ಬೆಂಗಳೂರು:ಕೋವಿಡ್ -19 ನಿಂದ ಸಂಕಷ್ಟಕ್ಕೆ ಸಿಲುಕಿರುವ ರೇಷ್ಮೆ ರೀಲರ್ಸ್ ಹಾಗೂ ಟ್ರೇಡರ್ಸ್ ಗಳಿಗೆ ಇಲಾಖೆ ಸಂತಸದ ಸುದ್ದಿ ನೀಡಿದೆ. ರಿಲರ್ಸ್ ಹಾಗೂ ಟ್ರೇಡರ್ಸ್ ಗಳ ಜೊತೆ ಪ್ರತ್ಯೇಕ ಸಭೆ ನಡೆಸಿದ ಸಚಿವ ಡಾ. ನಾರಾಯಣಗೌಡ, ಸಮಸ್ಯೆಗಳನ್ನು ಆಲಿಸಿ ಪರಿಹಾರವನ್ನೂ ಸೂಚಿಸಿದ್ದಾರೆ. ಸಚಿವರು ತೆಗೆದುಕೊಂಡ ನಿರ್ಧಾರದಿಂದ ನೂಲುಬಿಚ್ಚಣಿಕೆದಾರರು (ರೀಲರ್ಸ್) ಹಾಗೂ ಟ್ರೇಡರ್ಸ್ ಸಂತಸಗೊಂಡಿದ್ದಾರೆ.
ಇದನ್ನೂ ಓದಿ:ಶಾಕಿಂಗ್ ನ್ಯೂಸ್…! ಜುಲೈ ಕೊನೆಗೆ ಗರಿಷ್ಟ ಮಟ್ಟಕ್ಕೇರಲಿದೆ ಕರೊನಾ : ಡಬ್ಲುಎಚ್​​ಒ
ಅಡಮಾನ ಸಾಲ ಮಿತಿ ಈ ವರೆಗೆ ಒಂದು ಲಕ್ಷ ರೂ. ಇತ್ತು. ಅದನ್ನ ಈಗ 2 ಲಕ್ಷ ರೂಪಾಯಿಗೆ ಏರಿಕೆ ಮಾಡುವುದಾಗಿ ಸಚಿವರು ಸಭೆಯಲ್ಲಿ ತಿಳಿಸಿದ್ದಾರೆ. ರೇಷ್ಮೆ ಗೆ ಹೆಚ್ಚಿನ ದರ ನಿಗದಿ ಮಾಡುವ ಬಗ್ಗೆಯೂ ಪರಿಶೀಲಿಸುವ ಭರವಸೆಯನ್ನ ಸಚಿವರು ನೀಡಿದ್ದಾರೆ. ಆ ಬಳಿಕ ಟ್ರೇಡರ್ಸ್ ಗಳ ಜೊತೆ ಸಭೆ ನಡೆಸಿ ಕುಂದುಕೊರತೆ ಆಲಿಸಿದ್ದಾರೆ. ಹೊರ ರಾಜ್ಯಗಳಿಗೆ ರೇಷ್ಮೆ ಸಾಗಿಸಲು ಸಾಧ್ಯವಾಗುತ್ತಿಲ್ಲ. ಕೋವಿಡ್ 19 ಬರುವುದಕ್ಕು ಮುನ್ನ ಹೆಚ್ಚಿನ ಬೆಲೆಗೆ ರೇಷ್ಮೆ ಖರೀದಿಸಲಾಗಿತ್ತು. ಈಗ ಹೊರ ರಾಜ್ಯಗಳಲ್ಲಿ ವಹಿವಾಟು ನಡೆಸುವುದು ಕಷ್ಟವಾಗಿದೆ. ಅಲ್ಲದೆ ಹೊರ ರಾಜ್ಯಗಳಲ್ಲಿ ನಡೆಸಿದ ವಹಿವಾಟಿನ ಹಣ ಕೂಡ ಬರದೆ ಬಾಕಿಯಾಗಿದೆ. ಇದರಿಂದ ಹೊಸದಾಗಿ ಖರೀದಿಗು ಸಮಸ್ಯೆ ಆಗಿದೆ. ಲಾಕ್ ಡೌನ್ ಮುಗಿದ ತಕ್ಷಣ ಚೀನಾ, ವಿಯೆಟ್ನಾಂ ಸೇರಿದಂತೆ ಬೇರೆ ಬೇರೆ ದೇಶಗಳಿಂದ ರೇಷ್ಮೆ ಆಮದಾಗುತ್ತೆ. ಆಗ ರಾಜ್ಯದ ರೇಷ್ಮೆ ದರ ಕುಸಿಯುವ ಸಾಧ್ಯತೆ ಇದೆ. ಹೀಗಾಗಿ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಚಿವರಲ್ಲಿ ಟ್ರೇಡರ್ಸ್ ಮನವಿ ಮಾಡಿದ್ರು.
ಇದನ್ನೂ ಓದಿ:VIDEO| ಮದ್ಯದ ಅಮಲಿನಲ್ಲಿ ತನ್ನ ಮನೆಗೆ ತಾನೇ ಬೆಂಕಿಯಿಟ್ಟ ಕುಡುಕ ಮಹಾಶಯ
ಆಂಟಿ ಡಂಪಿಂಗ್ ಚಾರ್ಜ್ ಏರಿಕೆ ಸಂಬಂಧ ತಕ್ಷಣವೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಸಚಿವರು ಸಭೆಯಲ್ಲಿ ತಿಳಿಸಿದ್ದಾರೆ. ಅಲ್ಲದೆ ರೇಷ್ಮೆ ಆಮದಿಗೂ ಮಿತಿ ಹೇರುವ ಪ್ರಯತ್ನ ಮಾಡಲಾಗುವುದು. ಇನ್ನು ಹೊರ ರಾಜ್ಯಗಳಿಗೆ ರೇಷ್ಮೆ ಸಾಗಿಸಲು ಕಮರ್ಷಿಯಲ್ ವೆಹಿಕಲ್ ಗೆ ಯಾವುದೆ ಸಮಸ್ಯೆ ಇಲ್ಲ. ಜೊತೆ ಅಗತ್ಯವಿದ್ದಲ್ಲಿ ಪಾಸ್ ವ್ಯವಸ್ಥೆ ಕೂಡ ಮಾಡಲಾಗುವುದು. ಈಗಾಗಲೆ ಕೋರಿಯರ್ ಸರ್ವಿಸ್ ಕೂಡ ಆರಂಭವಾಗಿದೆ..ಟ್ರೇಡರ್ಸ್ ಈ ಎಲ್ಲ ಸೌಲಭ್ಯ ಬಳಸಿಕೊಂಡು ವಹಿವಾಟು ನಡೆಸಬಹುದು. ಯಾವುದೆ ಸಂದರ್ಭದಲ್ಲಿ ವಹಿವಾಟು ನಡೆಸಲು ಸಮಸ್ಯೆ ಎದುರಾದರೆ ತಕ್ಷಣ ಸರ್ಕಾರ ನಿಮ್ಮ ನೆರವಿಗೆ ಬರಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.
ಇದನ್ನೂ ಓದಿ:VIDEO| ಮಹಿಳೆಯರ ಕಿತ್ತಾಟ: ಓಡಿ ಬಂದು ಜಿಗಿದು ಹೆಂಗಸಿನ ಹೊಟ್ಟೆಗೆ ಒದ್ದ ವ್ಯಕ್ತಿ!
ಮಹುಮಹಡಿ ಕಟ್ಟಡದಲ್ಲಿ ನಡೆದ ಸಭೆಯಲ್ಲಿ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, ಕಮಿಷನರ್ ಶೈಲಜಾ, ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.
ಬಿಎಸ್​ವೈ ಆ್ಯಕ್ಟೀವ್​ಗೆ ಹ್ಯಾಟ್ಸಾಫ್ ಎಂದ ಸಚಿವ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 × two =
Remember me
