ್ತಮಾನಂದ ಪುರಿ ಸ್ವಾಮಿ, ಹೊಸದುರ್ಗ ಕನಕಗುರು ಪೀಠದ ಈಶ್ವರಾನಂದ ಪುರಿ ಸ್ವಾಮಿ, ಕುಂಚಿಟಿಗ ಮಹಾ ಸಂಸ್ಥಾನದ ಶಾಂತವೀರ ಸ್ವಾಮೀಜಿ ಇನ್ನಿತರ ಮಠಾಧೀಶರು ಇದ್ದರು.
ಇಒಎಸ್​-01 ಉಪಗ್ರಹ ಉಡಾವಣೆ ಇಂದು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 10 =
Remember me
